
ನವದೆಹಲಿ(ಅ.07): ಕೊರೋನಾ ವೈರಸ್ಗೆ ದೇಶದಲ್ಲಿ ಈವರೆಗೆ ಬಲಿಯಾದವರ ಪೈಕಿ ಶೇ.48ರಷ್ಟುಮಂದಿ 8 ರಾಜ್ಯಗಳ 25 ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ. ಈ ಪೈಕಿ ಮಹಾರಾಷ್ಟ್ರದವೇ 15 ಜಿಲ್ಲೆಗಳು ಇದ್ದರೆ, ಕರ್ನಾಟಕದ 2 ಜಿಲ್ಲೆಗಳು ಸೇರಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಮಿಕ್ಕಂತೆ ಪಶ್ಚಿಮ ಬಂಗಾಳ, ಗುಜರಾತ್ನ ತಲಾ 2, ತಮಿಳುನಾಡು, ಪಂಜಾಬ್, ಉತ್ತರಪ್ರದೇಶ ಹಾಗೂ ಆಂಧ್ರಪ್ರದೇಶದ ತಲಾ 1 ಜಿಲ್ಲೆಗಳು ಇವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ. ಕರ್ನಾಟಕದ 2 ಜಿಲ್ಲೆಗಳು ಯಾವುವು ಎಂಬ ವಿವರವನ್ನು ಅವರು ನೀಡಿಲ್ಲವಾದರೂ, ಬೆಂಗಳೂರು ಹಾಗೂ ಮೈಸೂರು ಜಿಲ್ಲೆಯಲ್ಲಿ ಹೆಚ್ಚು ಸಾವು ಸಂಭವಿಸಿವೆ ಎಂದು ಇತ್ತೀಚೆಗೆ ವರದಿಯೊಂದು ತಿಳಿಸಿತ್ತು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇ.77ರಷ್ಟುಸಕ್ರಿಯ ಪ್ರಕರಣಗಳು 10 ರಾಜ್ಯಗಳಲ್ಲಿ ಕಂಡುಬಂದಿವೆ. ಆ ರಾಜ್ಯಗಳೆಂದರೆ- ಮಹಾರಾಷ್ಟ್ರ, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಉತ್ತರಪ್ರದೇಶ ಎಂದು ತಿಳಿಸಿದರು.
ದೇಶದಲ್ಲಿ ಈವರೆಗೆ 56 ಲಕ್ಷ ಮಂದಿ ಕೊರೋನಾದಿಂದ ಚೇತರಿಸಿಕೊಂಡಿದ್ದಾರೆ. 8.10 ಕೊರೋನಾ ಪರೀಕ್ಷೆಗಳು ನಡೆದಿದ್ದು, ಇಷ್ಟೊಂದು ಪರೀಕ್ಷೆ ನಡೆಸಿದ ವಿಶ್ವದ 2ನೇ ದೇಶ ಭಾರತ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ