ಲಾರಿ ಹರಿದು 15 ವಲಸೆ ಕಾರ್ಮಿಕರ ಸಾವು!

Published : Jan 20, 2021, 08:09 AM IST
ಲಾರಿ ಹರಿದು 15 ವಲಸೆ ಕಾರ್ಮಿಕರ ಸಾವು!

ಸಾರಾಂಶ

ಲಾರಿ ಹರಿದು 15 ವಲಸೆ ಕಾರ್ಮಿಕರ ಸಾವು| ಗುಜರಾತ್‌ನ ಸೂರತ್‌ನಲ್ಲೊಂದು ಹೃದಯವಿದ್ರಾವಕ ಘಟನೆ| ರಸ್ತೆ ಬದಿ ಪಾದಚಾರಿ ಮಾರ್ಗದಲ್ಲಿ ಮಲಗಿದ್ದ ಕಾರ್ಮಿಕರು

ಸೂರತ್‌(ಜ.20): ಚಾಲಕನ ನಿಯಂತ್ರಣದ ತಪ್ಪಿ ಲಾರಿಯೊಂದು ಮೈಮೇಲೆ ಹರಿದ ಪರಿಣಾಮ 14 ವಲಸೆ ಕಾರ್ಮಿಕರು ಮತ್ತು 1 ವರ್ಷದ ಮಗು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಗುಜರಾತ್‌ನ ಸೂರತ್‌ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಲಾರಿ ಚಾಲಕ ಮತ್ತು ಸಹಾಯಕ ಕೂಡಾ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ, ಗುಜರಾತ್‌ ಸಿಎಂ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಜೊತೆಗೆ ಮಡಿದವರ ಕುಟುಂಬ ಸದಸ್ಯರಿಗೆ ಪ್ರಧಾನಿ ಮೋದಿ ತಲಾ 2 ಲಕ್ಷ ರು. ಪರಿಹಾರ ಮತ್ತು ಗಾಯಾಳುಗಳು ಕುಟುಂಬಕ್ಕೆ ತಲಾ 50000 ರು. ಪರಿಹಾರ ಘೋಷಿಸಿದ್ದಾರೆ. ಮಡಿದವರಲ್ಲಿ ಒಬ್ಬರನ್ನು ಹೊರತುಪಡಿಸಿ ಉಳಿದವರೆಲ್ಲರೂ ರಾಜಸ್ಥಾನ ಮೂಲದವರು.

ಏನಾಯ್ತು?:

ವಲಸೆ ಕಾರ್ಮಿಕರ ತಂಡವೊಂದು ಸೂರತ್‌ನಿಂದ 60 ಕಿ.ಮೀ ದೂರದ ಕೊಸಂಬ ಎಂಬ ಹಳ್ಳಿಯ ಪಾದಚಾರಿ ಮಾರ್ಗದಲ್ಲಿ ಮಲಗಿತ್ತು. ಕಾರ್ಮಿಕರು ಮಲಗಿದ್ದ ಪಕ್ಕದ ರಸ್ತೆಯಲ್ಲೇ ಡಂಪರ್‌ ಟ್ರಕ್ಕೊಂದು ಕಿಮ್‌ನಿಂದ ಮಾಂಡ್ವಿಗೆ ಸಂಚಾರ ಬೆಳೆಸುತ್ತಿತ್ತು. ಅದೇ ಸಮಯದಲ್ಲಿ ಟ್ರಕ್‌ಗೆ ವಿರುದ್ಧ ದಿಕ್ಕಿನಲ್ಲಿ ಕಬ್ಬು ತುಂಬಿಕೊಂಡಿದ್ದ ಟ್ರ್ಯಾಕ್ಟರ್‌ ಬರುತ್ತಿತ್ತು. ಈ ನಡುವೆ ಕಬ್ಬಿನ ಜಲ್ಲೆಗಳ ಟ್ರ್ಯಾಕ್ಟರ್‌ನಿಂದ ಹೊರಗೆ ಚಾಚಿಕೊಂಡ ಪರಿಣಾಮ, ಅದು ಲಾರಿಗೆ ಬಡಿದಿದೆ. ಪರಿಣಾಮ ಲಾರಿಯ ಮುಂಭಾಗದ ಗಾಜು ಒಡೆದು, ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಲಾರಿ ಸೀದಾ ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ಹರಿದಿದೆ. ಘಟನೆಯ ತೀವ್ರತೆಗೆ 12 ಜನ ಸ್ಥಳದಲ್ಲೇ ಸಾವನ್ನಪ್ಪಿದರೆ, ಉಳಿದ ಮೂವರು ಆಸ್ಪತ್ರೆಯಲ್ಲಿ ನಿಧನರಾದರು.

ಮೃತರಲ್ಲಿ ಓರ್ವ ಮಧ್ಯಪ್ರದೇಶದ ಯುವಕ ಮತ್ತು 13 ಜನ ಗುಜರಾತ್‌ ಮೂಲದ ವ್ಯಕ್ತಿಗಳು ಸೇರಿದ್ದಾರೆ. ಅಲ್ಲದೆ ಸಾವನ್ನಪ್ಪಿದವರಲ್ಲಿ 1 ವರ್ಷದ ಒಂದು ಮಗು ಮತ್ತು 8 ಮಹಿಳೆಯರು ಸೇರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

18 ದಿನದಲ್ಲಿ 10 ಲಕ್ಷ ಪ್ರಯಾಣಿಕರ ಇಂಡಿಗೋ ಟಿಕೆಟ್‌ ರದ್ದು
ಬೆಂಗ್ಳೂರಲ್ಲಿ ಸಿ-130 ವಿಮಾನ ವಿರ್ವಹಣಾ ಕೇಂದ್ರಕ್ಕೆ ಶಂಕು