
ಮುಂಬೈ(ಜು.06): ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಕಚೇರಿಯಲ್ಲಿ ಅಧಿಕಾರಿ ಜತೆ ದುರ್ವರ್ತನೆ ತೋರಿದ 12 ಬಿಜೆಪಿ ಶಾಸಕರನ್ನು ಒಂದು ವರ್ಷದ ಅವಧಿವರೆಗೆ ಅಮಾನತು ಮಾಡಲಾಗಿದೆ.
ಮಹಾರಾಷ್ಟ್ರದ ಸಂಸದೀಯ ಸಚಿವ ಅನಿಲ್ ಪರಬ್ ಅವರು, ‘ಸೋಮವಾರ ಅಮಾನತು ಆಗಿರುವ 12 ಬಿಜೆಪಿ ಶಾಸಕರನ್ನು ಒಂದು ವರ್ಷದವರೆಗೆ ಮುಂಬೈ ಮತ್ತು ನಾಗ್ಪುರ ವಿಧಾನಸಭೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ’ ಎಂದಿದ್ದಾರೆ.
ಇದನ್ನು ತೀವ್ರವಾಗಿ ವಿರೋಧಿಸಿರುವ ವಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್, ‘ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ವಿಚಾರಗಳ ವಿಚಾರ ಸಂಬಂಧ ಸರ್ಕಾರದ ತಪ್ಪು ನಡೆಯನ್ನು ಬಯಲು ಮಾಡಿದ್ದಕ್ಕಾಗಿ, ವಿಪಕ್ಷಗಳ ಸದಸ್ಯರ ಸಂಖ್ಯೆ ಕ್ಷೀಣಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ’ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ