ಇಬ್ಬರು ಭಾರತೀಯ ಹೈಕಮಿಷನ್‌ ಅಧಿಕಾರಿಗಳು ಪಾಕಿಸ್ತಾನದಲ್ಲಿ ನಿಗೂಢ ನಾಪತ್ತೆ!

Published : Jun 15, 2020, 02:34 PM ISTUpdated : Jun 15, 2020, 02:35 PM IST
ಇಬ್ಬರು ಭಾರತೀಯ ಹೈಕಮಿಷನ್‌ ಅಧಿಕಾರಿಗಳು ಪಾಕಿಸ್ತಾನದಲ್ಲಿ ನಿಗೂಢ ನಾಪತ್ತೆ!

ಸಾರಾಂಶ

ಪಾಕಿಸ್ತಾನದ ಭಾರತೀಯ ಹೈಕಮಿಷನ್ ಅಧಿಕಾರಿಗಳು ನಿಗೂಢ ನಾಪತ್ತೆ| ಭಾರತದಲ್ಲಿ ಗೂಢಾಚಾರಿಕೆ ನಡೆಸುತ್ತಿದ್ದ ಪಾಕಿಸ್ತಾನದ ಇಬ್ಬರು ಅಧಿಕಾರಿಗಳನ್ನು ಗಡೀಪಾರು ಮಾಡಿದ ಬೆನ್ನಲ್ಲೇ ಘಟನೆ| ಸೋಮವಾರ ಬೆಳಗ್ಗಿನಿಂದಲೇ ನಾಪತ್ತೆಯಾಗಿರುವ ಭಾರತೀಯ ಅಧಿಕಾರಿಗಳು

ಇಸ್ಲಮಾಬಾದ್(ಜೂ.15): ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಇಬ್ಬರು ಅಧಿಕಾರಿಗಳು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಇfಬರು ಅಧಿಕಾರಿಗಳು ನಾಪತ್ತೆಯಾಗಿರುವ ವಿಚಾರವನ್ನು ಪಾಕ್ ಅಧಿಕಾರಿಗಳೆದುರು ಇಡಲಾಗಿದೆ. ಸುದ್ದಿ ಸಂಸ್ಥೆ ಎಎನ್‌ಐ ಈ ವರದಿ ಪ್ರಕಟಿಸಿದ್ದು, ಭಾರತೀಯ ಅಧಿಕಾರಿಗಳು ಇಂದು, ಸೋಮವಾರ ಬೆಳಗ್ಗೆ ಎಂಟು ಗಂಟೆಯಿಂದ ನಾಪತ್ತೆಯಾಗಿದ್ದಾರೆನ್ನಲಾಗಿದೆ.

ಇನ್ನು ಕೆಲ ದಿನಗಳ ಹಿಂದಷ್ಟೇ ನವದೆಹಲಿಯಲ್ಲಿ ಪಾಕ್ ಹೈಕಮಿಷನ್‌ನ ಇಬ್ಬರು ಅಧಿಕಾರಿಗಳನ್ನು ಗೂಡಾಚಾರಿಕೆ ನಡೆಸುತ್ತಿದ್ದ ಆರೋಪದಡಿ ವಶಕ್ಕೆ ಪಡೆದು. ಅವರನ್ನು ಕೂಡಲೇ ಗಡೀಪಾರು ಮಾಡಲಾಗಿತ್ತು. ಈ ಘಟನೆ ಬೆನ್ನಲ್ಲೇ ಇಂತಹ ಘಟನೆ ನಡೆದಿದೆ ಎಂಬುವುದು ಉಲ್ಲೇಖನೀಯ. 

ಪಾಕ್‌ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ಗಡೀಪಾರು!

ದೆಹಲಿ ಪೊಲೀಸ್ ಇಲಾಖೆಯ ಸೆಷಲ್ ಸೆಲ್ ಇತ್ತೀಚೆಗಷ್ಟೇ ಪಾಕ್‌ ಹೈಕಮಿಷನ್‌ನ ಇಬ್ಬರು ಅಧಿಕಾರಿಗಳನ್ನು ಗೂಢಾಚಾರಿಕೆ ಆರೋಪದಡಿ ಬಂಧಿಸಿತ್ತು. ಆಬಿದ್ ಹುಸೈನ್ ಹಾಗೂ ತಾಇರ್ ಖಾನ್ ಹೆಸರಿನ ಈ ಇಬ್ಬರು ಅಧಿಕಾರಿಗಳು ಪಾಕ್‌ ಹೈಕಮಿಷನ್‌ನ ವೀಸಾ ಸೆಕ್ಷನ್‌ನಲ್ಲಿ ಕಾರ್ಯ ನಿರ್ವಿಸುತ್ತಿದ್ದರು. ಈ ವಿಚಾರ ಬೆಳಕಿಗೆ ಬಂದ ಬೆನ್ನಲ್ಲೇ ಭಾರತ ಸರ್ಕಾರ ಇಬ್ಬರಿಗೂ 24 ಗಂಟೆಯೊಳಗೆ ಭಾರತ ಬಿಟ್ಟು ಹೋಗುವಂತೆ ಆದೇಶಿಸಿತ್ತು. ಈ ಇಬ್ಬರೂ ಪಾಕಿಸ್ತಾನಿ ಅಧಿಕಾರಿಗಳು ಗುಪ್ತಚರ ಸಂಸ್ಥೆ ISI ಪರ ಕಾರ್ಯ ನಿರ್ವಹಿಸುತ್ತಿದ್ದರು. ಅಲ್ಲದೇ ನಕಲಿ ಆಧಾರ್ ಕಾರ್ಡ್‌ ಮೂಲಕ ದೆಹಲಿಯಲ್ಲಿ ಸಂಚರಿಸುತ್ತಿದ್ದರು.

ಇನ್ನು ಅತ್ತ ಪಾಕಿಸ್ತಾನದಲ್ಲಿ ಭಾರತೀಯ ಹೈಕಮಿಷನ್‌ ಅಧಿಕಾರಿ ಗೌರವ್ ಅಹ್ಲುವಾಲಿಯಾರವರ ವಾಹನವನ್ನು ISI ಅಧಿಕಾರಿಗಳು ಬೆನ್ನತ್ತಿದ ವಿಚಾರ ಬೆಳಕಿಗೆ ಬಂದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡ ಸೋನಿಯಾ ಗಾಂಧಿಗೆ ಕೇರಳ ಚುನಾವಣೆಯಲ್ಲಿ ಸೋಲು
ಶೇ.100ರಷ್ಟು ಕ್ರಿಶ್ಚಿಯನ್ ಜನಸಂಖ್ಯೆ ಇರುವ ಕೇರಳದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು