ಬಾಡಿಗೆ ಕಟ್ಟಿ ಇಲ್ಲ ಜಾಗ ಖಾಲಿ ಮಾಡಿ: ತಮಿಳುನಾಡಿನ ಒಂದೇ ಗ್ರಾಮದ 150 ಕುಟುಂಬಗಳಿಗೆ ವಕ್ಫ್‌ ನೋಟಿಸ್

Published : Apr 16, 2025, 08:40 AM ISTUpdated : Apr 16, 2025, 08:42 AM IST
 ಬಾಡಿಗೆ ಕಟ್ಟಿ ಇಲ್ಲ ಜಾಗ ಖಾಲಿ ಮಾಡಿ:  ತಮಿಳುನಾಡಿನ ಒಂದೇ ಗ್ರಾಮದ 150 ಕುಟುಂಬಗಳಿಗೆ ವಕ್ಫ್‌ ನೋಟಿಸ್

ಸಾರಾಂಶ

ತಮಿಳುನಾಡಿನ ಕಟ್ಟುಕೊಳ್ಳೈ ಗ್ರಾಮದ 150 ಕುಟುಂಬಗಳಿಗೆ ವಕ್ಫ್‌ ಮಂಡಳಿ ನೋಟಿಸ್‌ ನೀಡಿದ್ದು, ಇಡೀ ಗ್ರಾಮದ ಆಸ್ತಿ ದರ್ಗಾದ ಆಸ್ತಿ ಎಂದಿದೆ. ನಾಲ್ಕು ತಲೆಮಾರುಗಳಿಂದ ವಾಸಿಸುತ್ತಿರುವ ಗ್ರಾಮಸ್ಥರು ಬಾಡಿಗೆ ಕಟ್ಟಬೇಕು ಇಲ್ಲವೇ ಜಾಗ ಖಾಲಿ ಮಾಡಬೇಕೆಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಚೆನ್ನೈ: ಕೇಂದ್ರ ಸರ್ಕಾರದ ವಕ್ಫ್‌ ತಿದ್ದುಪಡಿ ಕಾಯ್ದೆಗೆ ಅಪಸ್ವರ ಎತ್ತಿದ್ದ ತಮಿಳುನಾಡಿನಲ್ಲಿ ಇದೀಗ ಒಂದೇ ಗ್ರಾಮದ 150 ಕುಟುಂಬಗಳಿಗೆ ವಕ್ಫ್‌ ಮಂಡಳಿ ನೋಟಿಸ್‌ ನೀಡಿದ್ದು, ಇಡೀ ಗ್ರಾಮದ ಆಸ್ತಿ ದರ್ಗಾದ ಆಸ್ತಿ ಎಂದಿದ್ದು, ಬಾಡಿಗೆ ಕಟ್ಟಿ, ಇಲ್ಲವೇ ಜಾಗ ಖಾಲಿ ಮಾಡಿ ಎಂದಿದೆ.

ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಕಟ್ಟುಕೊಳ್ಳೈ ಗ್ರಾಮದ 150 ಕುಟುಂಬಗಳಿಗೆ ಇತ್ತೀಚೆಗೆ ವಕ್ಫ್‌ ಮಂಡಳಿ ನೋಟಿಸ್‌ ನೀಡಿದೆ. ಎಫ್‌. ಸೈಯದ್‌ ಸತ್ತಮ್ ಎಂಬುವವರು ನೋಟಿಸ್‌ ನೀಡಿದ್ದಾರೆ. ಅದರಲ್ಲಿ ಸ್ಥಳೀಯ ಇಡೀ ಗ್ರಾಮ ದರ್ಗಾಗೆ ಸೇರಿದ ಜಾಗವಾಗಿದೆ. ಇಲ್ಲಿ ನಿರ್ಮಾಣವಾಗಿರುವ ಮನೆಗಳು ಅತಿಕ್ರಮಣವಾಗಿದೆ. ಹೀಗಾಗಿ ಗ್ರಾಮಸ್ಥರು ವಕ್ಫ್ ನಿಯಮಗಳನ್ನು ಪಾಲಿಸಬೇಕು. ಜಾಗಕ್ಕೆ ಬಾಡಿಗೆ ಕಟ್ಟಬೇಕು. ಇಲ್ಲದಿದ್ದರೆ ಜಾಗ ಖಾಲಿ ಮಾಡಬೇಕು. ಇನ್ನು ಎರಡು ನೋಟಿಸ್‌ ನೀಡುತ್ತೇವೆ. ಪ್ರತಿಕ್ರಿಯೆ ನೀಡದಿದ್ದಲ್ಲಿ ಹೈಕೋರ್ಟ್ ಮೊರೆ ಹೋಗುವುದಾಗಿ ಹೇಳಿದ್ದಾರೆ.

ಗ್ರಾಮಸ್ಥರೇ ನೀವು ಇರಬೇಕಾದರೆ ವಕ್ಫ್‌ಗೆ ಬಾಡಿಗೆ ಪಾವತಿಸಿ, ಕಾಂಗ್ರೆಸ್ ನಾಯಕನ ವಿವಾದ

ಸೈಯದ್‌ ಆ ದರ್ಗಾವನ್ನು ನೋಡಿಕೊಳ್ಳುತ್ತಿದ್ದು ಅವರ ಪ್ರಕಾರ 1954ರಿಂದಲೂ ಆ ಜಾಗ ವಕ್ಫ್‌ ಮಂಡಳಿಯದ್ದಾಗಿತ್ತು. ಅಲ್ಲದೇ ಇದನ್ನು ಸಾಬೀತು ಪಡಿಸಲು ತಮ್ಮ ಬಳಿ ದಾಖಲೆ ಇರುವುದಾಗಿ ಹೇಳಿದ್ದಾರೆ. ಹಿಂದೆ ತಂದೆ ಈ ಜಾಗ ನೋಡಿಕೊಳ್ಳುತ್ತಿದ್ದರು. ಅವರಿಗೆ ಶಿಕ್ಷಣವಿಲ್ಲದ ಕಾರಣ ಬಾಡಿಗೆ ಪಡೆಯುತ್ತಿರಲಿಲ್ಲ. ಆದರೆ ಇದೀಗ ಬಾಡಿಗೆ ಸಂಗ್ರಹಕ್ಕೆ ನೋಟಿಸ್‌ ನೀಡುತ್ತಿರುವುದಾಗಿ ಹೇಳಿದ್ದಾರೆ. ಈ ನೋಟಿಸ್‌ನಿಂದ ಕಟ್ಟುಕೊಳ್ಳೈ ಗ್ರಾಮದ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೇ ಇದೇ ಜಾಗದಲ್ಲಿ ನಾಲ್ಕು ತಲೆಮಾರುಗಳಿಂದ ಕುಟುಂಬಗಳು ವಾಸಿಸುತ್ತಿವೆ. ಈ ಭೂಮಿಯನ್ನು ನಮ್ಮದೇ ಎಂದು ಭಾವಿಸಿದ್ದೇವೆ. ಆದರೆ ಇದೀಗ ಜಾಗಕ್ಕೆ ಬಾಡಿಗೆ ಕೇಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಗತ್ಯ ದಾಖಲೆಗಳನ್ನು ಹೊಂದಿದ್ದರೂ, ಪಂಚಾಯತ್‌ ತೆರಿಗೆಗಳನ್ನು ಪಾವತಿಸಿದ್ದರೂ ಸಹ ನೋಟಿಸ್‌ ನೀಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇದರಿಂದ ಮನೆ ಕಳೆದುಕೊಳ್ಳುವ ಭೀತಿಯಲ್ಲಿ ಕುಟುಂಬಗಳಿದ್ದು, ಅಧಿಕೃತ ಹಕ್ಕು ಪತ್ರ ನೀಡುವಂತೆ ಜಿಲ್ಲಾಧಿಕಾರಿ ಆಗ್ರಹಿಸಿದ್ದಾರೆ.

ಒಮ್ಮೆ ವಕ್ಫ್‌ ಎಂದಾದರೆ, ಅದು ಶಾಶ್ವತವಾಗಿ ವಕ್ಫ್‌: ತಮಿಳುನಾಡು ಪ್ರಕರಣದ ಬಗ್ಗೆ ಕಾಂಗ್ರೆಸ್‌ ಶಾಸಕನ ಪ್ರತಿಕ್ರಿಯೆ!

ತೆರವುಗೊಳಿಸಲ್ಲ: ಶಾಸಕ
ಇನ್ನು ಈ ಸಂಬಂಧ ಕಾಂಗ್ರೆಸ್‌ ಶಾಸಕ ಹಸನ್ ಮೌಲಾನಾ ಪ್ರತಿಕ್ರಿಯಿಸಿದ್ದು, ಈ ಗ್ರಾಮದಲ್ಲಿ ವಾಸಿಸುತ್ತಿರುವ ಯಾರೊಬ್ಬರನ್ನು ತೆರವುಗೊಳಿಸುವುದಿಲ್ಲ. ವಕ್ಫ್‌ ಮಂಡಳಿಯು ಅಗತ್ಯ ದಾಖಲೆಗಳನ್ನು ನೀಡಿ ವಕ್ಫ್ ಆಸ್ತಿ ಎಂದು ಸಾಬೀತು ಪಡಿಸಿದರೆ ಗ್ರಾಮಸ್ಥರು ವಕ್ಫ್‌ ಮಂಡಳಿಗೆ ಬಾಡಿಗೆ ಕಟ್ಟಬೇಕು. ಒಮ್ಮೆ ವಕ್ಫ್‌ ಆಸ್ತಿ ಆದರೆ ಯಾವಾಗಲೂ ವಕ್ಫ್‌ ಆಸ್ತಿ ಆಗಿ ಉಳಿಯುತ್ತದೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Viral Video: ಮಾಜಿ ಸಿಜೆಐ ಬಿಆರ್‌ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್‌ ಕಿಶೋರ್‌ಗೆ ಕೋರ್ಟ್‌ನಲ್ಲೇ ಚಪ್ಪಲಿಯಿಂದ ಹಲ್ಲೆ!
ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಕೋಕಾ ಕೋಲಾ ಕಂಪನಿ ಚಾರ್ಟೆಡ್ ಅಕೌಂಟೆಂಟ್ ಹಠಾತ್ ಸಾವು