ದಿಲ್ಲಿ: ಉಷ್ಣ ಮಾರುತಕ್ಕೆ ಒಂದೇ ದಿನ 22 ಜನ ಬಲಿ..!

Published : Jun 21, 2024, 11:40 AM IST
ದಿಲ್ಲಿ: ಉಷ್ಣ ಮಾರುತಕ್ಕೆ ಒಂದೇ ದಿನ 22 ಜನ ಬಲಿ..!

ಸಾರಾಂಶ

ಬುಧವಾರ ಒಂದೇ ದಿನ 20 ಮಂದಿ ಸಾವನ್ನಪ್ಪಿದ್ದರು. ಬಿಸಿಲ ಬೇಗೆ ಕಾರಣ ರಾಷ್ಟ್ರ ರಾಜಧಾನಿಯ ಪ್ರಮುಖ 3 ಆಸ್ಪತ್ರೆಗಳಲ್ಲಿ ಒಂದೇ ದಿನ 72 ಮಂದಿ ದಾಖಲಾಗಿದ್ದರು. ಸಫರ್‌ಜಂಗ್ ಆಸ್ಪತ್ರೆಯಲ್ಲಿ 33 ಜನರು ಉಷ್ಣ ಸಂಬಂಧಿತ ಅನಾರೋಗ್ಯದಿಂದ ದಾಖಲಾಗಿದ್ದು, ಇವರಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ 22 ಜನರಲ್ಲಿ 4 ಜನರು ಮೃತಪಟ್ಟಿದ್ದಾರೆ. ದೆಹಲಿ ಸರ್ಕಾರದ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ 5 ರೋಗಿಗಳು ಮೃತಪಟ್ಟಿದ್ದಾರೆ ಎಂದು ತಿಳಿಸಿದ ಅಧಿಕಾರಿಗಳು.

ನವದೆಹಲಿ(ಜೂ.21):  ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಉಷ್ಣ ಮಾರುತ ತನ್ನ ಆರ್ಭಟಮುಂದುವ ರಿಸಿದೆ. ಇದರ ಪರಿಣಾಮವಾಗಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 22 ಜನರು ಉಷ್ಣ ಸಂಬಂಧಿ ವ್ಯಾಧಿಗಳಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ 2 ದಿನದಲ್ಲಿ 42 ಜನರು ದಿಲ್ಲಿಯಲ್ಲಿ ತಾಪಕ್ಕೆ ಬಲಿಯಾದಂತಾಗಿದೆ.

ಬುಧವಾರ ಒಂದೇ ದಿನ 20 ಮಂದಿ ಸಾವನ್ನಪ್ಪಿದ್ದರು. ಬಿಸಿಲ ಬೇಗೆ ಕಾರಣ ರಾಷ್ಟ್ರ ರಾಜಧಾನಿಯ ಪ್ರಮುಖ 3 ಆಸ್ಪತ್ರೆಗಳಲ್ಲಿ ಒಂದೇ ದಿನ 72 ಮಂದಿ ದಾಖಲಾಗಿದ್ದರು. ಸಫರ್‌ಜಂಗ್ ಆಸ್ಪತ್ರೆಯಲ್ಲಿ 33 ಜನರು ಉಷ್ಣ ಸಂಬಂಧಿತ ಅನಾರೋಗ್ಯದಿಂದ ದಾಖಲಾಗಿದ್ದು, ಇವರಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ 22 ಜನರಲ್ಲಿ 4 ಜನರು ಮೃತಪಟ್ಟಿದ್ದಾರೆ. ದೆಹಲಿ ಸರ್ಕಾರದ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ 5 ರೋಗಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಭಾರತದಲ್ಲಿ ಉಷ್ಣಹವೆ: ಬಿರು ಬಿಸಿಲಿಗೆ ಮತ್ತೆ 54 ಮಂದಿ ಸಾವು..!

1 ವಾರದಲ್ಲಿ 192 ಬಲಿ: 

ಈ ನಡುವೆ, ದಿಲ್ಲಿಯಲ್ಲಿ ಜೂ.11 ರಿಂದ 19ರ ವರೆಗೆ ಒಟ್ಟು 192 ಮಂದಿ ನಿರ್ವಸಿತರು ಬಿಸಿ ಗಾಳಿ ತಾಳದೇ ಮೃತಪಟ್ಟಿದ್ದಾರೆ ಎಂದು ಸ್ವಯಂಸೇವಾ ಸಂಸ್ಥೆಯ ವರದಿ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Indigo Crisis: ಮಗಳಿಗೆ ರಕ್ತ ಸೋರ್ತಿದೆ, ಸ್ಯಾನಿಟರಿ ಪ್ಯಾಡ್​ ಕೊಡಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ತಂದೆಯ ಕಣ್ಣೀರು
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್