
ಹೈದರಾಬಾದ್(ಆ.09): ಆಂಧ್ರ ಪ್ರದೇಶದ ವಿಜಯವಾಡದ ಹೋಟೆಲ್ ಒಂದರಲ್ಲಿ ಭಾನುವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹೋಟೆಲ್ ಕಾರ್ಪೋರೇಟ್ ಆಸ್ಪತ್ರೆಯೊಂದು ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡಲು ಬಳಸುತ್ತಿತ್ತು.
ಇನ್ನು ಲಭ್ಯವಾದ ಮಾಹಿತಿ ಅನ್ವಯ ಈ ದುರಂತದಲ್ಲಿ ಹತ್ತು ಮಂದಿ ಮೃತಪಟ್ಟಿದ್ದು, 20 ಮಂದಿಯನ್ನು ಸುರಕ್ಷಿತವಾಗಿ ಹೊರ ಕರೆ ತರಲಾಗಿದೆ. ಗಾಯಾಉಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇನ್ನು ಮೃತರ ಕುಟುಂಬಕ್ಕೆ ತಲಾ 50 ಲಕ್ಷ ಆರ್ಥಿಕ ಸಹಾಯವನ್ನೂ ಘೋಷಿಸಲಾಗಿದೆ.
"
ಲೆಬನಾನ್ನಲ್ಲಿ ಸ್ಫೋಟವಾಗಿದ್ದು 2750 ಟನ್ ಅಮೋನಿಯಂ ನೈಟ್ರೇಟ್!
ಇನ್ನು ಸುರಕ್ಷಿತವಾಗಿ ಹೊರತೆಗೆಯಲಾದ 200 ಮಂದಿಯಲ್ಲಿ 2-3 ಮಂದಿಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಇನ್ನು ಇಲ್ಲಿ ಚಿಕಿತ್ಸೆ ನಿಡುತ್ತಿದ್ದ ಆಸ್ಪತ್ರೆಯನ್ನು ಸದ್ಯ ಸರ್ಕಾರ ಸೀಲ್ ಮಾಡಿದೆ.
ಕೆಲ ದಿನದ ಹಿಂದಷ್ಟೇ ಗುಜರಾತ್ನಲ್ಲೂ ಇಂತಹುದೇ ಘಟನೆ ನಡೆದಿತ್ತು. ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡು ಎಂಟು ಮಂದಿ ಸಜೀವ ದಹನಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ