ದೇಶದಲ್ಲಿ ಒಂದೇ ವರ್ಷ 2 ಲಕ್ಷ ಕಿರಾಣಿ ಅಂಗಡಿ ಬಂದ್‌: ಅಧ್ಯಯನದಲ್ಲಿ ಬೆಳಕಿಗೆ!

Published : Oct 30, 2024, 04:29 AM IST
ದೇಶದಲ್ಲಿ ಒಂದೇ ವರ್ಷ 2 ಲಕ್ಷ ಕಿರಾಣಿ ಅಂಗಡಿ ಬಂದ್‌: ಅಧ್ಯಯನದಲ್ಲಿ ಬೆಳಕಿಗೆ!

ಸಾರಾಂಶ

ದೇಶದಲ್ಲಿ ಇ-ಕಾಮರ್ಸ್‌ ಸಂಸ್ಕೃತಿ ವೃದ್ಧಿಯಾಗಿ ಜನತೆ ಆನ್‌ಲೈನ್‌ ಶಾಪಿಂಗ್‌ ಕಡೆ ಮುಖ ಮಾಡುತ್ತಿದ್ದು, ಇದರಿಂದ ಕಿರಾಣಿ ಅಂಗಡಿಗಳ ವ್ಯಾಪಾರಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಕಳೆದೊಂದು ವರ್ಷದಲ್ಲಿ 2 ಲಕ್ಷಕ್ಕೂ ಅಧಿಕ ಕಿರಾಣಿ ಅಂಗಡಿಗಳಿಗೆ ಬೀಗ ಬಿದ್ದಿದೆ ಎಂದು ಅಧ್ಯಯನವೊಂದರಿಂದ ತಿಳಿದು ಬಂದಿದೆ. 

ನವದೆಹಲಿ (ಅ.30): ದೇಶದಲ್ಲಿ ಇ-ಕಾಮರ್ಸ್‌ ಸಂಸ್ಕೃತಿ ವೃದ್ಧಿಯಾಗಿ ಜನತೆ ಆನ್‌ಲೈನ್‌ ಶಾಪಿಂಗ್‌ ಕಡೆ ಮುಖ ಮಾಡುತ್ತಿದ್ದು, ಇದರಿಂದ ಕಿರಾಣಿ ಅಂಗಡಿಗಳ ವ್ಯಾಪಾರಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಕಳೆದೊಂದು ವರ್ಷದಲ್ಲಿ 2 ಲಕ್ಷಕ್ಕೂ ಅಧಿಕ ಕಿರಾಣಿ ಅಂಗಡಿಗಳಿಗೆ ಬೀಗ ಬಿದ್ದಿದೆ ಎಂದು ಅಧ್ಯಯನವೊಂದರಿಂದ ತಿಳಿದು ಬಂದಿದೆ. 4 ಲಕ್ಷಕ್ಕೂ ಅಧಿಕ ವಿತರಕರ ಸಂಘಟನೆಯಾಗಿರುವ ‘ಅಖಿಲ ಭಾರತ ಗ್ರಾಹಕ ವಸ್ತುಗಳ ಪೂರೈಕೆದಾರರ ಸಂಘಟನೆ’ ನಡೆಸಿದ ಈ ಅಧ್ಯಯನ ದೇಶದಲ್ಲಿ ಇ-ಕಾಮರ್ಸ್‌ ಉದ್ಯಮ ಭಾರೀ ಪ್ರಮಾಣದಲ್ಲಿ ಅಭಿವೃದ್ಧಿಗೊಂಡ ಬಳಿಕ ನಡೆದ ಮೊದಲ ಸಮಗ್ರ ಅಧ್ಯಯನ ಎನ್ನಲಾಗಿದೆ.

ಅಧ್ಯಯನ ವರದಿ ಅನ್ವಯ, ಮಹಾನಗರಗಳಲ್ಲಿ ಮಾಸಿಕ ಸರಾಸರಿ 5.5 ಲಕ್ಷ ರುಪಾಯಿ ವಹಿವಾಟು ನಡೆಸುವ 17 ಲಕ್ಷ ಅಂಗಡಿಗಳಿದ್ದು, ಇವುಗಳಲ್ಲಿ ಶೇ.45ರಷ್ಟು ಮುಚ್ಚಿವೆ. ಅತ್ತ ಮಾಸಿಕ ಸರಾಸರಿ 3.5 ಲಕ್ಷ ರು.ನಷ್ಟು ವ್ಯಾಪಾರ ನಡೆಸುವ 12 ಲಕ್ಷ ಅಂಗಡಿಗಳಿರುವ ಟೈರ್‌1 ನಗರಗಳಲ್ಲಿ ಶೇ.30 ಅಂಗಡಿಗಳು ಮುಚ್ಚಿದ್ದು, ಟೈರ್‌ 2 ನಗರಗಳಲ್ಲಿ ಶೇ.25 ಅಂಗಡಿಗಳು ಬಾಗಿಲು ಹಾಕಿವೆ. ದೇಶದಲ್ಲಿ ಒಟ್ಟು 1.3 ಕೋಟಿ ಕಿರಾಣಿ ಅಂಗಡಿಗಳಿವೆ. ಈ ಪೈಕಿ ಟೈರ್‌ 1 ಸಿಟಿಗಳು ಅಂದರೆ ದೊಡ್ಡ ನಗರಗಳು 12 ಲಕ್ಷ ಅಂಗಡಿಗಳನ್ನು ಹೊಂದಿದ್ದರೆ, ಟೈರ್‌ 2 ಮತ್ತು ಟೈರ್‌ 3 ನಗರಗಳು ಉಳಿದ 1 ಕೋಟಿಗಿಂತ ಹೆಚ್ಚಿನ ಕಿರಾಣಿ ಅಂಗಡಿಗಳನ್ನು ಹೊಂದಿವೆ.

ಅಧ್ಯಯನ ವರದಿ ಕುರಿತು ಪ್ರತಿಕ್ರಿಯೆ ನೀಡಿರುವ ವಿತರಕರ ಒಕ್ಕೂಟದ ಅಧ್ಯಕ್ಷ ಧೈರ್ಯಶಾಲಿ ಪಾಟೀಲ್‌, ‘ಸೂಪರ್‌ ಮಾರ್ಕೆಟ್‌ಗಳಿಗೂ ಸಡ್ಡು ಹೊಡೆದಿದ್ದ ಕಿರಾಣಿ ಅಂಗಡಿಗಳು ಇದೀಗ ಇ-ಕಾಮರ್ಸ್‌ ಹಾಗೂ ಆರ್ಥಿಕ ಹಿಂಜರಿತದ ಕಾರಣ ಅಪಾಯದಲ್ಲಿವೆ. ಜನರನ್ನು ಸೆಳೆಯುವ ಸಲುವಾಗಿ ಕಡಿಮೆ ಅಥವಾ ರಿಯಾಯಿತಿ ದರದಲ್ಲಿ ವಸ್ತುಗಳನ್ನು ಮಾರುತ್ತಿರುವ ಆನ್‌ಲೈನ್‌ ವಾಣಿಜ್ಯ ಸಂಸ್ಥೆಗಳು ಕಿರಾಣಿ ಅಂಗಡಿಗಳ ಗ್ರಾಹಕರನ್ನು ಕಸಿಯುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಭಗೀರಥ ಅಂತ ಹೇಳಿಕೊಳ್ಳದೆ ಚುನಾವಣೆ ಎದುರಿಸಲಿ: ಯೋಗೇಶ್ವರ್‌ಗೆ ಡಿವಿಎಸ್ ಸವಾಲು

ಜೊತೆಗೆ ಕಾನೂನು ಬಾಹಿರ ದರಸಮರ ನಡೆಸುತ್ತಿರುವ ಝೊಮಾಟೋದ ಬ್ಲಿಂಕಿಟ್‌, ಸ್ವಿಗ್ಗಿಯ ಇನ್ಸ್ಟಾಮಾರ್ಟ್‌ ಮತ್ತು ಝೆಪ್ಟೋ ಕಂಪನಿಗಳ ವಿರುದ್ಧ ತನಿಖೆ ನಡೆಸಬೇಕು ಎಂದು ಪಾಟೀಲ್‌ ಆಗ್ರಹಿಸಿದ್ದಾರೆ. ದರ ಕಡಿತದಂತಹ ಅನ್ಯಾಯವೆಸಗುವ ಆನ್‌ಲೈನ್‌ ಸಂಸ್ಥೆಗಳ ಪರಿಶೀಲನೆಗೆ ಭಾರತದ ಸ್ಪರ್ಧಾತ್ಮಕ ಆಯೋಗ ಮುಂದಾಗಿರುವಾಗಲೇ ಈ ಬೆಳವಣಿಗೆಯಾಗಿದೆ. ಈ ಮೊದಲು, ಸಣ್ಣ ವ್ಯಾಪಾರಿಗಳ ರಕ್ಷಣೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಲುವ ಬಗ್ಗೆ ಚಿಂತನೆ ನಡೆಸಿದೆ ಎಂದು ವಿತ್ತಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ