ಮುಂಬೈ ಏರ್‌ಪೋರ್ಟ್‌ನಲ್ಲಿ ಕೂದಲೆಳೆ ಅಂತರದಲ್ಲಿಯೇ ತಪ್ಪಿದ ವಿಮಾನ ದುರಂತ; ವಿಡಿಯೋ ನೋಡಿ

Published : Jun 09, 2024, 01:34 PM ISTUpdated : Jun 10, 2024, 01:00 PM IST
ಮುಂಬೈ ಏರ್‌ಪೋರ್ಟ್‌ನಲ್ಲಿ ಕೂದಲೆಳೆ ಅಂತರದಲ್ಲಿಯೇ ತಪ್ಪಿದ ವಿಮಾನ ದುರಂತ; ವಿಡಿಯೋ ನೋಡಿ

ಸಾರಾಂಶ

 Chhatrapati Shivaji Maharaj International Airport: ಇಂಡಿಗೋ ಫ್ಲೈಟ್ ಇಂದೋರ್‌ನಿಂದ ಮುಂಬೈಗೆ ಆಗಮಿಸಿತ್ತು. ಏರ್ ಇಂಡಿಯಾ ಟೇಕಾಫ್‌ ಆಗುವ ಮೊದಲೇ ಅದೇ ರನ್‌ವೇಗೆ ಇಂಡಿಗೋ ಲ್ಯಾಂಡಿಂಗ್‌ಗೆ ಕ್ಲಿಯರೆನ್ಸ್ ನೀಡಲಾಗಿತ್ತು. ಏರ್ ಇಂಡಿಯಾ ವಿಮಾನ ಮುಂಬೈನಿಂದ ತಿರುವನಂತಪುರಕ್ಕೆ ಪ್ರಯಾಣ ಬೆಳೆಸಿತ್ತು.

ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Chhatrapati Shivaji Maharaj International Airport, Mumbai) ದೊಡ್ಡ ಅನಾಹುತವೊಂದು ತಪ್ಪಿದೆ. ಶನಿವಾರ ಈ ಘಟನೆ ನಡೆದಿದ್ದು, ಏಕಕಾಲದಲ್ಲಿ ಒಂದೇ ರನ್‌ವೇಯಲ್ಲಿ ಎರಡು ವಿಮಾನಗಳು ಕಾರ್ಯಾಚರಣೆ ನಡೆಸಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೋಡುಗರ ಉಸಿರು ಒಂದು ಕ್ಷಣ ನಿಂತ ಅನುಭವ ಆಗುತ್ತದೆ. 

ಶನಿವಾರ ಏರ್ ಇಂಡಿಯಾ (Air India Plane) ಮತ್ತು ಇಂಡಿಗೋ (IndiGo) ವಿಮಾನ ಒಂದೇ ರನ್‌ವೇಯಲ್ಲಿ ಕಾರ್ಯಾಚರಣೆಯನ್ನು ನಡೆಸಿವೆ. ಒಂದು ಕ್ಷಣದಲ್ಲಿ ವ್ಯತ್ಯಾಸ ಆಗಿದ್ದರೂ ದೊಡ್ಡ ಅನಾಹುತ ಸಂಭವಿಸುವ ಎಲ್ಲಾಸಾಧ್ಯತೆಗಳೂ ಇತ್ತು. ಅದೃಷ್ಟವಷಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಏರ್ ಇಂಡಿಯಾ ವಿಮಾನ ಟೇಕಾಫ್ ಆಗುತ್ತಿತ್ತು. ಇಂಡಿಗೋ ಏರ್‌ಕ್ರಾಫ್ಟ್ ಅದೇ ಸಮಯದಲ್ಲಿ ಲ್ಯಾಂಡ್ ಆಗುತ್ತಿತ್ತು.

Time to Travel ಆಫರ್‌ ಘೋಷಿಸಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌, 1177 ರೂಪಾಯಿಗೆ ವಿಮಾನ ಪ್ರಯಾಣ ಮಾಡ್ಬಹುದು!

ಮುಂಬೈ ರನ್‌ವೇನಲ್ಲಿ ಆಗಿದ್ದೇನು?

ಇಂಡಿಗೋ ಫ್ಲೈಟ್ ಇಂದೋರ್‌ನಿಂದ ಮುಂಬೈಗೆ ಆಗಮಿಸಿತ್ತು. ಏರ್ ಇಂಡಿಯಾ ಟೇಕಾಫ್‌ ಆಗುವ ಮೊದಲೇ ಅದೇ ರನ್‌ವೇಗೆ ಇಂಡಿಗೋ ಲ್ಯಾಂಡಿಂಗ್‌ಗೆ ಕ್ಲಿಯರೆನ್ಸ್ ನೀಡಲಾಗಿತ್ತು. ಏರ್ ಇಂಡಿಯಾ ವಿಮಾನ ಮುಂಬೈನಿಂದ ತಿರುವನಂತಪುರಕ್ಕೆ ಪ್ರಯಾಣ ಬೆಳೆಸಿತ್ತು. ಇಂಡಿಗೋ ವಿಮಾನ ಲ್ಯಾಂಡಿಂಗ್ ಆಗಿದ್ದ ವೇಳೆ ರನ್‌ವೇನಲ್ಲಿ ಟೇಕಾಫ್ ಆಗಲು ಏರ್ ಇಂಡಿಯಾ ವಿಮಾನ ವೇಗದಲ್ಲಿ ಸಾಗುತ್ತಿತ್ತು. ಇನ್ನೇನು ಇಂಡಿಗೋ ವಿಮಾನ ಡಿಕ್ಕಿ ಹೊಡೆಯುತ್ತೆ ಅನ್ನೋಷ್ಟರಲ್ಲಿ ಏರ್ ಇಂಡಿಯಾ ವಿಮಾನ ಟೇಕಾಫ್ ಆಗಿದ್ದರಿಂದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. 

ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA- Directorate General of Civil Aviation) ಘಟನೆಯ ಕುರಿತು ತನಿಖೆ ಆರಂಭಿಸಿದೆ. ರನ್‌ವೇಯಲ್ಲಿ ಇಂಡಿಗೋ ವಿಮಾನಕ್ಕೆ ಇಳಿಯಲು ಅನುಮತಿ ನೀಡಿದ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ ವಿಮಾನಯಾನ ಸಂಸ್ಥೆಗಳಿಂದ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.

ಏರ್‌ ಇಂಡಿಯಾ ವಿಮಾನ ರದ್ದು, ಸಾಯುವ ಕೊನೆ ಕ್ಷಣದಲ್ಲಿ ಪತಿ ಜೊತೆಗಿರುವ ಭಾಗ್ಯ ತಪ್ಪಿಸಿಕೊಂಡ ಪತ್ನಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್