ಪಂಜಾಬ್‌ ಗೆದ್ದ ಆಪ್‌ ಮುಂದಿನ ಟಾರ್ಗೆಟ್‌ ಹೀಗಿದೆ, ಬೃಹತ್ ಸದಸ್ಯತ್ವ ಆಂದೋಲನ!

Published : Mar 13, 2022, 08:06 AM IST
ಪಂಜಾಬ್‌ ಗೆದ್ದ ಆಪ್‌ ಮುಂದಿನ ಟಾರ್ಗೆಟ್‌ ಹೀಗಿದೆ, ಬೃಹತ್ ಸದಸ್ಯತ್ವ ಆಂದೋಲನ!

ಸಾರಾಂಶ

* ಪಂಜಾಬ್‌ನ ಭರ್ಜರಿ ಗೆಲುವಿನ ಬೆನ್ನಲ್ಲೇ ದಕ್ಷಿಣದತ್ತ ಚಿತ್ತ * ದಕ್ಷಿಣಕ್ಕೆ ಆಪ್‌: ಬೃಹತ್‌ ಸದಸ್ಯತ್ವ * ಆಂದೋಲನ, ಪಾದಯಾತ್ರೆಗೆ ಸಿದ್ಧತೆ  

ನವದೆಹಲಿ(ಮಾ.13): ಪಂಜಾಬ್‌ನಲ್ಲಿ ದೊರೆತ ಅಭೂತ ಜಯದಿಂದ ಉತ್ತೇಜಿತವಾಗಿರುವ ಆಮ್‌ ಆದ್ಮಿ ಪಕ್ಷ (ಆಪ್‌) ಇದೀಗ ದಕ್ಷಿಣ ಭಾರತದತ್ತ ಗಮನ ಹರಿಸಿದೆ. ದಕ್ಷಿಣದ ರಾಜ್ಯಗಳಲ್ಲಿ ಬೃಹತ್‌ ಸದಸ್ಯತ್ವ ಆಂದೋಲನ ಹಾಗೂ ಪಾದಯಾತ್ರೆಗಳನ್ನು ಕೈಗೊಳ್ಳಲು ಪಕ್ಷದ ನಾಯಕತ್ವ ನಿರ್ಧರಿಸಿದೆ.

ದೆಹಲಿಯಲ್ಲಿ ಸತತ ಎರಡನೇ ಬಾರಿ ಸರ್ಕಾರ ರಚಿಸಿ, ಪಂಜಾಬ್‌ನಲ್ಲಿ ದೊಡ್ಡ ಜಯ ಸಾಧಿಸಿದ ನಂತರ ದೇಶಾದ್ಯಂತ ಪಕ್ಷವನ್ನು ಬೆಳೆಸಲು ಮುಂದಾಗಿರುವ ನಾಯಕರು, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ ಹಾಗೂ ಲಕ್ಷದ್ವೀಪದಲ್ಲಿ ಸದಸ್ಯತ್ವ ಆಂದೋಲನಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಸೋಮನಾಥ್‌ ಭಾರ್ತಿ ತಿಳಿಸಿದ್ದಾರೆ.

ಜನರ ಮನಸ್ಥಿತಿಯನ್ನು ಗಮನಿಸಿದರೆ ಆಪ್‌ನ ರಾಜಕಾರಣದತ್ತ ಅವರು ಒಲವು ತೋರುತ್ತಿರುವುದು ಕಂಡುಬರುತ್ತಿದೆ. ದಕ್ಷಿಣ ಭಾರತದಿಂದ ನಮಗೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹೀಗಾಗಿ ಪಕ್ಷದ ಸ್ಥಳೀಯ ತಂಡಗಳು ದೊಡ್ಡ ಪ್ರಮಾಣದಲ್ಲಿ ಶೀಘ್ರದಲ್ಲೇ ಸದಸ್ಯತ್ವ ಆಂದೋಲನ ಆರಂಭಿಸಲಿವೆ ಎಂದು ಅವರು ಹೇಳಿದ್ದಾರೆ. ಕರ್ನಾಟಕದಲ್ಲಿ ಈಗಾಗಲೇ ಆಪ್‌ ಸಕ್ರಿಯವಾಗಿದ್ದು, ಮುಂಬರುವ ಬೆಂಗಳೂರು ಪಾಲಿಕೆ (ಬಿಬಿಎಂಪಿ) ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Indigo Crisis: ಮಗಳಿಗೆ ರಕ್ತ ಸೋರ್ತಿದೆ, ಸ್ಯಾನಿಟರಿ ಪ್ಯಾಡ್​ ಕೊಡಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ತಂದೆಯ ಕಣ್ಣೀರು
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್