‘100 ಕೋಟಿ ಜನರ ಮಣಿಸಲು 15 ಕೋಟಿ ಮುಸ್ಲಿಮರು ಸಾಕು’

Kannadaprabha News   | Asianet News
Published : Feb 21, 2020, 08:53 AM IST
‘100 ಕೋಟಿ ಜನರ ಮಣಿಸಲು 15 ಕೋಟಿ ಮುಸ್ಲಿಮರು ಸಾಕು’

ಸಾರಾಂಶ

‘100 ಕೋಟಿ ಜನರ ಮಣಿಸಲು 15 ಕೋಟಿ ಮುಸ್ಲಿಮರು ಸಾಕು’ | ಬಹುಸಂಖ್ಯಾತರಿಗೆ ಎಐಎಂಐಎಂ ಮುಖಂಡ ಪಠಾಣ್‌ ಎಚ್ಚರಿಕೆ |  ಕಲಬುರಗಿಯಲ್ಲಿ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ವಿವಾದಿತ ಹೇಳಿಕೆ

ಮುಂಬೈ (ಫೆ. 21): ‘ಮುಸ್ಲಿಮರ ಜನಸಂಖ್ಯೆ ದೇಶದಲ್ಲಿ 15 ಕೋಟಿಗಿಂತ ಕಮ್ಮಿಯೇ ಇರಬಹುದು. ಆದರೆ ಅಗತ್ಯಬಿದ್ದರೆ 100 ಕೋಟಿ ಬಹುಸಂಖ್ಯಾತರಿಗೆ ತಕ್ಕ ತಿರುಗೇಟು ನೀಡಬಲ್ಲರು’ ಎಂದು ಮಹಾರಾಷ್ಟ್ರದ ಎಐಎಂಐಎಂ ಮುಖಂಡ ವಾರಿಸ್‌ ಪಠಾಣ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹೈದರಾಬಾದ್‌ ಸಂಸದ ಅಸಾದುದ್ದೀನ್‌ ಒವೈಸಿ ಅವರ ಈ ಪಕ್ಷದ ವಕ್ತಾರರೂ ಆಗಿರುವ ಪಠಾಣ್‌ ಅವರು ಕರ್ನಾಟಕದ ಕಲಬುರಗಿಯಲ್ಲಿ ಫೆಬ್ರವರಿ 15ರಂದು ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ಈ ಮಾತುಗಳನ್ನಾಡಿದ್ದಾರೆ. ಈ ಭಾಷಣದ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ಪಾಕ್‌ಗೆ ಹೋಗಿ ಭಾರತ್‌ ಮಾತಾ ಕೀ ಜೈ ಎಂದಿದ್ರಂತೆ ಓವೈಸಿ..!

‘ಅವರು (ಬಹುಸಂಖ್ಯಾತರು), ನೀವು ಮುಸ್ಲಿಂ ಮಹಿಳೆಯರನ್ನು ಮುಂದೆ ಇರಿಸಿಕೊಂಡು ಹೋರಾಡುತ್ತಿದ್ದೀರಿ ಎಂದು ಹೇಳುತ್ತಿದ್ದಾರೆ. ಆದರೆ ಒಂದು ತಿಳಿಯಿರಿ. ಈಗ ಕೇವಲ ಸಿಂಹಿಣಿಯರು ಹೊರಬಂದಿದ್ದಾರೆ. ಅದಕ್ಕೇ ನೀವು ಬೆವರುತ್ತಿದ್ದೀರಿ. ಎಲ್ಲರೂ ಹೊರಬಂದರೆ ಏನಾಗುತ್ತದೆ ಎಂಬುದನ್ನು ಊಹಿಸಿಕೊಳ್ಳಿ. ನಾವು ಕೇವಲ 15 ಕೋಟಿ ಇದ್ದೇವೆ. ಆದರೆ ಈ ಸಂಖ್ಯೆ 100 ಕೋಟಿ ಬಹುಸಂಖ್ಯಾತರಿಗಿಂತ ದೊಡ್ಡ ಪಡೆಯಾಗಬಲ್ಲದು’ ಎಂದು ಪಠಾಣ್‌ ಹೇಳಿದರು.

‘ಈಗ ಕೇವಲ ಮುಸ್ಲಿಂ ಮಹಿಳೆಯರು ದೇಶವನ್ನು ನಡುಗಿಸಿದ್ದಾರೆ. ಇಡೀ ಸಮುದಾಯ ಒಟ್ಟಾಗಿ ಬಂದರೆ, ಅದರ ಪರಿಣಾಮ ಇನ್ನೂ ತೀವ್ರವಾಗಿರುತ್ತದೆ’ ಎಂದೂ ಅವರು ಎಚ್ಚರಿಸಿದರು. ‘ಅಲ್ಪಸಂಖ್ಯಾತರು ನಿಮ್ಮ (ಬಹುಸಂಖ್ಯಾತರು) ಸ್ವಾತಂತ್ರ್ಯವನ್ನು ಕಸಿಯುವಷ್ಟುಶಕ್ತಿ ಹೊಂದಿದೆ’ ಎಂದೂ ಅವರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈಲಿನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?