ಮತದಾರರಿಗೆ ಈರುಳ್ಳಿ ಹಂಚಲು ತ.ನಾಡಲ್ಲಿ ಯತ್ನ?: 21 ಟನ್‌ ಜಪ್ತಿ!

Published : Dec 23, 2019, 08:56 AM IST
ಮತದಾರರಿಗೆ ಈರುಳ್ಳಿ ಹಂಚಲು ತ.ನಾಡಲ್ಲಿ ಯತ್ನ?: 21 ಟನ್‌ ಜಪ್ತಿ!

ಸಾರಾಂಶ

ಮತದಾರರಿಗೆ ಈರುಳ್ಳಿ ಹಂಚಲು ತ.ನಾಡಲ್ಲಿ ಯತ್ನ?: 21 ಟನ್‌ ಜಪ್ತಿ| ಸೂಕ್ತ ದಾಖಲೆಗಳನ್ನು ತೋರಿಸಲು ಚಾಲಕ ವಿಫಲ

ನಾಗಪಟ್ಟಿಣಂ[ಡಿ.23]: ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮ ತಡೆಗಟ್ಟಲು ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳು ಬರೋಬ್ಬರಿ 21 ಟನ್‌ ಈರುಳ್ಳಿಯನ್ನು ಇಲ್ಲಿ ವಶ ಪಡಿಸಿಕೊಂಡಿದ್ದಾರೆ.

ಮಹಾರಾಷ್ಟ್ರದಿಂದ ಲಾರಿ ಮೂಲಕ ತರಲಾಗುತ್ತಿದ್ದ ಈರುಳ್ಳಿ ಇದಾಗಿದ್ದು, ಸೂಕ್ತ ದಾಖಲೆಗಳನ್ನು ತೋರಿಸಲು ಚಾಲಕ ವಿಫಲವಾದ ಕಾರಣ ಲಾರಿ ಸಮೇತ ಈರುಳ್ಳಿಯನ್ನು ಚುನಾವಾಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಡಿ.27ರಂದು ನಡೆಯುವ ಸ್ಥಳೀಯ ಚುನಾವಣೆಯಲ್ಲಿ ಮತದಾರರಿಗೆ ಆಮಿಷ ಒಡ್ಡಲು ಭಾರಿ ಹಣ ಹಾಗೂ ವಸ್ತುಗಳನ್ನು ಸಾಗಿಸಲಾಗುತ್ತಿದೆ ಎನ್ನುವ ದೂರು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ವೇಳೆ ಈರುಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್