12 ಎನ್‌ಸಿಪಿ ಶಾಸಕರು ಮಾಸಾಂತ್ಯಕ್ಕೆ ಬಿಜೆಪಿಗೆ?

Published : Aug 11, 2020, 04:20 PM ISTUpdated : Aug 11, 2020, 05:57 PM IST
12 ಎನ್‌ಸಿಪಿ ಶಾಸಕರು ಮಾಸಾಂತ್ಯಕ್ಕೆ ಬಿಜೆಪಿಗೆ?

ಸಾರಾಂಶ

ಮಹಾರಾಷ್ಟ್ರ: 12 ಎನ್‌ಸಿಪಿ ಶಾಸಕರು ಮಾಸಾಂತ್ಯಕ್ಕೆ ಬಿಜೆಪಿಗೆ?| ಬಿಜೆಪಿಗರೇ ಬರ್ತಿದ್ದಾರೆ: ಎನ್‌ಸಿಪಿ ತಿರುಗೇಟು

ಮುಂಬೈ(ಆ.11): ಕರ್ನಾಟಕ, ಮಧ್ಯಪ್ರದೇಶ ಹಾಗೂ ರಾಜಸ್ಥಾನದ ಬಳಿಕ ಮಹಾರಾಷ್ಟ್ರ ರಾಜಕೀಯದಲ್ಲೂ ಬೃಹನ್ನಾಟಕ ಸಂಭವಿಸುವ ಸಾಧ್ಯತೆ ಇದೆ. ಆಡಳಿತಾರೂಢ ಮಿತ್ರಕೂಟದ ಎನ್‌ಸಿಪಿಯ 12 ಶಾಸಕರು ಬಿಜೆಪಿ ಜತೆ ಸಂಪರ್ಕದಲ್ಲಿದ್ದಾರೆ. ಅವರು ಆಗಸ್ಟ್‌ ಅಂತ್ಯದ ವೇಳೆಗೆ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.

ಈ ಶಾಸಕರು ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ಗುಂಪಿನವರು ಎನ್ನಲಾಗಿದೆ. ಇದೇ ಶಾಸಕರು ಕಳೆದ ವರ್ಷ ಅಜಿತ್‌ ಪವಾರ್‌ ಅವರು ಕೆಲವು ದಿನ ದೇವೇಂದ್ರ ಫಡ್ನವೀಸ್‌ ಅವರ ಜತೆ ಸೇರಿ ಸರ್ಕಾರ ರಚಿಸಿದಾಗ ಅಜಿತ್‌ ಬೆನ್ನಿಗೆ ನಿಂತಿದ್ದರು ಎಂದು ಮೂಲಗಳು ಹೇಳಿವೆ.

ಶೈಕ್ಷಣಿಕ ಸಮಾವೇಶದಲ್ಲಿಂದು ಪ್ರಧಾನಿ ಮೋದಿ ಭಾಷಣ

ಈ ಶಾಸಕರು ಉದ್ಧವ್‌ ಠಾಕ್ರೆ ಸರ್ಕಾರದ ಕಾರ್ಯನಿರ್ವಹಣೆ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂದು ಮೂಲಗಳು ಹೇಳಿವೆ.

ಬಿಜೆಪಿಯವರೇ ಎನ್‌ಸಿಪಿ ಸೇರಲಿದ್ದಾರೆ!:

ಆದರೆ ಇದು ಕೇವಲ ವದಂತಿ ಎಂದು ಎನ್‌ಸಿಪಿ ಮುಖಂಡ ಹಾಗೂ ಸಚಿವ ನವಾಬ್‌ ಮಲಿಕ್‌ ಸ್ಪಷ್ಟಪಡಿಸಿದ್ದಾರೆ. ‘12 ಎನ್‌ಸಿಪಿ ಶಾಸಕರು ಬಿಜೆಪಿ ಸೇರುವರು ಎಂಬುದು ಸುಳ್ಳು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎನ್‌ಸಿಪಿ ಬಿಟ್ಟು ಬಿಜೆಪಿ ಸೇರಿದ ಶಾಸಕರು ಅಸಂತುಷ್ಟರಾಗಿದ್ದು, ಅವರು ಶೀಘ್ರವೇ ಎನ್‌ಸಿಪಿಗೆ ಮರಳಲಿದ್ದಾರೆ’ ಎಂದು ‘ಬಾಂಬ್‌’ ಸಿಡಿಸಿದ್ದಾರೆ.

ಕಳೆದ ತಿಂಗಳಷ್ಟೇ, ಉದ್ಧವ್‌ ಠಾಕ್ರೆ ಅವರು, ‘ದಮ್ಮಿದ್ದರೆ ನಮ್ಮ ಸರ್ಕಾರ ಬೀಳಿಸಿ’ ಎಂದು ಬಿಜೆಪಿಗೆ ಸವಾಲು ಹಾಕಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!