ಸೆಲ್ಫಿ ಕ್ರೇಜ್‌ಗೆ 3 ಬಾಲಕಿಯರು ಬಲಿ: ಜಲಪಾತದಲ್ಲಿ ಫೋಟೋ ತೆಗೆಯುವಾಗ ದುರಂತ: ಕೊನೆಕ್ಷಣ ಕ್ಯಾಮರಾದಲ್ಲಿ ಸೆರೆ

Published : Apr 10, 2026, 12:47 PM IST
3 teenage girl drowned to death in waterfalls

ಸಾರಾಂಶ

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಜಲಪಾತವೊಂದರಲ್ಲಿ ಮೂವರು ಹದಿಹರೆಯದ ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಫೋಟೋ ತೆಗೆಯುತ್ತಿದ್ದಾಗ ಬಂಡೆಯಿಂದ ಆಯತಪ್ಪಿ ನೀರಿಗೆ ಬಿದ್ದು ಈ ದುರಂತ ಸಂಭವಿಸಿದ್ದು, ಅವರ ಕೊನೆಯ ಕ್ಷಣಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.

ನೀರು ಪಾಲಾದ ಹದಿಹರೆಯದ ಮೂವರು ಗೆಳತಿಯರು

ಅಮರಾವತಿ: ಬೇಸಿಗೆ ಕಾಲದ ರಜೆ ಪೋಷಕರಿಗಂತೂ ದೊಡ್ಡ ಶಿಕ್ಷೆಯಂತೆ ಕಾಡುತ್ತಿದೆ. ಪೋಷಕರ ಮಾತು ಕೇಳದೇ ಮಕ್ಕಳು ಹಳ್ಳ ಕೊಳ್ಳ, ಕೆರೆ ನದಿ ಸಮುದ್ರ ಅಂತ ನೀರಿನ ಮೂಲವನ್ನು ಅರಸಿ ಈಜಾಡುವುದಕ್ಕೆ ಹೋಗುತ್ತಿದ್ದು, ತಮ್ಮ ಪ್ರಾಣಕ್ಕೆ ಸಂಚಾಕಾರ ತಂದುಕೊಳ್ಳುತ್ತಿದ್ದಾರೆ. ನಿನ್ನೆಯಷ್ಟೇ ಸ್ನೇಹಿತರ ಜೊತೆ ಈಜಾಡುವುದಕ್ಕೆ ಹೋಗಿ ಬೆಳಗಾವಿಯ ರಾಯಭಾಗದಲ್ಲಿ ಬಾಲಕನೋರ್ವ ಪ್ರಾಣ ಬಿಟ್ಟಿದ್ದಾನೆ. ಈಗ ಇಂತಹದ್ದೇ ಘಟನೆಯೊಂದು ನೆರೆರಾಜ್ಯ ಆಂಧ್ರಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ನೀರಿನಲ್ಲಿ ಈಜಾಡುತ್ತಿದ್ದಾಗಲೇ ಮೂವರು ಹದಿಹರೆಯದ ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಆಘಾತಕಾರಿ ವಿಚಾರವೆಂದರೆ ಇವರ ಕೊನೆಕ್ಷಣಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ನೀರಿನಲ್ಲಿ ಫೋಟೋ ತೆಗೆಯುವ ವೇಳೆಯೇ ಈ ದುರಂತ ಸಂಭವಿಸಿದೆ.

ಯುವತಿಯರ ಕೊನೆಕ್ಷಣ ಕ್ಯಾಮರಾದಲ್ಲಿ ಸೆರೆ!

ಇಲ್ಲಿನ ಹುಕುಂಪೇಟ ಮಂಡಲದ ಬುರ್ಜಾ ಪಂಚಾಯತ್‌ ಬಳಿಯ ಮುಲ್ಲುನ್ಗುಮ್ಮಿ ಎಂಬ ಜಲಪಾತದ ಬಳಿ ಈ ದುರಂತ ಸಂಭವಿಸಿದೆ. ರಜಾ ದಿನವಾಗಿದ್ದರಿಂದ ಜಂಬವಲಸಾ ಗ್ರಾಮದ ಐವರು ಹುಡುಗಿಯರು ಈ ಜಲಪಾತವನ್ನು ನೋಡುವುದಕ್ಕೆ ಆಗಮಿಸಿದ್ದರು. ಈ ಸಮಯದಲ್ಲಿ ನೀರಿನಲ್ಲಿ ಈಜಾಡುತ್ತಾ ಎಂಜಾಯ್ ಮಾಡುತ್ತಿದ್ದಾಗ ಫೋಟೋ ಕ್ಲಿಕ್ಕಿಸಲು ಮುಂದಾಗಿದ್ದು, ಇದೇ ವೇಳೆ ಈ ದುರಂತ ಸಂಭವಿಸಿದೆ.

ಪೊಲೀಸರ ಪ್ರಕಾರ, ಈ ಹುಡುಗಿಯರು ಸೇತುವೆಯ ಬಳಿಯೇ ಫೋಟೋ ಹಾಗೂ ಸೆಲ್ಫಿ ವೀಡಿಯೋ ಮಾಡಿದ್ದಾರೆ. ಬಳಿಕ ಐವರಲ್ಲಿ ಮೂವರು ಹುಡುಗಿಯರು ಜಲಪಾತದ ಮಧ್ಯೆ ಇರುವ ದೊಡ್ಡ ಬಂಡೆಯೊಂದನ್ನು ಏರಿದ್ದಾರೆ. ಇದೇ ವೇಳೆ ಅವರು ಅಲ್ಲಿಂದ ಆಯತಪ್ಪಿ ನೀರಿಗೆ ಬಿದ್ದಿದ್ದು, ನೀರಿನಲ್ಲಿ ಮುಳುಗಿ ಹೋಗಿದ್ದಾರೆ.

ಇದನ್ನೂ ಓದಿ: ನಾಪತ್ತೆಯಾದ ಚೆಕ್​​ಬುಕ್ ಹುಡುಕುವ ನೆಪ : ಮಹಿಳೆಯ ಬಟ್ಟೆ ಬಿಚ್ಚಿಸಿ ವಿಕೃತಿ ಮೆರೆದ MSILಚಿಟ್​ಫಂಡ್ ಅಧಿಕಾರಿಗಳು

ಅಲ್ಲಿದ್ದ ಸ್ಥಳೀಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರಾದರೂ ನೀರಿನ ಹರಿವಿನ ರಭಸಕ್ಕೆ ಸಿಲುಕಿ ಯುವತಿಯರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರ ಮೃತದೇಹಗಳನ್ನು ನಂತರ ನೀರಿನಿಂದ ಮೇಲೆತ್ತಲಾಗಿದೆ. ಹೀಗೆ ನೀರಿನಲ್ಲಿ ಮುಳುಗಿ ಪ್ರಾಣಬಿಟ್ಟ ಹರೆಯದ ಬಾಲಕಿಯರನ್ನು 17 ವರ್ಷದ ತ್ರಿಶಾ 16 ವರ್ಷದ ರತ್ನಕುಮಾರಿ, ಹಾಗೂ 16 ವರ್ಷದ ಪವಿತ್ರಾ ಎಂದು ಗುರುತಿಸಲಾಗಿದೆ. ಉಳಿದಿಬ್ಬರು ಯುವತಿಯರು ಸುರಕ್ಷಿತವಾಗಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ. ಈ ಘಟನೆ ಈಗ ಸ್ಥಳೀಯರಲ್ಲಿ ತೀವ್ರ ಕಳವಳ ಮೂಡಿಸಿದೆ. ಘಟನೆ ನಡೆದ ಸ್ಥಳವು ಅಲ್ಲುರಿ ಜಿಲ್ಲೆಯಲ್ಲಿ ಬರುವ ಅತೀ ಸುಂದರವಾದ ಜಲಪಾತವಾಗಿದ್ದು, ಸುಂದರವಾದ ನೈಸರ್ಗಿಕ ದೃಶ್ಯಗಳಿಂದ ಗಮನ ಸೆಳೆಯುತ್ತಿದೆ. ಇಲ್ಲಿ ಈ ಹಿಂದೆಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದಂತಹ ಹಲವು ಘಟನೆಗಳು ನಡೆದಿದ್ದವು.

ಇದನ್ನೂ ಓದಿ: ಪಾಕ್ ಎಡವಟ್ಟಿನಿಂದ ಲೆಬನಾನ್ ಗೊಂದಲ: ಬೇರೆ ಬೇರೆ ಸಂಧಾನ ಪ್ರತಿ ಹಂಚಿ ಎಡವಟ್ಟು: ಇಸ್ರೇಲ್ ದಾಳಿಗೆ ಲೆಬನಾನ್‌ಲ್ಲಿ 300 ಬಲಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

COVID ಟೈಂನಲ್ಲಿ ಡಿಎಂಕೆ ಅಧಿಕಾರದಲ್ಲಿದ್ದಿದ್ರೆ ಸ್ಟಾಲಿನ್ ಸತ್ತೋಗಿರ್ತಿದ್ರು; ಪಳನಿಸ್ವಾಮಿ
ಪಂಚರಾಜ್ಯ ಚುನಾವಣೆ: ಕೇರಳ, ಪುದುಚೇರಿ, ಅಸ್ಸಾಂನಲ್ಲಿ ದಾಖಲೆಯ ಮತದಾನ