
ಶ್ರೀನಗರ (ಆ.06): ಭಾರತದ ಗಡಿಯನ್ನು ಅಕ್ರಮವಾಗಿ ನುಸುಳಿ ವಿಧ್ವಂಸಕ ಕೃತ್ಯವೆಸಗಲು 140 ಭಯೋತ್ಪಾದಕರು ಜಮ್ಮು-ಕಾಶ್ಮೀರದ ಗಡಿಯಲ್ಲಿರುವ ಲಾಂಚ್ಪ್ಯಾಡ್ಗಳ ಬಳಿ ಕಾಯುತ್ತಿದ್ದಾರೆ ಎಂಬ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.
ಜೊತೆಗೆ ಭಾರತ ಮತ್ತು ಪಾಕಿಸ್ತಾನ ದೇಶಗಳು ಕದನ ವಿರಾಮಕ್ಕೆ ಬದ್ಧರಾಗಿರಲು ಒಪ್ಪಿದ ಹೊರತಾಗಿಯೂ, ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರ ಚಟುವಟಿಕೆಗಳು ಎಗ್ಗಿಲ್ಲದೆ ನಡೆಯುತ್ತಿವೆ ಎಂದು ಹಿರಿಯ ಭದ್ರತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಗುರುವಾರ ಮಾತನಾಡಿದ ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು, 140 ಉಗ್ರರು ಜಮ್ಮು-ಕಾಶ್ಮೀರದ ಗಡಿಯ ಲಾಂಚ್ಪ್ಯಾಡ್ಗಳಲ್ಲಿ ಕಾಯುತ್ತಿರುವುದನ್ನು ಸೇನೆ ಪತ್ತೆ ಹಚ್ಚಿದೆ. ಆದರೆ ಅವರು ಭಾರತ ನುಸುಳುವ ಯತ್ನವನ್ನು ಸೇನೆ ಹಿಮ್ಮೆಟ್ಟಿಸಲಿದೆ ಎಂಬ ಕಾರಣಕ್ಕೆ ಅಲ್ಲೇ ಉಳಿದಿದ್ದಾರೆ ಎಂದಿದ್ದಾರೆ.
ಸದ್ಯ ಪಾಕಿಸ್ತಾನ ಹಣಕಾಸು ಕ್ರಿಯಾ ಕಾರ್ಯಪಡೆ(ಎಫ್ಎಟಿಎಫ್)ಯ ಕಂದುಪಟ್ಟಿಯಲ್ಲಿದೆ. ಅಂತಾರಾಷ್ಟ್ರೀಯ ಹಣಕಾಸು ನೆರವು ಪಡೆಯಲು ಪಾಕಿಸ್ತಾನ ಈ ಪಟ್ಟಿಯಿಂದ ಹೊರಬರಬೇಕಿದೆ. ಈ ನಿಟ್ಟಿನಲ್ಲಿ ಕದನ ವಿರಾಮ ಒಪ್ಪಂದ ಪಾಲನೆ ಪಾಕಿಸ್ತಾನಕ್ಕೆ ಹೆಚ್ಚು ಮಹತ್ವದ್ದಾಗಿದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ