ಉಕ್ರೇನ್‌ನಿಂದ ಭಾರತಕ್ಕೆ ಆಗಮಿಸಿದ 2ನೇ ವಿಮಾನ, 250 ವಿದ್ಯಾರ್ಥಿಗಳು ತಾಯ್ನಾಡಿಗೆ!

Published : Feb 27, 2022, 07:11 AM IST
ಉಕ್ರೇನ್‌ನಿಂದ ಭಾರತಕ್ಕೆ ಆಗಮಿಸಿದ 2ನೇ ವಿಮಾನ, 250 ವಿದ್ಯಾರ್ಥಿಗಳು ತಾಯ್ನಾಡಿಗೆ!

ಸಾರಾಂಶ

* ಉಕ್ರೇನ್, ರಷ್ಯಾ ನಡುವೆ ಕದನ  * ಉಭಯ ರಾಷ್ಟ್ರಗಳ ಅಟ್ಟಹಾಸಕ್ಕೆ ನಲುಗಿದ ನಾಗರಿಕರು * ಭಾರತೀಯ ವಿದ್ಯಾರ್ಥಿಗಳನ್ನು ಮತ್ತೆ ತಾಯ್ನಾಡಿಗೆ ಕರೆತಂದ ಭಾರತ

ನವದೆಹಲಿ(ಫೆ.27): ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ನಡೆಯುತ್ತಿದೆ. ಭಾನುವಾರ ಬೆಳಿಗ್ಗೆ, ಉಕ್ರೇನ್‌ನಲ್ಲಿ ಸಿಲುಕಿರುವ 250 ಭಾರತೀಯ ಪ್ರಜೆಗಳನ್ನು ಹೊತ್ತ ಏರ್ ಇಂಡಿಯಾದ ಎರಡನೇ ವಿಮಾನವು ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ ದೆಹಲಿ ತಲುಪಿದೆ. ಉಕ್ರೇನ್‌ನಲ್ಲಿ ಸಿಲುಕಿರುವ 250 ಭಾರತೀಯ ಪ್ರಜೆಗಳನ್ನು ಹೊತ್ತ ಏರ್ ಇಂಡಿಯಾದ ಎರಡನೇ ಬಾರಿ ಸ್ಥಳಾಂತರಿಸುವ ವಿಮಾನವು ರೊಮೇನಿಯಾ ರಾಜಧಾನಿ ಬುಕಾರೆಸ್ಟ್‌ನಿಂದ ಭಾನುವಾರ ಮುಂಜಾನೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸ್ಥಳಾಂತರಗೊಂಡವರನ್ನು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಗುಲಾಬಿಗಳೊಂದಿಗೆ ಸ್ವಾಗತಿಸಿದರು.

ಮೊದಲ ವಿಮಾನ ಶನಿವಾರ ಭಾರತಕ್ಕೆ

ಉಕ್ರೇನ್‌ನಲ್ಲಿ ರಷ್ಯಾದ ಸೇನಾ ದಾಳಿಯ ನಡುವೆ ಸಿಲುಕಿರುವ ತನ್ನ ನಾಗರಿಕರನ್ನು ಸ್ಥಳಾಂತರಿಸುವ ಕಾರ್ಯವನ್ನು ಭಾರತ ಶನಿವಾರ ಆರಂಭಿಸಿದೆ. ಮೊದಲ ಪಾರುಗಾಣಿಕಾ ವಿಮಾನ, AI1944, ಶನಿವಾರ ಸಂಜೆ ಬುಕಾರೆಸ್ಟ್‌ನಿಂದ 219 ಜನರನ್ನು ಮರಳಿ ಮುಂಬೈಗೆ ಕರೆತಂದಿತು. ಎಐ1942 ಎಂಬ ಎರಡನೇ ನಿರ್ಗಮನ ವಿಮಾನವು ಸುಮಾರು 250 ಭಾರತೀಯರನ್ನು ಹೊತ್ತೊಯ್ದಿದ್ದು, ಭಾನುವಾರ ಬೆಳಗಿನ ಜಾವ 2.45ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಷ್ಯಾದ ದಾಳಿಯಿಂದಾಗಿ ಉಕ್ರೇನ್‌ನಿಂದ ವಿಮಾನ ಸ್ಥಗಿತ

ಫೆಬ್ರವರಿ 24 ರ ಬೆಳಿಗ್ಗೆಯಿಂದ ಉಕ್ರೇನಿಯನ್ ವಾಯುಪ್ರದೇಶವನ್ನು ನಾಗರಿಕ ವಿಮಾನ ಕಾರ್ಯಾಚರಣೆಗಳಿಗೆ ಮುಚ್ಚಲಾಗಿದೆ. ರಷ್ಯಾದ ಮಿಲಿಟರಿ ಆಕ್ರಮಣದ ಪ್ರಾರಂಭದಿಂದಾಗಿ ವಿಮಾನವನ್ನು ರದ್ದುಗೊಳಿಸಲಾಗಿದೆ. ಆದ್ದರಿಂದ, ಭಾರತೀಯ ಸ್ಥಳಾಂತರಿಸುವ ವಿಮಾನಗಳು ಬುಕಾರೆಸ್ಟ್ ಮತ್ತು ಬುಡಾಪೆಸ್ಟ್‌ನಿಂದ ಕಾರ್ಯನಿರ್ವಹಿಸುತ್ತಿವೆ.

ಉಕ್ರೇನ್-ರೊಮೇನಿಯಾ ಗಡಿ ಮತ್ತು ಉಕ್ರೇನ್-ಹಂಗೇರಿ ಗಡಿಗೆ ಆಗಮಿಸುವ ಭಾರತೀಯ ಪ್ರಜೆಗಳನ್ನು ಈ ಏರ್ ಇಂಡಿಯಾ ವಿಮಾನಗಳಲ್ಲಿ ಸ್ಥಳಾಂತರಿಸಲು ಭಾರತೀಯ ಸರ್ಕಾರಿ ಅಧಿಕಾರಿಗಳ ನೆರವಿನೊಂದಿಗೆ ಕ್ರಮವಾಗಿ ಬುಕಾರೆಸ್ಟ್ ಮತ್ತು ಬುಡಾಪೆಸ್ಟ್‌ಗೆ ರಸ್ತೆಯ ಮೂಲಕ ಕರೆದೊಯ್ಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಮಾರು 16 ಸಾವಿರ ಭಾರತೀಯರು ಸಿಲುಕಿಕೊಂಡಿದ್ದಾರೆ

ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಫೆಬ್ರವರಿ 24 ರಂದು ಸುಮಾರು 16,000 ಭಾರತೀಯರು, ಮುಖ್ಯವಾಗಿ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರಿ ಸದ್ದು ಮಾಡ್ತಿದೆ ಪುಟಿನ್​ ತಂದ ಸೂಟ್​ಕೇಟ್: ಅದರ ಹಿಂದಿದೆ ಊಹೆಗೆ ನಿಲುಕದ ವಿಚಿತ್ರ ಸ್ಟೋರಿ! ಏನಿದೆ ಅದರಲ್ಲಿ?
Indigo Crisis: ಮಗಳಿಗೆ ರಕ್ತ ಸೋರ್ತಿದೆ, ಸ್ಯಾನಿಟರಿ ಪ್ಯಾಡ್​ ಕೊಡಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ತಂದೆಯ ಕಣ್ಣೀರು