ಪವಿತ್ರ ಅಮರನಾಥ ಯಾತ್ರೆಗೆ 3 ಲಕ್ಷ ಭಕ್ತರು ನೋಂದಣಿ, ಜೂನ್ 30 ರಿಂದ ಆರಂಭ!

Published : Jun 27, 2022, 06:59 PM IST
ಪವಿತ್ರ ಅಮರನಾಥ ಯಾತ್ರೆಗೆ 3 ಲಕ್ಷ ಭಕ್ತರು ನೋಂದಣಿ, ಜೂನ್ 30 ರಿಂದ ಆರಂಭ!

ಸಾರಾಂಶ

ಜೂನ್ 30 ರಿಂದ ಪವಿತ್ರ ಅಮರನಾಥ ಯಾತ್ರೆ ಆರಂಭ ದಕ್ಷಿಣ ಕಾಶ್ಮೀರ ಹಿಮಾಲಯ ವಲಯದಲ್ಲಿ ಭಾರಿ ಭದ್ರತೆ ಆನ್‌ಲೈನ್ ಮೂಲಕ 3 ಲಕ್ಷ ಭಕ್ತರು ನೋಂದಣಿ

ಕಾಶ್ಮೀರ(ಜೂ.27): ಪವಿತ್ರ ಅಮರನಾಥ ಯಾತ್ರೆ ಜೂನ್ 30 ರಿಂದ ಆರಂಭಗೊಳ್ಳುತ್ತಿದೆ. ಆನ್‌ಲೈನ್ ಮೂಲಕ ಈಗಾಗಲೇ 3 ಲಕ್ಷ ಭಕ್ತರು ಅಮರನಾಥ ಯಾತ್ರೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಈಗಾಗಲೇ ದಕ್ಷಿಣ ಕಾಶ್ಮೀರದ ಹಿಮಾಲಯ ಭಾಗದಲ್ಲಿ ಭಾರಿ ಭದ್ರತೆ ಒದಗಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಕೊರೋನಾ ಕಾರಣದಿಂದ ಕಳೆದ ಎರಡು ವರ್ಷ ಅಮರನಾಥ ಯಾತ್ರೆಗೆ ನಿರ್ಬಂಧ ಹೇರಲಾಗಿತ್ತು. ಈ ಬಾರಿ ಕೇಂದ್ರ ಸರ್ಕಾರ ಅಮರನಾಥ ಯಾತ್ರೆಗೆ ಅವಕಾಶ ಮಾಡಿಕೊಡಲಾಗಿದೆ. ಇದರ ಜೊತೆಗೆ ಹಲವು ವಿಶೇಷ ಸೌಲಭ್ಯಗಳನ್ನು ನೀಡಿದೆ. ಯಾತ್ರೆ ಆರಂಭಗೊಂಡರು ನೋಂದಣಿ ಮುಂದುವರಿಯಲಿದೆ. ಈಗಲೂ ಭಕ್ತರಿಗೆ ಯಾತ್ರೆಗೆ ನೋಂದಣಿ ಮಾಡಲು ಅವಕಾಶವಿದೆ ಎಂದು ಅಮರನಾಥ ಯಾತ್ರಾ ಬೋರ್ಡ್ ಹೇಳಿದೆ.

ಅಮರನಾಥ ಯಾತ್ರೆಗೆ ಕೇಂದ್ರದಿಂದ ಹೆಲಿಕಾಪ್ಟರ್ ಸೇವೆ, ಬುಕಿಂಗ್ ಪೋರ್ಟಲ್ ಚಾಲನೆ!

ಎರಡು ದಾರಿಗಳ ಮೂಲಕ ಅಮರನಾಥ ಯಾತ್ರೆ ನಡೆಯಲಿದೆ. ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನ ನುವಾನ್‌ನಿದ 48 ಕಿಲೋಮೀಟರ್ ದೂರದ ಯಾತ್ರೆ ಹಾಗೂ ಕೇಂದ್ರ ಕಾಶ್ಮೀರದ ಗುಂದೆರ್ಬಾಲ್‌ನಿಂದ 14 ಕಿಲೋಮೀಟರ್ ದೂರದ ಯಾತ್ರೆ ಮತ್ತೊಂದು ದಾರಿಯಾಗಿದೆ.

ಸಾಧುಗಳು ಸೇರಿದ ಮೊದಲ ತಂಡ ಕಾಶ್ಮೀರದ ಭಗವತಿ ನಗರ ಹಾಗೂ ಜಮ್ಮು ರಾಮಮಂದಿರದಿಂದ ತೆರಳಲಿದೆ. ಯಾತ್ರೆಗೆ 13 ವರ್ಷಕ್ಕಿಂತ ಕೆಳಗಿನವರು, 75 ವರ್ಷಕ್ಕಿಂತ ಮೇಲಿನವರು ಹಾಗೂ 6 ವಾರಕ್ಕಿಂತ ಹೆಚ್ಚಿನ ಗರ್ಭಿಣಿಯರಿಗೆ ನಿರ್ಬಂಧ ಹೇರಲಾಗಿದೆ. ಆರೋಗ್ಯದ ದೃಷ್ಠಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಜೂ.30ರಿಂದ ಅಮರನಾಥ ಗುಹೆಗೆ ಭೇಟಿ ನೀಡುವ ಯಾತ್ರಿಕರ ಕೊನೆಯ ಹೆಲಿಕಾಪ್ಟರ್‌ ನಿಲ್ದಾಣವಾದ ಪಂಚಕರ್ಣಿಗೆ ಶ್ರೀನಗರದಿಂದ ಹೊಸ ಹೆಲಿಕಾಪ್ಟರ್‌ ಸೇವೆ ಒದಗಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಮರನಾಥ ಯಾತ್ರೆಗೆ ಈಗಾಗಲೇ 2 ಮಾರ್ಗಗಳ ಮೂಲಕ ಹೆಲಿಕಾಪ್ಟರ್‌ ಸೇವೆ ಒದಗಿಸಲಾಗುತ್ತಿದೆ. 3ನೇ ಹೆಲಿಕಾಪ್ಟರ್‌ ಇದಾಗಲಿದೆ.

ಶೀಘ್ರದಲ್ಲೇ ಅಮರನಾಥ ಯಾತ್ರೆ ಪ್ರಾರಂಭ; ಮಂಜಲ್ಲಿ ಕಾಣಿಸಿಕೊಳ್ಳೋ ಭೋಲೇನಾಥ

3,888 ಮೀ. ಎತ್ತರದಲ್ಲಿರುವ ಅಮರನಾಥ ದೇವಾಲಯಕ್ಕೆ ಭೇಟಿ ನೀಡುತ್ತಿರುವ ಯಾತ್ರಿಕರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಹೆಲಿಕಾಪ್ಟರ್‌ ಸೇವೆ ಒದಗಿಸಲು ಸರ್ಕಾರ ಆಲೋಚಿಸಿದೆ. ಈ ಸೇವೆ ಶ್ರೀನಗರ ಸಮೀಪ ಬುದ್ಗಾಮ್‌ನಿಂದ ಪಂಚಕರ್ಣಿಗೆ ಕಾಪ್ಟರ್‌ ಸೌಲಭ್ಯ ಒದಗಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಬಲ್ಟಾಲ್‌ ಮತ್ತು ಪಹಲ್‌ಗಾಂನಿಂದ ಪಂಚಕರ್ಣಿಗೆ ಹೆಲಿಕಾಪ್ಟರ್‌ ಸೌಲಭ್ಯವಿದೆ. ಈ ಬಾರಿಯ ಅಮರನಾಥ ಯಾತ್ರೆ ಜೂ.30ರಂದು ಆರಂಭಗೊಳ್ಳಲಿದ್ದು, 43 ದಿನಗಳ ಕಾಲ ಇರಲಿದೆ.

ಜಮ್ಮು ಕಾಶ್ಮೀರದಲ್ಲಿ ಉಗ್ರ ದಾಳಿ ನಡೆಯುತ್ತಿರುವ ಭೀತಿಯ ಹಿನ್ನೆಲೆಯಲ್ಲಿ ಈ ಬಾರಿ ಅಮರನಾಥ ಯಾತ್ರಿಗಳಿಗೆ ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಷನ್‌ (ಆರ್‌ಎಫ್‌ಐಡಿ) ಟ್ಯಾಗ್‌ ವಿತರಿಸಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಜೊತೆಗೆ ಯಾತ್ರಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಅವರಿರುವ ಸ್ಥಳವನ್ನು ದಿನದ 24 ಗಂಟೆಯೂ ಟ್ರ್ಯಾಕ್‌ ಮಾಡಲಾಗುತ್ತದೆ.

ಈ ಕ್ರಮದಿಂದಾಗಿ ಯಾತ್ರಿಗಳಿಗೆ ವಸತಿ ಸೌಲಭ್ಯ ಕಲ್ಪಿಸುವುದರ ಜೊತೆಗೆ ಪ್ರತಿಕೂಲ ಹವಾಮಾನ, ಆರೋಗ್ಯ ಸಮಸ್ಯೆ ಮತ್ತು ಸಂಭವನೀಯ ಉಗ್ರದಾಳಿಯಿಂದ ರಕ್ಷಿಸಲು ಅನುಕೂಲವಾಗಲಿದೆ. ಜೂ.30ರಿಂದ ಆರಂಭವಾಗಲಿರುವ ಯಾತ್ರೆಯ ಸಿದ್ಧತೆಗಳನ್ನು ಪರಿಶೀಲಿಸಲು ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಭಕ್ತರಿಗೆ ಸುಲಭ ಮತ್ತು ತೊಂದರೆಮುಕ್ತ ದರ್ಶನಕ್ಕೆ ಅವಕಾಶ ಮಾಡಿಕೊಡುವುದು ನಮ್ಮ ಆದ್ಯತೆಯಾಗಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್