ಅಣ್ಣ-ಅಮ್ಮ ಸೇರಿ ತನ್ನ ರಾಯಲ್‌ ಎನ್‌ಫೀಲ್ಡ್‌ ಬೈಕ್‌ ಮಾರಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವಕ!

Published : Jan 13, 2025, 09:08 PM IST
ಅಣ್ಣ-ಅಮ್ಮ ಸೇರಿ ತನ್ನ ರಾಯಲ್‌ ಎನ್‌ಫೀಲ್ಡ್‌ ಬೈಕ್‌ ಮಾರಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವಕ!

ಸಾರಾಂಶ

ಓದಿನ ಮೇಲೆ ಗಮನ ಕೊಡಲಿ ಅಂತ ಅಣ್ಣ-ಅಮ್ಮ ಸೇರಿಕೊಂಡು ತಮ್ಮನ ರಾಯಲ್‌ ಎನ್‌ಫೀಲ್ಡ್‌ ಬೈಕ್‌ ಮಾರಾಟ ಮಾಡಿದ್ದರು. ಆದರೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೀರತ್‌ (ಜ.13): ಅಮ್ಮ ಮತ್ತು ಅಣ್ಣ ತಮ್ಮ ರಾಯಲ್ ಎನ್‌ಫೀಲ್ಡ್ ಬುಲೆಟ್ ಬೈಕ್‌ ಮಾರಿದ್ದಕ್ಕೆ 17 ವರ್ಷದ ಹುಡುಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗೆಳೆಯರ ಜೊತೆ ಸುತ್ತಾಡೋದನ್ನ ತಪ್ಪಿಸೋಕೆ ಅಮ್ಮ ಮತ್ತು ಅಣ್ಣ ಬೈಕ್‌ ಮಾರಿದ್ದರಂತೆ. ಕುಟುಂಬದ ನಿರ್ಧಾರದಿಂದ ಮನನೊಂದ ಹುಡುಗ ಗುಂಡು ಹಾರಿಸಿಕೊಂಡು ಸತ್ತಿದ್ದಾನೆ. ಉತ್ತರ ಪ್ರದೇಶದ ಮೀರಟ್‌ನಲ್ಲಿ ಈ ಘಟನೆ ನಡೆದಿದೆ.

ಆತ್ಮಹತ್ಯೆಗೆ ಮುಂಚೆ “ಸತ್ತ ಮೇಲೆ ಏನಾಗುತ್ತೆ?” ಅಂತ ಗೂಗಲ್‌ನಲ್ಲಿ ಹುಡುಕಿದ್ದ ಅಂತ ಪೊಲೀಸರು ಹೇಳಿದ್ದಾರೆ. ಜನವರಿ 11ರಂದು ಹುಡುಗನ ಅಣ್ಣ, ಅಮ್ಮನನ್ನ ಮೀರತ್‌ ಮೆಡಿಕಲ್ ಕಾಲೇಜ್ ಆಸ್ಪತ್ರೆಯಿಂದ ಕರೆದುಕೊಂಡು ಹೋಗೋಕೆ ಹೋದಾಗ ಈ ಘಟನೆ ನಡೆದಿದೆ. ಒಳಗಡೆಯಿಂದ ಬಾಗಿಲು ಹಾಕಿದ್ದರಿಂದ ಬೇರೆ ದಾರಿಯಿಂದ ಹೋಗಿ ನೋಡಿದಾಗ ರಕ್ತದ ಮಡುವಿನಲ್ಲಿ ಹುಡುಗ ಬಿದ್ದಿದ್ದ. ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆತ ಸಾವು ಕಂಡಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.

ಗರ್ಲ್‌ಫ್ರೆಂಡ್‌ನ ಗಂಡ, ತಂದೆಯನ್ನು ಕೊಲ್ಲಲು ಗ್ಯಾಂಗ್‌ಗೆ ಸುಪಾರಿ ಕೊಟ್ಟಿದ್ದ ವಕೀಲ, ಆದ್ರೆ ಕೊಲೆಯಾದವನೇ ಬೇರೆ!

ಹುಡುಗ ಓದಿನಲ್ಲಿ ಗಮನ ಕೊಡ್ತಿರ್ಲಿಲ್ಲ, ಗೆಳೆಯರ ಜೊತೆ ಬೈಕ್‌ನಲ್ಲಿ ಸುತ್ತಾಡ್ತಿದ್ದ. ಹೀಗಾಗಿ ಮನೆಯವರು ದಿನಾ ಬೈಯುತ್ತಿದ್ದರು. ಓದಿನ ಮೇಲೆ ಗಮನ ಕೊಡಲಿ ಅಂತ ಆತನ ಬೈಕ್‌ಅನ್ನು ಮಾರಾಟ ಮಾಡಿದ್ದರು. ಆದರೆ, ಇದರಿಂದ ಮನನೊಂದು ಹುಡುಗ ಆತ್ಮಹತ್ಯೆ ಮಾಡಿಕೊಂಡ ಅಂತ ಪೊಲೀಸರು ಹೇಳಿದ್ದಾರೆ. ಹುಡುಗನ ಅಮ್ಮ ಮೀರತ್‌ ಮೆಡಿಕಲ್ ಕಾಲೇಜ್‌ನಲ್ಲಿ ನರ್ಸ್‌. ಅಣ್ಣ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡ್ಕೊಳ್ತಿದ್ದ. ಹುಡುಗನ ಅಪ್ಪ ಕಳೆದ ವರ್ಷ ತೀರಿಕೊಂಡಿದ್ದಾರೆ. ಕುಟುಂಬದವರು ಸಾವಿನ ಬಗ್ಗೆ ಈವರೆಗೂ ದೂರು ನೀಡಿಲ್ಲ. ಆದರೆ, ಹುಡುಗನಿಗೆ ಗನ್‌ ಎಲ್ಲಿಂದ ಸಿಕ್ತು ಅಂತ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

Hassan: ಮೈದುನನ ಜೊತೆ ಸೇರಿ ಗಂಡನನ್ನೇ ಕೊಂದ್ಬಿಟ್ಲು, ಪೆಟ್ರೋಲ್‌ ತರ್ತೀನಿ ಅಂತಾ ಹೋದವನು ಫೋಟೋ ಆಗ್ಬಿಟ್ಟ!

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಯೋಧ್ಯೆಯ ರಾಮಲಲ್ಲಾ ಪ್ರತ್ಯಕ್ಷನಾಗಿ ಆಶೀರ್ವದಿಸಿದರೆ ಹೇಗಿರತ್ತೆ? ರೋಮಾಂಚಕಾರಿ ವಿಡಿಯೋ ವೈರಲ್​
ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana