ಇಂಡಿಗೋಗೆ ₹22 ಕೋಟಿ ದಂಡ, ಸಿಇಒಗೆ ಎಚ್ಚರಿಕೆ

Kannadaprabha News   | Kannada Prabha
Published : Jan 18, 2026, 05:52 AM IST
indigo

ಸಾರಾಂಶ

ಕಳೆದ ಡಿಸೆಂಬರ್‌ನಲ್ಲಿ ಏಕಾಏಕಿ ಸಾವಿರಾರು ವಿಮಾನಗಳು ರದ್ದಾಗಿ ವಿಮಾನಯಾನ ಕ್ಷೇತ್ರದಲ್ಲಿ ತಲ್ಲಣ ಸೃಷ್ಟಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗೋ ಸಂಸ್ಥೆಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) 22 ಕೋಟಿ ರು. ದಂಡ ವಿಧಿಸಿದೆ.

ನವದೆಹಲಿ: ಕಳೆದ ಡಿಸೆಂಬರ್‌ನಲ್ಲಿ ಏಕಾಏಕಿ ಸಾವಿರಾರು ವಿಮಾನಗಳು ರದ್ದಾಗಿ ವಿಮಾನಯಾನ ಕ್ಷೇತ್ರದಲ್ಲಿ ತಲ್ಲಣ ಸೃಷ್ಟಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗೋ ಸಂಸ್ಥೆಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) 22 ಕೋಟಿ ರು. ದಂಡ ವಿಧಿಸಿದೆ. ಜತೆಗೆ, ವಿಮಾನಗಳ ಕಾರ್ಯಾಚರಣೆಯನ್ನು ಸಮರ್ಪಕವಾಗಿ ನಿಭಾಯಿಸದ ಸಿಇಒಗೂ ಎಚ್ಚರಿಕೆ ನೀಡಿದ್ದು, ಮುಂಬರುವ ದಿನಗಳಲ್ಲಿ ಇಂಥ ವ್ಯತ್ಯಯ ತಡೆಯುವ ಭರವಸೆಯ ಭಾಗವಾಗಿ 50 ಕೋಟಿ ರು. ಬ್ಯಾಂಕ್‌ನಲ್ಲಿ ಠೇವಣಿ ಇಡುವಂತೆ ನಿರ್ದೇಶಿಸಿದೆ.

ಪ್ರಕರಣ ಕುರಿತು ತನಿಖೆ ನಡೆಸಿದ್ದ ಡಿಜಿಸಿಎ

ಪ್ರಕರಣ ಕುರಿತು ತನಿಖೆ ನಡೆಸಿದ್ದ ಡಿಜಿಸಿಎ, ವಿಮಾನಯಾನ ಕ್ಷೇತ್ರದಲ್ಲಿ ಅತಿಹೆಚ್ಚು ಪಾಲು ಹೊಂದಿರುವ ಸಂಸ್ಥೆಯು ವಿಮಾನ ಸಂಚಾರ ನಿರ್ವಹಣೆಯಲ್ಲಿ ಸೋತಿತ್ತು. ಅದರ ಸಾಫ್ಟ್‌ವೇರ್‌ನಲ್ಲೂ ಸಮಸ್ಯೆಯಿದ್ದು, ದಿಢೀರ್‌ ಬದಲಾವಣೆ ಸಂಭಾಳಿಸುವುದು ಕಷ್ಟಕರವಾಗಿತ್ತು. ಸಮಸ್ಯೆ ಉದ್ಭವಿಸಿದಾಗ ಅದನ್ನು ನಿಭಾಯಿಸಿ ಪರಿಹರಿಸುವುದರಲ್ಲಿ ಹಿರಿಯ ಅಧಿಕಾರಿಗಳು ಸೋತಿದ್ದರು ಎಂದು ಹೇಳಿದೆ. ಅಲ್ಲದೆ ವಿಮಾನ ಕಾರ್ಯಾಚರಣೆ ಮತ್ತು ಬಿಕ್ಕಟ್ಟು ನಿರ್ವಹಣೆ ಮೇಲ್ವಿಚಾರಣೆಯ ಅಸಮರ್ಪಕತೆಗಾಗಿ ಸಿಇಒ ಪೀಟರ್‌ ಎಲ್ಬರ್ಸ್‌, ಸಿಒಒ ಮತ್ತು ಒಸಿಸಿಗೆ ಎಚ್ಚರಿಕೆ ನೀಡಲಾಗಿದೆ.

ಆಗಿದ್ದೇನು?:

ಸಂಭವನೀಯ ವೈಮಾನಿಕ ಅಪಘಾತಗಳನ್ನು ತಪ್ಪಿಸುವ ಉದ್ದೇಶದಿಂದ, ಪೈಲಟ್‌ಗಳಿಗೆ ಹೆಚ್ಚಿನ ವಿಶ್ರಾಂತಿ ನೀಡುವ ಡಿಜಿಸಿಎ ನಿಯಮಗಳನ್ನು ಡಿಸೆಂಬರ್‌ನಲ್ಲಿ ಜಾರಿಗೆ ತರಲಾಗಿತ್ತು. ಇದರಿಂದ, 2 ವರ್ಷಗಳಿಂದ ಹೊಸ ಸಿಬ್ಬಂದಿಯನ್ನು ನೇಮಿಸಿಕೊಂಡಿರದ ಇಂಡಿಗೋ ಸಂಸ್ಥೆಯಲ್ಲಿ ಪೈಲಟ್‌ಗಳ ಕೊರತೆಯುಂಟಾಗಿ, ಸಾವಿರಾರು ವಿಮಾನಗಳು ತಡವಾಗಿದ್ದವು ಅಥವಾ ರದ್ದಾಗಿದ್ದವು. ಇದರಿಂದ ಲಕ್ಷಾಂತರ ಪ್ರಯಾಣಿಕರು ಪರದಾಡುವಂತಾಗಿ, ಪರಿಸ್ಥಿತಿ ನಿಭಾಯಿಸಲು ಆ ನಿಯಮವೇ ರದ್ದು ಮಾಡಬೇಕಾಗಿ ಬಂದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸುಂದರ ಸ್ತ್ರೀಯರ ಕಂಡು ಪುರುಷರು ವಿಚಲಿತರಾಗಿ ಅತ್ಯಾ*ರ : ಕಾಂಗ್ರೆಸ್‌ ಸಂಸದ
ಮುಂಬೈ ಮೇಯರ್‌ ಹುದ್ದೆ ಅವಧಿ ಹಂಚಿಕೆಗೆ ಸೇನೆ ಸದಸ್ಯರ ಪಟ್ಟು