
ನವದೆಹಲಿ: ಪ್ರತಿ ವರ್ಷ ಜ.26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಇತಿಹಾಸದಲ್ಲೇ ಮೊದಲ ಬಾರಿಗೆ ರೈತ ದಂಪತಿಗಳನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ. ಕರ್ತವ್ಯ ಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಈ ಬಾರಿ 1,500 ರೈತ ದಂಪತಿಗಳನ್ನು ದೇಶದ ವಿವಿಧ ಭಾಗಗಳಿಂದ ಆರಿಸಿ ಆಹ್ವಾನ ನೀಡಲಾಗಿದೆ. ಇದರಲ್ಲಿ ವಿವಿಧ ರೈತ ಉತ್ಪಾದಕರ ಸಂಘದ ಪ್ರತಿನಿಧಿಗಳು ಮತ್ತು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳು ಮತ್ತು ಸರ್ಕಾರದ ವಿವಿಧ ಸಣ್ಣ ನೀರಾವರಿ ಯೋಜನೆಯ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ.
ಇವರಿಗೆ ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ ಕಾರ್ಯಕ್ರಮದ ನಂತರ ಭೋಜನಕೂಟವನ್ನೂ ಏರ್ಪಡಿಸಿದ್ದಾರೆ. ಕಳೆದ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೂ 500 ರೈತರನ್ನು ವಿಶೇಷ ಆಹ್ವಾನಿತರಾಗಿ ಆಯ್ಕೆ ಮಾಡಲಾಗಿತ್ತು.
ಉದ್ಯೋಗ ಕಡಿತ ಸುಳಿವು ನೀಡಿದ ಗೂಗಲ್ನ ಪಿಚೈ
ಕ್ಯಾಲಿಫೋರ್ನಿಯಾ: ಈಗಾಗಲೇ ಸಾವಿರಾರು ಉದ್ಯೋಗಿಗಳ ವಜಾ ಮಾಡಿರುವ ಸರ್ಚ್ ಇಂಜಿನ್ ಗೂಗಲ್ 2024ರಲ್ಲಿ ಮತ್ತೆ ಅನೇಕ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕುವ ಸಾಧ್ಯತೆ ಕುರಿತು ಗೂಗಲ್ ಸಿಇಒ ಆಗಿರುವ ಭಾರತೀಯ ಸುಂದರ್ ಪಿಜೈ ಸುಳಿವು ನೀಡಿದ್ದಾರೆ. 'ನಾವು ಮಹತ್ವಾಕಾಂಕ್ಷೆಯ ಗುರಿಗಳನ್ನು ಹೊಂದಿದ್ದೇವೆ. ಈ ವರ್ಷ ಪ್ರಮುಖ ಯೋಜನೆಯಲ್ಲಿ ಹೂಡಿಕೆ ಮಾಡುತ್ತೇವೆ. ವಾಸ್ತವವೆಂದರೆ : ಈ ಹೂಡಿಕೆಯ ಸಾಮರ್ಥ್ಯ ಸೃಷ್ಟಿಸಲು, ನಾವು ಕಠಿಣ ಆಯ್ಕೆಗಳನ್ನು ಮಾಡಬೇಕಾಗಿದೆ' ಎಂದು ಸುಂದರ್ ಹೇಳಿದ್ದಾರೆ. ಹೀಗಾಗಿ ವೆಚ್ಚ ಕಡಿತದ ಮೂಲಕ ಹೂಡಿಕೆ ಪ್ರಮಾಣ ಹೆಚ್ಚಿಸಲು ಉದ್ಯೋಗಿಗಳನ್ನು ಗೂಗಲ್ ಶೀಘ್ರ ವಜಾ ಮಾಡಲಿದೆ ಎಂದು ವರದಿಯಾಗಿದೆ.
Kartavya Path Jamun Trees: ದೆಹಲಿಯ ಕರ್ತವ್ಯಪಥದಲ್ಲಿ ನೇರಳೆ ಹಣ್ಣು ಕೀಳಲು ಟೆಂಡರ್!
ನೀರಿನ ಕೊರತೆ: ಪನಾಮ ಕಾಲುವೆಯಲ್ಲಿ ದೈನಂದಿನ ಹಡಗು ಸಂಚಾರ 24ಕ್ಕಿಳಿಕೆ
ಪನಾಮ ನಗರ: ಕಳೆದ ವರ್ಷ ಮಳೆಯ ಕೊರತೆಯಿಂದ ಉಂಟಾದ ಬರಗಾಲದಿಂದಾಗಿ ವಿಶ್ವದ ಪ್ರಮುಖ ವ್ಯಾಪಾರ ಮಾರ್ಗವಾಗಿರುವ ಪನಾಮ ಕಾಲುವೆಯಲ್ಲಿ ನೀರಿನ ಮಟ್ಟ ಕುಸಿತಗೊಂಡಿದೆ. ಹೀಗಾಗಿ ಅಲ್ಲಿ ಹಡಗುಗಳ ಸಂಚಾರದ ಪ್ರಮಾಣವನ್ನು ಕಡಿತಗೊಳಿಸಲಾಗಿದ್ದು ನಿತ್ಯ 24 ಹಡಗಿಗೆ ಮಾತ್ರ ಕ್ರಾಸಿಂಗ್ಗೆ ಅವಕಾಶ ನೀಡಲಾಗಿದೆ. ಇದರಿಂದ ಆರ್ಥಿಕತೆಗೆ ದೊಡ್ಡ ಪೆಟ್ಟು ಬೀಳಲಿದೆ. ಕೆರಿಬಿಯನ್ ಸಮುದ್ರ ಮತ್ತು ಫೆಸಿಫಿಕ್ ಸಾಗರವನ್ನು ಸಂಪರ್ಕಿಸುವ ಪನಾಮ ಕಾಲುವೆಯು ಸರಕು ಸಾಗಣೆ ಮಾಡುವ ಹಡಗುಗಳ 50 ಮೈಲಿ ಉದ್ದದ ಕಾಲುವೆಯಾಗಿದ್ದು ಇದು ಜಗತ್ತಿನ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ.
ಗಣರಾಜ್ಯೋತ್ಸವ ಪರೇಡ್ನಲ್ಲಿ ಮೊದಲ ಬಾರಿಗೆ ಮಹಿಳೆಯರಿಂದಲೇ ಪಥಸಂಚಲನ ನಡೆಸಲು ನಿರ್ಧಾರ
ಸ್ನೇಹಿತನ ಅಮಾನತಿಗೆ ಬೇಸರ, ಪ್ರೊಫೆಸರ್ಗೆ ವಿದ್ಯಾರ್ಥಿ ಚಾಕು ಇರಿತ
ಕೊಚ್ಚಿ: ವಿದ್ಯಾರ್ಥಿಯೊಬ್ಬ ತನ್ನ ಕಾಲೇಜಿನ ಪ್ರಾಧ್ಯಾಪಕರಿಗೆ ಹಿಂದಿನಿಂದ ಚಾಕುವಿನಿಂದ ಇರಿದು ಪರಾರಿಯಾದ ಆಘಾತಕಾರಿ ಘಟನೆ ನಗರದ ಮಹಾರಾಜ ಕಾಲೇಜಿನಲ್ಲಿ ನಡೆದಿದೆ. ಕಾಲೇಜಿನ ಸಹ ಪ್ರಾಧ್ಯಾಪಕ ಪ್ರೊ. ನಿಜಾಮುದ್ದೀನ್ ಬಳಿ ಮೊಹಮ್ಮದ್ ರಶೀದ್ ಎಂಬ ವಿದ್ಯಾರ್ಥಿಯು, ತನ್ನ ಸ್ನೇಹಿತನ ಅಮಾನತು ಕುರಿತು ವಾಗ್ವಾದ ನಡೆಸಿದ್ದಾನೆ. ವಾಗ್ವಾದದ ಬಳಿಕ ಪ್ರಾಧ್ಯಾಪಕರಿಗೆ ಚಾಕುವಿನಿಂದ ಇರಿದು ಪರಾರಿ ಆಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನಿಜಾ ಮುದ್ದೀನ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ರಶೀದ್ ಪತ್ತೆಗೆ ಬಲೆ ಬೀಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ