ಮಹಾರಾಷ್ಟ್ರದ ಶಿರಡಿ ಬಳಿ ಭೀಕರ ಅಪಘಾತ: 10 ಮಂದಿ ಸಾಯಿಬಾಬಾ ಭಕ್ತರ ದುರ್ಮರಣ

Published : Jan 13, 2023, 10:11 AM IST
ಮಹಾರಾಷ್ಟ್ರದ ಶಿರಡಿ ಬಳಿ ಭೀಕರ ಅಪಘಾತ: 10 ಮಂದಿ ಸಾಯಿಬಾಬಾ ಭಕ್ತರ ದುರ್ಮರಣ

ಸಾರಾಂಶ

ಮಹಾರಾಷ್ಟ್ರದ ನಾಸಿಕ್- ಶಿರಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ಅಪಘಾತ

ಶಿರಡಿ(ಜ.13):  ಲಾರಿ ಮತ್ತು ಖಾಸಗಿ ಟ್ರಾವೆಲ್ ಬಸ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 10 ಮಂದಿ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಸಿಕ್- ಶಿರಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು(ಶುಕ್ರವಾರ) ಬೆಳಗಿನ ಜಾವ 5.45 ಕ್ಕೆ ಸಂಭವಿಸಿದೆ. 

ಶಿರಡಿ ಯಿಂದ 20 ಕೀ.ಮಿ ದೂರದ ನಾಸಿಕ್- ಶಿರಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಬಸ್‌ನಲ್ಲಿ ಒಟ್ಟು 45 ಪ್ರಯಾಣಿಕರು ಪ್ರವಾಸ ಮಾಡುತ್ತಿದ್ದರು ಅಂತ ತಿಳಿದು ಬಂದಿದೆ. ಲಾರಿ ಮತ್ತು ಖಾಸಗಿ ಟ್ರಾವೆಲ್ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾ ಮ 10 ಮಂದಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಹಲವರು ಸ್ಥಿತಿ ಗಂಭೀರವಾಗಿದೆ ಅಂತ ತಿಳಿದು ಬಂದುದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.  ಮೃತರಲ್ಲಿ 7 ಪುರುಷರು ಮತ್ತು 3 ಮಹಿಳೆಯರಾಗಿದ್ದಾರೆ. ಮಹಾರಾಷ್ಟ್ರದ ಅಂಬ್ರನಾಥದಿಂದ ಶಿರಡಿ ಸಾಯಿ ಬಾಬಾ ದರ್ಶನಕ್ಕೆ ತೆರಳಿದ್ದರು. 

Kalaburagi: ಶಾಲಾ‌ ಮಕ್ಕಳಿದ್ದ‌ ಗೂಡ್ಸ್ ವಾಹನ ಪಲ್ಟಿ: 22 ಮಕ್ಕಳಿಗೆ ಗಾಯ

ಘಟನಾ ಸ್ಥಳದಲ್ಲಿ ಸ್ಥಳೀಯರು ಮತ್ತು ಶಿರಡಿ ಪೊಲೀಸರಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ಗಾಯಗೊಂಡವರನ್ನ ಸಿರಡಿ ಸಾಯಿ ಬಾಬಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..