ಮತ್ತೆ 2 ರೈತ ಸಂಘಟನೆಗಳು ಪ್ರತಿಭಟನೆಯಿಂದ ಹಿಂದಕ್ಕೆ

Kannadaprabha News   | Asianet News
Published : Jan 29, 2021, 07:14 AM ISTUpdated : Jan 29, 2021, 07:30 AM IST
ಮತ್ತೆ 2 ರೈತ ಸಂಘಟನೆಗಳು ಪ್ರತಿಭಟನೆಯಿಂದ ಹಿಂದಕ್ಕೆ

ಸಾರಾಂಶ

ಮತ್ತೆ ಎರಡು ರೈತ ಸಂಘಟನೆಗಳು ರೈತ ಹೋರಾಟದ ಭಾಗವಾಗಿರುವ ಪ್ರತಿಭಟನೆಯಿಂದ ಹಿಂದೆ ಸರಿದಿವೆ. ಹಿಂಸಾಚಾರದಿಂದ ಬೇಸತ್ತು ದೂರ ಸರಿದಿವೆ. 

ನವದೆಹಲಿ/ನೋಯ್ಡಾ (ಜ.29) : ಕೇಂದ್ರ ಸರ್ಕಾರದ 3 ಕೃಷಿ ಕಾಯ್ದೆಗಳ ರದ್ದತಿಗೆ ಒತ್ತಾಯಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದ ಇನ್ನೂ 2 ರೈತ ಸಂಘಟನೆಗಳು ಹಿಂದಕ್ಕೆ ಸರಿದಿವೆ. ಇದರೊಂದಿಗೆ ರೈತ ಹೋರಾಟಕ್ಕೆ ಮತ್ತಷ್ಟುಹಿನ್ನಡೆಯಾಗಿದೆ.

ಬುಧವಾರವಷ್ಟೇ ಎರಡು ಸಂಘಟನೆಗಳು, ಪ್ರತಿಭಟನೆಯಿಂದ ಹಿಂದಕ್ಕೆ ಸರಿಯುತ್ತಿರುವುದಾಗಿ ಘೋಷಿಸಿದ್ದವು. ಗುರುವಾರ ಭಾರತೀಯ ಕಿಸಾನ್‌ ಯೂನಿಯನ್‌ (ಲೋಕ ಶಕ್ತಿ) ಹಾಗೂ ಕಿಸಾನ್‌ ಮಹಾಪಂಚಾಯತ್‌ ಹಿಂದೆ ಸರಿಯುವ ಘೋಷಣೆ ಮಾಡಿದವು. ಇದರೊಂದಿಗೆ 41 ಸಂಘಟನೆಗಳ ಸಂಯುಕ್ತ ಕಿಸಾನ್‌ ಒಕ್ಕೂಟದಿಂದ 4 ಸಂಘಟನೆಗಳು ಹೊರಬಿದ್ದಂತಾಗಿದೆ.

ಡೆಲ್ಲಿ ಗಲಭೆ; ಸುಳ್ಳು ಸುದ್ದಿ ಬಿತ್ತಿದ ರಾಜ್‌ದೀಪ್, ತರೂರ್‌ಗೆ FIR ಸಂಕಷ್ಟ ...

ಗುರುವಾರ ಈ ಕುರಿತು ಮಾತನಾಡಿದ ಭಾರತೀಯ ಕಿಸಾನ್‌ ಯೂನಿಯನ್‌ (ಲೋಕ ಶಕ್ತಿ) ಮುಖ್ಯಸ್ಥ ಶಿವರಾಜ್‌ಸಿಂಗ್‌, ‘ನಾವು ಡಿ.2ರಿಂದ ಪ್ರತಿಭಟನೆ ನಡೆಸುತ್ತಿದ್ದೆವು. ಆದರೆ ಗಣರಾಜ್ಯ ದಿನದ ಹಿಂಸೆ ಖಂಡಿಸಿ ಪ್ರತಿಭಟನೆಯಿಂದ ಹಿಂದೆ ಸರಿಯುತ್ತಿದ್ದೇವೆ’ ಎಂದರು.

ಇದೇ ವೇಳೆ ಕಿಸಾನ್‌ ಮಹಾಪಂಚಾಯತ್‌ ಎಂಬ ರೈತ ಸಂಘಟನೆ ಕೂಡಾ ರಾಜಸ್ಥಾನ- ಹರ್ಯಾಣ ಗಡಿಯ ಶಹಜಹಾನ್‌ಪುರ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯಿಂದ ಹಿಂದೆ ಸರಿಯುತ್ತಿರುವುದಾಗಿ ಘೋಷಿಸಿದೆ. ‘ನಾವು ಜ.21ರಂದೇ ಸಂಯುಕ್ತ ಕಿಸಾನ್‌ ಮೋರ್ಚಾದಿಂದ ಹೊರಬಿದ್ದಿದ್ದೆವು. ಆದರೂ ನಾವು ಪ್ರತಿಭಟನೆ ಬೆಂಬಲಿಸಿಕೊಂಡು ಬಂದಿದ್ದೆವು. ಆದರೆ ಮಂಗಳವಾರ ಘಟನೆ ಹಿನ್ನೆಲೆಯಲ್ಲಿ ತಕ್ಷಣದಿಂದ ಪ್ರತಿಭಟನೆ ಕೈಬಿಡಲು ನಿರ್ಧರಿಸಿದ್ದೇವೆ. ಹೋರಾಟದ ಪ್ರತಿ ಹಂತಗಳನ್ನು ವಿಶ್ಲೇಷಿಸಿ, ಮುಂದಿನ ಬೆಂಬಲದ ಕುರಿತು ಶೀಘ್ರ ನಿರ್ಧಾರ ಕೈಗೊಳ್ಳಲಿದ್ದೇವೆ’ ಎಂದು ಸಂಘಟನೆಯ ಮುಖ್ಯಸ್ಥ ರಾಮ್‌ಪಾಲ್‌ ಜಾಟ್‌ ಹೇಳಿದರು.

ಹೊರಬಿದ್ದ 4 ಸಂಘಟನೆಗಳು:  ರಾಷ್ಟ್ರೀಯ ಕಿಸಾನ್‌ ಮಜ್ದೂರ್‌ ಸಂಘಟನೆ, ಭಾರತೀಯ ಕಿಸಾನ್‌ ಯೂನಿಯನ್‌ (ಭಾನು), ಭಾರತೀಯ ಕಿಸಾನ್‌ ಯೂನಿಯನ್‌ (ಲೋಕಶಕ್ತಿ), ಕಿಸಾನ್‌ ಮಹಾಪಂಚಾಯತ್‌.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಿಸ್ಲೇರಿ 'ಮಿನರಲ್ ವಾಟರ್' ಅಲ್ಲವೇ ಅಲ್ಲ! ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್-ಮಿನರಲ್ ವಾಟರ್ ನಡುವಿನ ವ್ಯತ್ಯಾಸವೇನು?
ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?