
ಪಣಜಿ(ಮೇ.12): ಮಂಗಳವಾರ ನಸುಕಿನ ಜಾವ ಕೇವಲ 4 ಗಂಟೆಯ ಅವಧಿಯಲ್ಲಿ 26 ಕೋವಿಡ್ ಸೋಂಕಿತರು ಸಾವಿಗೀಡಾದ ದಾರುಣ ಘಟನೆ ಸರ್ಕಾರಿ ಸ್ವಾಮ್ಯದ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ(ಜಿಎಂಸಿಎಚ್)ಯಲ್ಲಿ ನಡೆದಿದೆ.
ಕೋವಿಡ್ ಸೋಂಕಿತರ ಸಾವಿಗೆ ನಿಖರ ಕಾರಣವೇನು ಎಂಬುದರ ತನಿಖೆಯನ್ನು ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಅವರು ಹೈಕೋರ್ಟ್ಗೆ ವಹಿಸಿದ್ದಾರೆ. ಮತ್ತೊಂದೆಡೆ ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು, ‘ಆಸ್ಪತ್ರೆಯಲ್ಲಿನ ವೈದ್ಯಕೀಯ ಆಮ್ಲಜನಕದ ಕೊರತೆಯೇ ಕೆಲ ಕೋವಿಡ್ ಸೋಂಕಿತರ ಸಾವಿಗೆ ಕಾರಣವಿರಬಹುದು’ ಎಂದು ಹೇಳಿದ್ದಾರೆ.
ಜಿಎಂಸಿಎಚ್ ಆಸ್ಪತ್ರೆಗೆ ಒಟ್ಟಾರೆ 1200 ಜಂಬೋ ಸಿಲಿಂಡರ್ಗಳ ಆಮ್ಲಜನಕದ ಅಗತ್ಯವಿದೆ. ಆದರೆ ಆಸ್ಪತ್ರೆಯಲ್ಲಿ ಕೇವಲ 400 ಜಂಬೋ ಸಿಲಿಂಡರ್ಗಳಿದ್ದವು ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ