ಭಾರತದಲ್ಲಿ ಸೀಟ್‌ ಬೆಲ್ಟ್‌ ಧರಿಸದೇ 16,397, ಹೆಲ್ಮೆಟ್‌ ಧರಿಸದೇ 47,000 ಸಾವು

Published : Dec 30, 2022, 12:41 PM IST
ಭಾರತದಲ್ಲಿ ಸೀಟ್‌ ಬೆಲ್ಟ್‌ ಧರಿಸದೇ 16,397, ಹೆಲ್ಮೆಟ್‌ ಧರಿಸದೇ 47,000 ಸಾವು

ಸಾರಾಂಶ

ಕಳೆದ ಸೆಪ್ಟೆಂಬರ್‌ನಲ್ಲಿ ಮಹಾರಾಷ್ಟ್ರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಟಾಟಾ ಸನ್ಸ್‌ ಮಾಜಿ ಮುಖ್ಯಸ್ಥ ಸೈರಸ್‌ ಮಿಸ್ತ್ರಿ ಕೂಡಾ ಇದೇ ರೀತಿ ಕಾರಿನಲ್ಲಿ ಸೀಟ್‌ಬೆಲ್ಟ್‌ ಧರಿಸದ ಕಾರಣದಿಂದಾಗಿಯೇ ಪ್ರಾಣ ಕಳೆದುಕೊಂಡಿದ್ದರು.

ನವದೆಹಲಿ(ಡಿ.30):  ಕಳೆದ ವರ್ಷ ದೇಶಾದ್ಯಂತ 4.12 ಲಕ್ಷ ರಸ್ತೆ ಅಪಘಾತ ಸಂಭವಿಸಿದ್ದು ಇದರಲ್ಲಿ 1.53 ಲಕ್ಷ ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಹೆಲ್ಮೆಟ್‌ ಧರಿಸದೇ 46593 ಮತ್ತು ಸೀಟ್‌ ಬೆಲ್ಟ್‌ ಧರಿಸದೆ 16397 ಜನರು ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ವರದಿ ತಿಳಿಸಿದೆ. ಇದು ವಾಹನ ಪ್ರಯಾಣದ ವೇಳೆ ಕಡ್ಡಾಯ ಸಂಚಾರ ನಿಯಮಗಳನ್ನು ಪಾಲಿಸುವುದರ ಅಗತ್ಯವನ್ನು ಮತ್ತೊಮ್ಮೆ ಸಾರಿಹೇಳಿದೆ.

ಕಳೆದ ಸೆಪ್ಟೆಂಬರ್‌ನಲ್ಲಿ ಮಹಾರಾಷ್ಟ್ರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಟಾಟಾ ಸನ್ಸ್‌ ಮಾಜಿ ಮುಖ್ಯಸ್ಥ ಸೈರಸ್‌ ಮಿಸ್ತ್ರಿ ಕೂಡಾ ಇದೇ ರೀತಿ ಕಾರಿನಲ್ಲಿ ಸೀಟ್‌ಬೆಲ್ಟ್‌ ಧರಿಸದ ಕಾರಣದಿಂದಾಗಿಯೇ ಪ್ರಾಣ ಕಳೆದುಕೊಂಡಿದ್ದರು.
ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಬಿಡುಗಡೆ ಮಾಡಿರುವ ‘ಭಾರತದಲ್ಲಿನ ರಸ್ತೆ ಅಪಘಾತ- 2021’ ವರದಿ ಅನ್ವಯ ಕಳೆದ ವರ್ಷ ದೇಶದಲ್ಲಿ ಒಟ್ಟು 4,12,432 ಅಪಘಾತಗಳು ಸಂಭವಿಸಿವೆ. ಇದರಲ್ಲಿ 1,53,972 ಜನರು ಸಾವನ್ನಪ್ಪಿದ್ದು, 3,84,448 ಜನರು ಗಾಯಗೊಂಡಿದ್ದಾರೆ.

ರಸ್ತೆ ಅಪಘಾತದಲ್ಲಿ ಸಾವು: ದೇಶದಲ್ಲೇ ಬೆಂಗಳೂರು ನಂ.3..!

ಹೆಲ್ಮೆಟ್‌ ಶಾಕ್‌:

ಕಳೆದ ವರ್ಷ 46593 ಬೈಕ್‌ ಸವಾರರು ಹೆಲ್ಮೆಟ್‌ ಧರಿಸದ ಕಾರಣ ತೀವ್ರ ಗಾಯಗೊಂಡು ಅಪಘಾತದಲ್ಲಿ ಬಲಿಯಾಗಿದ್ದಾರೆ. ಇದರಲ್ಲಿ 32877 ಜನರು ಬೈಕ್‌ ಚಾಲಕರಾಗಿದ್ದರೆ, 13716 ಜನರು ಹಿಂಬದಿ ಸವಾರರು. ಹೆಲ್ಮೆಟ್‌ ಧರಿಸದ ಕಾರಣ 93763 ಜನರು ಗಾಯಗೊಂಡಿದ್ದಾರೆ.

ಸೀಟ್‌ ಬೆಲ್ಟ್‌ :

ಇನ್ನು ಕಾರಿನಲ್ಲಿ ಸೀಟ್‌ಬೆಲ್ಟ್‌ ಧರಿಸದ ಕಾರಣ ಕಳೆದ ವರ್ಷ 16397 ಜನರು ಸಾವನ್ನಪ್ಪಿ, 39,231 ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಹೆಲ್ಮೆಟ್‌ ಧರಿಸದೇ ವಾಹನ ಚಲಾಯಿಸುವುದು ಮತ್ತು ಸೀಟ್‌ ಬೆಲ್ಟ್‌ ಧರಿಸದೆ ವಾಹನ ಚಲಾಯಿಸುವುದು ವಾಹನ ಅಪಘಾತಕ್ಕೆ ಕಾರಣವಾಗುವುದಿಲ್ಲವಾದರೂ, ಇಂಥ ಸುರಕ್ಷತಾ ಕ್ರಮಗಳ ಪಾಲನೆಯಿಂದ ಅಪಘಾತದ ವೇಳೆ ದೇಹಕ್ಕೆ ದೊಡ್ಡಮಟ್ಟದ ಹಾನಿಯಾಗುವುದು ತಪ್ಪಿ, ಜೀವ ಉಳಿಸಿಕೊಳ್ಳುವುದು ಸಾಧ್ಯವಾಗುತ್ತದೆ ಎಂದು ವರದಿ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?