ಕೊರೋನಾ ಗೆದ್ದ 107ರ ವೃದ್ಧೆ..! ಕೋವಿಡ್‌-19ನಿಂದ ಚೇತರಿಸಿದ ದೇಶದ ಅತಿ ಹಿರಿಯ ವ್ಯಕ್ತಿ

Kannadaprabha News   | Asianet News
Published : Jul 09, 2020, 12:02 PM ISTUpdated : Jul 09, 2020, 06:10 PM IST
ಕೊರೋನಾ ಗೆದ್ದ 107ರ ವೃದ್ಧೆ..! ಕೋವಿಡ್‌-19ನಿಂದ ಚೇತರಿಸಿದ ದೇಶದ ಅತಿ ಹಿರಿಯ ವ್ಯಕ್ತಿ

ಸಾರಾಂಶ

ಕೊರೋನಾ ವೈರಸ್‌ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ದೆಹಲಿಯಲ್ಲಿ 107 ವರ್ಷದ ಮುಖ್ತಾರ್‌ ಅಹ್ಮದ್‌ ಎಂಬುವರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ನವದೆಹಲಿ(ಜು.09): ಕೊರೋನಾ ವೈರಸ್‌ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ ದೆಹಲಿಯಲ್ಲಿ 107 ವರ್ಷದ ಮುಖ್ತಾರ್‌ ಅಹ್ಮದ್‌ ಎಂಬುವರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇವರು ಕೋವಿಡ್‌-19ನಿಂದ ಚೇತರಿಸಿಕೊಂಡಿಸುವ ದೇಶದ ಅತಿ ಹಿರಿಯ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಕೊರೋನಾ ಸೋಂಕು ದೃಢಪಟ್ಟಹಿನ್ನೆಲೆಯಲ್ಲಿ ಕಳೆದ ತಿಂಗಳು ದೆಹಲಿಯ ರಾಜೀವ್‌ ಗಾಂಧಿ ಸೂಪರ್‌ ಸೆಷಾಲಿಟಿ ಆಸ್ಪತ್ರೆಗೆ ಅಹ್ಮದ್‌ ದಾಖಲಾಗಿದ್ದರು.

ಏನೂ ಆಗಲ್ಲ ಕಣ್ರಪ್ಪ, ಒಂದಿಷ್ಟು ಗಟ್ಟಿ ಮನಸ್ಸು ಮಾಡ್ಕೊಳ್ಳಿ: ಕೊರೋನಾ ಮಣಿಸಿದ 96ರ ಅಜ್ಜಿ!

17 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಸದ್ಯ ಮನೆಗೆ ಹಿಂದಿರುಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಮುಂಜಾಗ್ರತಾ ದೃಷ್ಟಿಯಿಂದ ಈಗಲೂ ಮನೆಯವರಿಂದ ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಿದ್ದಾರೆ.

ಚಿತ್ರದುರ್ಗದ ಹಿರಿಯೂರಿನ ವೇದಾವತಿ ನಗರ ಬಡಾವಣೆಯ ವರ್ತಕ ಗೋವರ್ಧನ್‌ ಶೆಟ್ಟಿಅವರ ತಾಯಿಯೇ ಈ ವೃದ್ಧೆ ಗೋವಿಂದಮ್ಮ ಕೊರೋನಾ ಜಯಿಸಿದ ರಾಜ್ಯದ ಎರಡನೇ ಅತೀ ಹಿರಿಯ ಮಹಿಳೆ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದರು. ‘ಏನೂ ಆಗಲ್ಲ ಕಣ್ರಪ್ಪ, ಹುಷಾರಾಗ್ತೀರಾ. ಒಂದಿಷ್ಟುಗಟ್ಟಿಮನಸ್ಸು ಮಾಡ್ಕೊಳ್ಳಿ. ಆಸ್ಪತ್ರೆಯಲ್ಲಿ ಖುಷಿಯಾಗಿ ಇರೋದನ್ನು ಕಲೀರಿ ಎಂದಿದ್ದರು ಕೊರೋನಾ ಗೆದ್ದ ಅಜ್ಜಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?