
ಲಖನೌ(ಜು.09): ಕೇಂದ್ರ ಸರ್ಕಾರ ಬಡ ಕುಟುಂಬಗಳಿಗೆ ಮನೆ ಕಟ್ಟಿಕೊಳ್ಳಲು ನೆರವಾಗಲೆಂದು ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ಫಲಾನುಭವಿಗಳಿಗೆ 2.50 ಲಕ್ಷ ರು.ವರೆಗೆ ಸಬ್ಸಿಡಿ ಹಣ ನೀಡುತ್ತದೆ. ಆದರೆ ಉತ್ತರಪ್ರದೇಶದ ಮಹಾರಾಜ್ಗಂಜ್ ಜಿಲ್ಲೆಯ ಕೆಲ ಮಹಿಳೆಯರು ಪಿಎಂ ಆವಾಸ್ ಯೋಜನೆಯ ಹಣ ಪಡೆದು ಪ್ರೇಮಿಗಳ ಜೊತೆ ಓಡಿ ಹೋಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಜಿಲ್ಲೆಯಲ್ಲಿ 2350 ಜನ ಈ ಬಾರಿ ಯೋಜನೆಗೆ ಆಯ್ಕೆಯಾಗಿದ್ದರು. ಈ ಪೈಕಿ ಇತ್ತೀಚೆಗೆ ಮೊದಲ ಕಂತಿನ 40000 ರು. ಹಣ ಬಿಡುಗಡೆಯಾಗಿತ್ತು. ಈ ಹಣ ಖಾತೆಗೆ ಜಮೆ ಆಗುತ್ತಲೇ 11 ಮಹಿಳೆಯರು ತಮ್ಮ ತಮ್ಮ ಗಂಡಂದಿರಿಗೆ ಕೈಕೊಟ್ಟು ಪ್ರೀತಿಸಿದ ವ್ಯಕ್ತಿಗಳೊಂದಿಗೆ ಪರಾರಿಯಾಗಿದ್ದಾರೆ.
ಮದ್ವೆಯಾಗಿದ್ರೂ ಇಬ್ಬರ ಜೊತೆ ಸರಸ ಸಲ್ಲಾಪ; ಅಡ್ಡಿಯಾದ ಗಂಡನಿಗೆ ಚಟ್ಟ ಕಟ್ಟಿದ್ಳು!
ಪರಿಣಾಮ ಮನೆಗೆ ಬಂದ ಹಣದ ಜೊತೆ ಪತ್ನಿಯೂ ಕೈತಪ್ಪಿದಳು ಎಂದು ಪರಿತಪಿಸುವ ಸರದಿ ಗಂಡಂದಿರದ್ದಾಗಿದೆ. ಹೀಗಾಗಿ ಅವರೆಲ್ಲರೂ ಇದೀಗ ಅಧಿಕಾರಿಗಳಿಗೆ ದೂರು ನೀಡಿದ್ದು, ಮುಂದಿನ ಕಂತಿನ ಹಣ ಬಿಡುಗಡೆ ಮಾಡದಂತೆ ಕೋರಿಕೆ ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ