
ಘಾಜಿಯಾಬಾದ್(ಜ.04): ಚಿತಾಗಾರದ ಚಾವಣಿ 21 ಜನರ ಸಾವನ್ನಪ್ಪಿದ ಭೀಕರ ಘಟನೆ ಉತ್ತರಪ್ರದೇಶದ ಮುರದ್ನಗರದಲ್ಲಿ ಭಾನುವಾರ ಸಂಭವಿಸಿದೆ.
ರಾಮ್ಧನ್ ಎಂಬ ವ್ಯಕ್ತಿಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ಆತನ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಆಗಮಿಸಿದ್ದರು. ಆದರೆ ಈ ವೇಳೆ ಸಣ್ಣದಾಗಿ ಮಳೆ ಸುರಿಯುತ್ತಿದ್ದ ಕಾರಣ ಸುಮಾರು 25 ಜನರು ಅಲ್ಲೇ ಇದ್ದ ಕಟ್ಟಡವೊಂದರ ಕೆಳಗೆ ನಿಂತಿದ್ದರು. ಈ ವೇಳೆ ಆ ಕಟ್ಟಡದ ಚಾವಣಿ ಏಕಾಏಕಿ ಕುಸಿದ ಪರಿಣಾಮ 21 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20 ಜನರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಧಾವಿಸಿ, ರಕ್ಷಣಾ ಕಾರ್ಯ ಕೈಗೊಂಡಿದೆ.
ಘಟನೆ ಸಂಬಂಧ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮಡಿದವರ ಕುಟುಂಬಕ್ಕೆ ತಲಾ 2 ಲಕ್ಷ ರು. ಪರಿಹಾರ ಘೋಷಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ