ಕಳ್ಳರೆಂಬ ವದಂತಿ: ಇಬ್ಬರು ಸಾಧು ಸೇರಿ ಮೂವರು ಗುಂಪು ಥಳಿತಕ್ಕೆ ಬಲಿ!

Published : Apr 19, 2020, 01:01 PM ISTUpdated : Apr 19, 2020, 01:09 PM IST
ಕಳ್ಳರೆಂಬ ವದಂತಿ: ಇಬ್ಬರು ಸಾಧು ಸೇರಿ ಮೂವರು ಗುಂಪು ಥಳಿತಕ್ಕೆ ಬಲಿ!

ಸಾರಾಂಶ

ವದಂತಿಗಳಿಗೆ ಕಿವಿಗೊಡಬೇಡಿ ಅಂದ್ರೂ ಪ್ರಯೋಜನವಿಲ್ಲ| ಕಳ್ಳರೆಂಬ ವದಂತಿಗೆ ಕಿವಿಗೊಟ್ಟು ಮೂವರ ಮೇಲೆ ಗುಂಪು ಥಳಿತ| ಘಟನೆಯಲ್ಲಿ ಇಬ್ಬರು ಸಾಧು ಸೇರಿ ಮೂವರು ಸಾವು

ಮಹಾರಾಷ್ಟ್ರ(ಏ.19): ಕಳ್ಳತನ ನಡೆಸಿದ್ದಾರೆಂಬ ಅನುಮಾನದ ಮೇರೆಗೆ ನಡೆದ ಗುಂಪು ಥಳಿತಕ್ಕೆ ಇಬ್ಬರು ಸಾಧುಗಳು ಸೇರಿ ಮೂವರು ಬಲಿಯಾಗಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲೆಯ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಗುರುವಾರದಂದು ನಡೆದಿದ್ದು, ಸದ್ಯ ಈ ಘಟನೆ ವಿಡಿಯೋಗಳು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿವೆ.

ಪ್ರಕರಣ ಸಂಬಂಧ ಮಾಹಿತಿ ನೀಡಿರುವ ಪೊಲೀಸರು ಕಳ್ಳರೆಂಬ ಅನುಮಾನದ ಮೇರೆಗೆ ಅವರು ಬಂದಿದ್ದ ವಾಹನದ ಬಳಿ ಸುಮಾರು 200 ಕ್ಕೂ ಅಧಿಕ ಗ್ರಾಮಸ್ಥರು ಗುಂಪುಗೂಡಿದ್ದರು. ಆರಂಭದಲ್ಲಿ ಕಲ್ಲುಗಳನ್ನೆಸೆದು ದಾಳಿ ನಡೆಸಿದ್ದ ಗ್ರಾಮಸ್ಥರು, ವಾಹನ ನಿಂತ ಬೆನ್ನಲ್ಲೇ ಅವರನ್ನು ಎಳೆದು ಹೊರ ಹಾಕಿ ದೊಣ್ಣೆ ಹಾಗೂ ರಾಡ್‌ನಿಂದ ಹೊಡೆದಿದ್ದಾರೆ ಎಂದಿದ್ದಾರೆ.

ಇನ್ನು ತಮ್ಮ ವಾಹನದ ಮೇಲೆ ದಾಳಿಯಾದ ಬೆನ್ನಲ್ಲೇ ಪೊಲಿಸರಿಗೆ ಫೋನ್ ಮಾಡಿದ ಚಾಲಕ ಈ ಸಂಬಂಧ ಮಾಹಿತಿ ನೀಡಿದ್ದಾನೆ. ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ, ಗ್ರಾಮಸ್ಥರನ್ನು ತಡೆಯಲು ಯತ್ನಿಸಿದ್ದಾರೆ. ಆದರೆ ಪೊಲೀಸರಿಗೆ ಕ್ಯಾರೇ ಎನ್ನದ ಗ್ರಾಮಸ್ಥರು ದಾಳಿ ಮುಂದುವರೆಸಿದ್ದಾರೆ ಅಲ್ಲದೇ, ತಮ್ಮನ್ನು ತಡೆಯಲು ಬಂದ ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆ. ಈ ದಾಳಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಸೇರಿ ಒಟ್ಟು ಐವರು ಸಿಬ್ಬಂದಿಗೆ ಗಾಯಗಳಾಗಿವೆ.

ಕೊರೋನಾ ಭಯ: ರಸ್ತೆ ಬದಿಯಲ್ಲಿದ್ದ ನೋಟು ಉರಿಸಿದ ಜನ

ಇನ್ನು ಇದು ಈ ಪ್ರದೇಶದಲ್ಲಾದ ಮೊದಲ ಗುಂಪು ಥಳಿತವಲ್ಲ. ಈ ಹಿಂದೆಯೂ ವದಂತಿ ಹಾಗೂ ವೈರಲ್ ಸಂದೇಶಗಳಿಗೆ ಕಿವವಿಗೊಟ್ಟು ಇಂತಹ ಪ್ರಕರಣಗಳು ನಡೆದಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಂದೇ.. ಚರ್ಚೆಯಿಂದ ಹೊಸ ಇತಿಹಾಸ ಸೃಷ್ಟಿಗೆ ಮೋದಿ ಯತ್ನ: ಕಾಂಗ್ರೆಸ್‌
ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ