
ನವದೆಹಲಿ(ಜು.20): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆಯಬ್ಬರ ಮುಂದುವರೆದಿದೆ. ಭಾನುವಾರ ಬೆಳಗ್ಗಿನಿಂದ ಎಗ್ಗಿಲ್ಲದೆ ಸುರಿಯುತ್ತಿರುವ ಮಳೆಗೆ ಭಾರೀ ಹಾನಿ ಸಂಭವಿಸಿದೆ. ಇಲ್ಲಿನ ಅನೇಕ ಕ್ಷೇತ್ರಗಳಿಗೆ ನೀರು ನುಗ್ಗಿದ್ದು, ಅನೇಕ ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಸದ್ಯ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರ್ ಆಗಿದ್ದು, ದೃಶ್ಯಗಳು ಎಂತಹವರನ್ನೂ ಬೆಚ್ಚಿ ಬೀಳಿಸುವಂತಿವೆ.
ಐಟಿಒ ಸಮೀಪ ಅಣ್ಣಾ ನಗರದಲ್ಲಿ ಸುರಿದ ಭಾರೀ ಮಳೆಗೆ ಮನೆಯೊಂದು ಕೊಚ್ಚಿ ಹೋಗಿದೆ. ಅದೃಷ್ಟವಶಾತ್ ಘಟನೆ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಹೀಗಾಘಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ ಬೆಳಗ್ಗಿನಿಂದ ಭಾರೀ ಮಳೆ ಸುರಿಯಲಾರಂಭಿಸಿದೆ. ಐಟಿಒ, ಮಂಟೋ ಬ್ರಿಜ್ ಸೇರಿ ಅನೇಕ ಪ್ರದೇಶಗಳು ನೀರಿನಿಂದಾವರಿಸಿಕೊಂಡಿವೆ. ಇನ್ನು ಹವಾಮಾನ ಇಲಾಖೆ ಕೂಡಾ ದೆಹಲಿಯಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯುವ ಅನುಮಾನ ವ್ಯಕ್ತಪಡಿಸಿದೆ. ಅಲ್ಲದೇ ಜನರಿಗೆ ಎಚ್ಚರಿಕರೆಯಿಂದಿರುವಂತೆ ಸೂಚಿಸಿದೆ.
ಅತ್ತ ಅಸ್ಸಾಂ, ಬಿಹಾರದಲ್ಲೂ ಮಳೆಯಿಂದ ಪ್ರವಾಹ ಉಂಟಾಗಿದೆ. ಇದರಿಂದ ಅನೇಕ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ಅತ್ತ ಅಸ್ಸಾಂನಲ್ಲಿ ಪ್ರವಾಹದಿಂದ ನೂರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.
ಒಂದೆಡೆ ಕೊರೋನಾತಂಕ ದೇಶದೆಲ್ಲೆಡೆ ಜನರನ್ನು ಭಯ ಭೀತರನ್ನಾಗಿಸಿದರೆ, ಇತ್ತ ಮಳೆ ಹಾಗೂ ಭೀಕರ ಪ್ರವಾಹ ಜನರ ಸಂಕಷ್ಟವನ್ನು ಮತ್ತಷ್ಟು ಹಚ್ಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ