ಜಾರ್ಖಂಡ್‌ನಲ್ಲಿ 16 ನಕ್ಸಲರ ಹತ್ಯೆ- ಕೋಟಿ ಇನಾಮು ಹೊಂದಿದ್ದ ಅನಲ್‌ ಫಿನಿಶ್‌

Kannadaprabha News   | Kannada Prabha
Published : Jan 23, 2026, 05:42 AM IST
NAXAL

ಸಾರಾಂಶ

ಜಾರ್ಖಂಡ್‌ನಲ್ಲಿ ಮಹತ್ವದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆ ಸಿಬ್ಬಂದಿಯು, ವಿವಿಧ ತನಿಖಾ ಸಂಸ್ಥೆಗಳಿಂದ 2.35 ಕೋಟಿ ರು. ಇನಾಮು ಹೊಂದಿದ್ದ ಹಾಗೂ 149 ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ನಕ್ಸಲ್‌ ಅನಲ್ ದಾ ಸೇರಿ 15 ಮಾವೋವಾದಿಗಳನ್ನು ಹತ್ಯೆ ಮಾಡಿದ್ದಾರೆ.

ಚೈಬಾಸಾ: ಜಾರ್ಖಂಡ್‌ನಲ್ಲಿ ಮಹತ್ವದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆ ಸಿಬ್ಬಂದಿಯು, ವಿವಿಧ ತನಿಖಾ ಸಂಸ್ಥೆಗಳಿಂದ 2.35 ಕೋಟಿ ರು. ಇನಾಮು ಹೊಂದಿದ್ದ ಹಾಗೂ 149 ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ನಕ್ಸಲ್‌ ಅನಲ್ ದಾ ಸೇರಿ 15 ಮಾವೋವಾದಿಗಳನ್ನು ಹತ್ಯೆ ಮಾಡಿದ್ದಾರೆ.

ಸಾರಂದ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಾಳಗ

ಜಾರ್ಖಂಡ್‌ನ ಪಶ್ಚಿಮ ಸಿಂಗಭೂಮ್‌ ಜಿಲ್ಲೆಯ ಸಾರಂದ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಸಿಆರ್‌ಪಿಎಫ್‌ನ ಕೋಬ್ರಾ ಪಡೆ ಕಮಾಂಡೋಗಳು ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ. ನಕ್ಸಲರನ್ನು ಹೆಡೆಮುರಿ ಕಟ್ಟಲು ನಡೆದ ಈ ಮಹತ್ವದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಯ 1500 ಮಂದಿ ಸಿಬ್ಬಂದಿ ಭಾಗಿಯಾಗಿದ್ದರು ಎಂದು ಸರ್ಕಾರ ಹೇಳಿದೆ.

ಕೋಟಿ ಇನಾಮು ಹೊಂದಿದ್ದ ಅನಲ್‌:

ಭದ್ರತಾ ಪಡೆ ಗುಂಡಿಗೆ ಕುಖ್ಯಾತ ನಕ್ಸಲ್‌, 2.35 ಕೋಟಿ ರು. ಇನಾಮು ಹೊಂದಿದ್ದ ಪತಿರಾಮ್‌ ಮಾಂಝಿ ಅಲಿಯಾಸ್‌ ಅನಲ್‌ ದಾ ಬಲಿಯಾಗಿದ್ದಾನೆ. ಈತ 1987ರಿಂದ ಮಾವೋವಾದಿಗಳ ಪ್ರಬಲ ನಾಯಕನಾಗಿ ಗುರುತಿಸಿಕೊಂಡಿದ್ದ. 2 ದಶಕಗಳಿಗೂ ಹೆಚ್ಚು ಕಾಲದಿಂದ ನಕ್ಸಲ್‌ ಚಟುವಟಿಕೆಯಲ್ಲಿ ತೊಡಗಿದ್ದ. ಭದ್ರತಾ ಪಡೆ ಮೇಲಿನ ದಾಳಿ, ಐಇಡಿ ಸ್ಫೋಟ, ಸುಲಿಗೆ, ಬೆದರಿಕೆ ಸೇರಿ ಹಲವಾರು ಕ್ರಿಮಿನಲ್‌ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭೋಜಶಾಲಾ : ಹಿಂದು, ಮುಸ್ಲಿಂ ಧರ್ಮೀಯರಿಗೆ ಪ್ರಾರ್ಥನೆಗೆ ಅಸ್ತು
ಆಂಧ್ರದಲ್ಲೂ ಮಕ್ಕಳ ಸಾಮಾಜಿಕ ಮಾಧ್ಯಮ ಬಳಕೆಗೆ ನಿಷೇಧ?