ಬಸ್-ಟ್ರಕ್ ಡಿಕ್ಕಿ: ಬಳಿಕ ಭಾರೀ ಬೆಂಕಿಗೆ, 20 ಪ್ರಯಾಣಿಕರ ಬಲಿ| ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ಕನೌಜ್[ಜ.11]: ಡಬಲ್ ಡೆಕ್ಕರ್ ಬಸ್ಸು ಹಾಗೂ ಟ್ರಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಪರಿಣಾಮ ಬಸ್ಸಿಗೆ ಭಾರೀ ಪ್ರಮಾಣದ ಬೆಂಕಿ ಹೊತ್ತಿಕೊಂಡಿರುವ ಘಟನೆ ಉತ್ತರ ಪ್ರದೇಶದ ಕನೌಜ್ನಲ್ಲಿ ನಡೆದಿದೆ.
ಶುಕ್ರವಾರ ಸಂಜೆ ನಡೆದ ಈ ಬೆಂಕಿ ದುರಂತದಲ್ಲಿ 50 ಪ್ರಯಾಣಿಕರ ಪೈಕಿ ಸುಮಾರು 20 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಗಂಭೀರ ಸ್ವರೂಪದ ಸುಟ್ಟಗಾಯಗಳಿಗೆ ತುತ್ತಾಗಿದ್ದ 21ಕ್ಕೂ ಹೆಚ್ಚು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಕನೌಜ್ ಎಸ್ಪಿ ಹೇಳಿದ್ದಾರೆ.
ಉತ್ತರ ಪ್ರದೇಶದ ಫಾರ್ರುಖಾಬಾದ್ನಿಂದ ರಾಜಸ್ಥಾನದ ಜೈಪುರಕ್ಕೆ ಬಸ್ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಪ್ರಧಾನಿ ಮೋದಿ ಸಂತಾಪ
उत्तर प्रदेश के कन्नौज में हुए भीषण सड़क हादसे के बारे में जानकर अत्यंत दुख पहुंचा है। इस दुर्घटना में कई लोगों को अपनी जान गंवानी पड़ी है। मैं मृतकों के परिजनों के प्रति अपनी संवेदनाएं प्रकट करता हूं, साथ ही घायलों के शीघ्र स्वस्थ होने की कामना करता हूं।
— Narendra Modi (@narendramodi)कन्नौज (उत्तर प्रदेश) में हुई सड़क दुर्घटना से अत्यंत दुखी हूँ। इस भीषण हादसे में जिन लोगों ने अपने परिजनों व दोस्तों को खोया है उनकी इस अपूरणीय क्षति पर अपनी संवेदनाएँ व्यक्त करता हूँ और घायलों के शीघ्र ही स्वस्थ होने की कामना करता हूँ।
— Amit Shah (@AmitShah)ಅಪಘಾತ ಸಂಬಂಧ ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದು, ಮೃತತ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಗೃಹ ಸಚಿವ ಅಮಿತ್ ಶಾ ಕೂಡಾ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.