ಮಹಾರಾಷ್ಟ್ರದ 5 ಜಿಲ್ಲೆಯಲ್ಲಿ 21,219 ರೈತರ ಆತ್ಮಹತ್ಯೆ

Published : Apr 05, 2025, 08:02 AM IST
ಮಹಾರಾಷ್ಟ್ರದ 5 ಜಿಲ್ಲೆಯಲ್ಲಿ 21,219 ರೈತರ ಆತ್ಮಹತ್ಯೆ

ಸಾರಾಂಶ

ಮಹಾರಾಷ್ಟ್ರದ 5 ಜಿಲ್ಲೆಗಳಲ್ಲಿ ಕಳೆದ 24 ವರ್ಷಗಳಲ್ಲಿ 21,219 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಳೆ ಕೊರತೆ, ಬೆಳೆ ನಾಶ, ಸಾಲಭಾದೆ ಕಾರಣವೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮುಂಬೈ: ಮಹಾರಾಷ್ಟ್ರದ 5 ಜಿಲ್ಲೆಗಳಲ್ಲಿ ಕಳೆದ 24 ವರ್ಷಗಳಲ್ಲಿ 21,219 ಅನ್ನದಾತರು ಮಳೆ ಕೊರತೆ, ಬೆಳೆ ನಾಶ, ಸಾಲಭಾದೆ ಸೇರಿದಂತೆ ವಿವಿಧ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಂಕಿ ಅಂಶವೊಂದು ಹೇಳಿದೆ.

ವರದಿ ಅನ್ವಯ 2020ರ ಜನವರಿಯಿಂದ 2025ರ ಜನವರಿ ಅವಧಿಯಲ್ಲಿ ಅಮರಾವತಿಯಲ್ಲಿ 5,395, ಅಕೋಲಾದಲ್ಲಿ 3,123, ಬುಲ್ಡಾನಾದಲ್ಲಿ 4,442 , ವಾಶಿಮ್‌ನಲ್ಲಿ 2,048, ಯವತ್ಮಾಲ್‌ನಲ್ಲಿ 6,211 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವರ್ಷದ ಜನವರಿಯಲ್ಲಿಯೇ ಈ ಐದು ಜಿಲ್ಲೆಗಳಲ್ಲಿ ಒಟ್ಟಾರೆ 80 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ಹೇಳಿದೆ.

ಈ ಪ್ರಕರಣಗಳಲ್ಲಿ ಒಟ್ಟು 9970 ಪ್ರಕರಣಗಳು ಸರ್ಕಾರದಿಂದ ಪರಿಹಾರಕ್ಕೆ ಅರ್ಹವಾಗಿದ್ದು, 9740 ಪ್ರಕರಣಗಳಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. 10963 ಆತ್ಮಹತ್ಯೆ ಪ್ರಕರಣಗಳು ಪರಿಹಾರಕ್ಕೆ ಅನರ್ಹ. 319 ಪ್ರಕರಣಗಳು ವಿಚಾರಣೆಗೆ ಬಾಕಿಯಿವೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಭೋವಿ ನಿಗಮ ಹಗರಣಕೋರರಿಗೆ ಶಾಕ್, ಇಡಿ ದಾಳಿ, ದಾಖಲೆಗಳು ವಶಕ್ಕೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್