ಜಲ್ಲಿಕಟ್ಟು ತಂದ ಆಪತ್ತು: 3 ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ..!

Published : Jan 10, 2021, 09:16 PM IST
ಜಲ್ಲಿಕಟ್ಟು ತಂದ ಆಪತ್ತು: 3 ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ..!

ಸಾರಾಂಶ

ವಿವಾದಿತ ಜಲ್ಲಿಕಟ್ಟು ಆಯೋಜನೆ ಮಾಡಿದ್ದರಿಂದ ಮೂವರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡರುವ ಘಟನೆ ಸಂಭವಿಸಿದೆ.

ಚೆನ್ನೈ, (ಜ.10): ಜಲ್ಲಿಕಟ್ಟು ನೋಡುವ ವೇಳೆ ಮನೆ ಗೋಡೆ ಕುಸಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಹೊಸೂರು ಸಮೀಪದ ಮೇಪನಪಲ್ಲಿ ಬಳಿ ನಡೆದಿದೆ.

ಘಟನೆಯಲ್ಲಿ 2 ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸಮೀಪದ ಕೃಷ್ಣಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಸುಗ್ಗಿ ಸಂಕ್ರಾಂತಿ; ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸಂಭ್ರಮವೋ ಸಂಭ್ರಮ!

ಸಂಕ್ರಾಂತಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಈ ಜಲ್ಲಿಕಟ್ಟು ಸ್ಪರ್ಧೆ ನೋಡಲು ಜನ ಸಮೂಹ ಸೇರಿತ್ತು. ಕೆಲವರು ಮನೆಯ ಟೆರೇಸ್ ಮೇಲೆ ನಿಂತು ವೀಕ್ಷಣೆ ಮಾಡುತ್ತಿದ್ರು.  

ಮನೆ ಮೇಲೆ ಭಾರಿ ಜನಸಮೂಹ ಸೇರುತ್ತಿದ್ದಂತೆ ಇದ್ದಕ್ಕಿದ್ದಂತೆ ಗೋಡೆ ಕುಸಿದಿದೆ. ಇನ್ನು ಘಟನಾ ಸ್ಥಳಕ್ಕೆ ಕೃಷ್ಣಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?