
ಮುಂಬೈ(ಏ.08): ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಮಾತೋಶ್ರೀ ನಿವಾಸದ ಸಮೀಪದ ಚಹಾ ವ್ಯಾಪಾರಿಗೆ ಕೊರೋನಾ ದೃಢಪಟ್ಟಿದೆ. ಉದ್ಧವ್ ಠಾಕ್ರೆ ಅವರ ಭದ್ರತಾ ತಂಡದ 160 ಸದಸ್ಯರನ್ನು ಪೂರ್ವ ಬಾಂದ್ರಾದಲ್ಲಿ ಕ್ವಾರಂಟೈನ್ಗೆ ಗುರಿಪಡಿಸಲಾಗಿದೆ.
ಅವರಿಂದ ಮಾದರಿಗಳನ್ನು ಸಂಗ್ರಹಿಸಿ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಮಾತೋಶ್ರೀ ನಿವಾಸಕ್ಕೆ ನಿಯೋಜಿಸಲಾಗಿದ್ದ ಎಲ್ಲಾ ಸಿಬ್ಬಂದಿಗಳನ್ನು ಬದಲಾಯಿಸಲಾಗಿದೆ.
ಈ ಮಧ್ಯೆ ಉದ್ಧವ್ ಠಾಕ್ರೆ ಚಾಲಕನನ್ನು ಬಿಟ್ಟು ತಾವೇ ಕಾರು ಚಲಾಯಿಸಿ ಗಮನಸೆಳೆದಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ