ಆಂಧ್ರದಲ್ಲಿ ಎಲ್ಲಾ ರಾಜ್ಯದ ಹಿರಿಯರಿಗೂ ಬಸ್‌ ದರದಲ್ಲಿ ಶೇ.25ರಷ್ಟು ರಿಯಾಯಿತಿ

Published : Nov 16, 2024, 09:01 AM IST
ಆಂಧ್ರದಲ್ಲಿ ಎಲ್ಲಾ ರಾಜ್ಯದ ಹಿರಿಯರಿಗೂ ಬಸ್‌ ದರದಲ್ಲಿ ಶೇ.25ರಷ್ಟು ರಿಯಾಯಿತಿ

ಸಾರಾಂಶ

ಆಂಧ್ರಪ್ರದೇಶದಲ್ಲಿ 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಬಸ್‌ ಟಿಕೆಟ್‌ಗಳಲ್ಲಿ ಶೇ.25ರಷ್ಟು ರಿಯಾಯಿತಿ ನೀಡಲಾಗುವುದು. ಪ್ರಯಾಣದ ವೇಳೆ ವಯಸ್ಸಿನ ಪುರಾವೆ ತೋರಿಸುವುದು ಕಡ್ಡಾಯ.

ಅಮರಾವತಿ: ಎಲ್ಲಾ ರಾಜ್ಯದ ಹಿರಿಯ ನಾಗರಿಕರಿಗೆ ಬಸ್‌ ಟಿಕೆಟ್‌ ದರದಲ್ಲಿ ಶೇ.25 ರಷ್ಟು ರಿಯಾಯಿತಿ ನೀಡುವುದಾಗಿ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ (ಎಪಿಎಸ್‌ಆರ್‌ಟಿಸಿ) ಘೋಷಿಸಿದೆ. ಈ ರಿಯಾಯಿತಿ ಎಲ್ಲಾ ಬಸ್‌ಗಳಲ್ಲೂ ಅನ್ವಯವಾಗುತ್ತದೆ. 60 ವರ್ಷ ಮೇಲ್ಪಟ್ಟರು ತಮ್ಮ ಪ್ರಯಾಣದ ವೇಳೆ ವಯಸ್ಸಿನ ಪುರಾವೆಯಾಗಿ ಆಧಾರ್ ಕಾರ್ಡ್, ಹಿರಿಯ ನಾಗರಿಕರ ಗುರುತಿನ ಚೀಟಿ, ಪಾನ್‌ ಕಾರ್ಡ್, ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್ ಅಥವಾ ಪಡಿತರ ಚೀಟಿಯನ್ನು ಭೌತಿಕವಾಗಿ ಅಥವಾ ಡಿಜಿಟಲ್‌ ರೂಪದಲ್ಲಿ ತೋರಿಸಿ ಶೇ.25ರಷ್ಟು ರಿಯಾಯಿತಿ ಪಡೆಯಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸಕ್ತ ಬಹುತೇಕ ಎಲ್ಲಾ ರಾಜ್ಯಗಳಲ್ಲೂ ಆಯಾ ರಾಜ್ಯದ ನಾಗರಿಕರಿಗೆ ಮಾತ್ರ ಪ್ರಯಾಣದಲ್ಲಿ ರಿಯಾಯಿತಿ ಇದೆ.

ಟ್ರಾಫಿಕ್ ನಿರ್ವಹಣೆಗೆ ತೃತೀಯ ಲಿಂಗಿಗಳು
ಹೈದರಾಬಾದ್‌: ಹೈದರಾಬಾದ್‌ನಲ್ಲಿ ಹೆಚ್ಚು ಜನ ಸಂಚಾರವಿರುವ ಕಡೆಗಳಲ್ಲಿ ದಟ್ಟಣೆ ನಿಯಂತ್ರಣಕ್ಕೆ ತೃತೀಯ ಲಿಂಗಿಗಳನ್ನು ಸ್ವಯಂ ಸೇವಕರಾಗಿ ನೇಮಿಸಲು ಸಿಎಂ ರೇವಂತ್ ರೆಡ್ಡಿಅಧಿಕಾರಿಗಳಿಗೆಸೂಚಿಸಿದ್ದಾರೆ.

ಅಧಿಕಾರಿಗಳ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ರೇವಂತ್ ಈ ನಿರ್ಧಾರ ಕೈಗೊಂಡಿದ್ದು, ತೃತೀಯ ಲಿಂಗಿಗಳ ಸೇವೆ ಸದುಪಯೋಗ ಬಳಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಹೋಂ ಗಾರ್ಡ್‌ಗಳಾಗಿ ನೇಮಕ ಮಾಡಲು ಆದೇಶಿಸಿದ್ದಾ ರೆ. ಆದಷ್ಟು ಶೀಘ್ರವೇ ಯೋಜನೆಯನ್ನು ಜಾರಿಗೆ ತಂದು ತೃತೀಯ ಲಿಂಗಿಗಳನ್ನು ನೇಮಿಸಿಕೊಂಡು ವೇತನ ನಿಗದಿ ಮಾಡಲಿದ್ದೇವೆ ಎಂದರು.

ಇದನ್ನೂ ಓದಿ: 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ
25 ಜನರು ಸಾವನ್ನಪ್ಪಿದ ಪಬ್‌ ಮಾಲೀಕರ ರೆಸಾರ್ಟ್‌ ಧ್ವಂಸ