ರಜೆ, ಬಡ್ತಿಗಾಗಿ ರೈಲ್ವೆ ಸಿಬ್ಬಂದಿಯಿಂದಲೇ ಹಳಿ ತಪ್ಪಿಸುವ ಯತ್ನ; ದುಷ್ಕೃತ್ಯ ಬಯಲಾಗಿದ್ದು ಹೇಗೆ?

Published : Sep 25, 2024, 10:41 AM IST
ರಜೆ, ಬಡ್ತಿಗಾಗಿ ರೈಲ್ವೆ ಸಿಬ್ಬಂದಿಯಿಂದಲೇ ಹಳಿ ತಪ್ಪಿಸುವ ಯತ್ನ; ದುಷ್ಕೃತ್ಯ ಬಯಲಾಗಿದ್ದು ಹೇಗೆ?

ಸಾರಾಂಶ

ರೈಲು ಹಳಿ ತಪ್ಪಿಸುವ ದುಷ್ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಸಿಬ್ಬಂದಿಯನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಸೂರತ್: ಸೂರತ್‌ ಕಿಮ್ ರೈಲ್ವೆ ನಿಲ್ದಾಣದ ಬಳಿ ಇತ್ತೀಚೆಗೆ ಬೆಳಕಿಗೆ ಬಂದಿದ್ದ ರೈಲು ಹಳಿ ತಪ್ಪಿಸುವ ದುಷ್ಕೃತ್ಯದ ಹಿಂದೆ ರೈಲ್ವೆಯ ಮೂರು ಸಿಬ್ಬಂದಿಗಳದ್ದೇ ಕೈವಾಡವಿದ್ದ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ. ಒಂದು ದಿನದ ಹೆಚ್ಚುವರಿ ರಜೆ, ಉದ್ಯೋಗದಲ್ಲಿ ಬಡ್ತಿ ಮತ್ತು ಜಾಲತಾಣದಲ್ಲಿ ಫೇಮಸ್ ಆಗಲುಈ ಮೂವರು ಸಾವಿರಾರು ಜನರ ಜೀವ ಅಪಾಯಕ್ಕೆ ಒಡ್ಡಿದ್ದ ವಿಷಯ ತನಿಖೆ ವೇಳೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಮನೀಶ್ ಕುಮಾ‌ರ್, ಸೂರ್ದೇವ ಮಿಸ್ತ್ರಿ ಮತ್ತು ಶುಭಮನ್ ಜೈಸ್ವಾಲ್‌ ರನ್ನು ಬಂಧಿಸಲಾಗಿದೆ. 

ಏನಿದು ಪ್ರಕರಣ?: ಇತ್ತೀಚೆಗೆ ಕಿಮ್ ರೈಲ್ವೆ ನಿಲ್ದಾಣದ ಬಳಿ ತಪಾಸಣೆ ವೇಳೆ ಹಳಿಗಳನ್ನು ಜೋಡಿಸುವ ಫಿಶ್ ಪ್ಲೇಟ್ ಮತ್ತು 60ಕ್ಕೂ ಹೆಚ್ಚು ಬೋಲ್ಡ್‌ಗಳನ್ನು ಕಳಚಿ ಇಟ್ಟಿರುವ ವಿಷಯವನ್ನು ತಾನು ಪತ್ತೆ ಹಚ್ಚಿರುವುದಾಗಿ ಟ್ಯಾಕ್‌ಮನ್ ಸುಭಾಷ್ ಪೋದಾರ್ ಮೇಲಧಿಕಾರಿಗಳಿಗೆ ತಿಳಿಸಿದ್ದ. ಅಲ್ಲದೆ ದುಷ್ಕೃತ್ಯ ನಡೆಸಿದ್ದ ಮೂವರು ವ್ಯಕ್ತಿಗಳು ತನ್ನನ್ನು ನೋಡಿದ ಕೂಡಲೇ ಪರಾರಿಯಾಗಿದ್ದರು ಎಂದು ಹೇಳಿದ್ದ. ಈ ಹಿನ್ನೆಲೆಯಲ್ಲಿ ಆ ಮಾರ್ಗದ ರೈಲುಗಳ ಸಂಚಾರ ವನ್ನು ಕೆಲ ಕಾಲ ತಡೆದು ದುರಸ್ತಿಯ ಬಳಿಕ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಹಳಿ ತಪ್ಪಿಸುವ ದುಷ್ಕೃತ್ಯ ಬಯಲಾಗಿದ್ದು ಹೇಗೆ? 
ಈ ಘಟನೆ ಕುರಿತು ತನಿಖೆ ಆರಂಭಿಸಿದ್ದ ಪೊಲೀಸರು ಮತ್ತು ಎನ್‌ಐಎಗೆ ಸುಭಾಷ್ ಹೇಳಿಕೆಯಲ್ಲಿ ಸಾಕಷ್ಟು ಅನುಮಾನ ವ್ಯಕ್ತವಾಗಿತ್ತು. ತಾನು ದುಷ್ಕೃತ್ವ ಪತ್ರ ಮಾಡಿದ್ದೆ ಎಂದು ಸುಭಾಷ್ ಹೇಳುವ ಕೆಲವೇ ಸಮಯದ ಮೊದಲು ಅದೇ ಮಾರ್ಗದಲ್ಲಿ ಎರಡು ರೈಲುಗಳು ಅತ್ಯಂತ ವೇಗವಾಗಿ ಸಾಗಿದ್ದವು. ಒಂದು ವೇಳೆ ಆ ವೇಳೆಗಾಗಲೇ ಮಷ್ಕೃತ್ಯ ನಡೆದಿದ್ದರೆ, ಅದು ರೈಲುಗಳ ಚಾಲಕರಿಗೆ ಗೊತ್ತಾಗಬೇಕಿತ್ತು. ಇಲ್ಲವೇ ಅನಾಹುತ ಸಂಭವಿಸಬೇಕಿತ್ತು. ಆದರೆ ಅದೆರೆಡೂ ಆಗಿರಲಿಲ್ಲ. ಜೊತೆಗೆ ದುಷ್ಕೃತ್ಯ ವಿಡಿಯೋವನ್ನು ತನ್ನ ಮೊಬೈಲ್‌ನಲ್ಲಿ ಸುಭಾಷ್ ಚಿತ್ರೀಕರಿಸಿದ್ ದವೇಳೆಗೂ, ದುಷ್ಕೃತ್ಯ ಪತ್ತೆ ಮಾಡಿದ ಅಂತರವಿತ್ತು. ಇನ್ನೊಂದೆಡೆ ದುಷ್ಕೃತ್ಯ ನಡೆಸಿ ಪರಾರಿಯಾದರು ಎನ್ನಲಾದ ಮೂವರು ವ್ಯಕ್ತಿಗಳು ಸಮೀಪದಲ್ಲೇ ಎಲ್ಲೂ ಬಂದಿದ್ದು ಧೃಡಪಟ್ಟರಲಿಲ್ಲ.

ಹಳಿ ಮೇಲೆ ಸಿಲಿಂಡರ್, ಪೆಟ್ರೋಲ್ ಬಾಂಬ್ ಇರಿಸಿ ರೈಲು ಸ್ಪೋಟಕ್ಕೆ ಯುತ್ನ; ತಪ್ಪಿದ ಭಾರೀ ಅನಾಹುತ

ಮೂವರ ಮೊಬೈಲ್ ತಪಾಸಣೆ ವೇಳೆ ಬೆಳಗ್ಗೆ 2.56 ಮತ್ತು 4.57 ಅವಧಿಯಲ್ಲಿ ಬೋಲ್ಟ್ ಮತ್ತು ಪ್ಲೇಟ್ ಹೆಚ್ಚಿ ಅದರ ವಿಡಿಯೋ ಶೂಟ್ ಮಾಡಿದ್ದರು. ಆದರೆ ಅಧಿಕಾರಿಗಳಿಗೆ ಬೆಳಗ್ಗೆ 5.30ರ ವೇಳೆಗೆ ದುಷ್ಕೃತ್ವ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಮೂವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ವೇಳೆ, ಹೆಚ್ಚುವರಿ ರಜೆ, ಸನ್ಮಾನ, ಉದ್ಯೋಗದಲ್ಲಿ ಬಡ್ತಿ, ರಾತ್ರಿ ಪಾಳಿ ಕೆಲಸ (ಹಗಲು ಹೊತ್ತು ಕುಟುಂಬದವರ ಜೊತೆ ಕಾಲ ಕಳೆಯಲು ಸಮಯ ಸಿಗುವ ಅನುಕೂಲ) ಮತ್ತು ಸಾಮಾಜಿಕ ಜಾಲತಾಣದಲ್ಲಿ ಫೇಮಸ್ ಆಗಲು ಇಂಥ ಕೃತ್ಯ ಎಸಗಿದ್ದಾಗಿ ಒಪ್ಪಿಕೊಂಡಿದ್ದಾರೆ.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಎಚ್ಚರಿಕೆ
ಇತ್ತೀಚೆಗೆ ಹಳಿ ತಪ್ಪಿಸಿ ರೈಲು ದುರಂತ ಮಾಡುವಂಥ ಘಟನೆಗಳ ಬಗ್ಗೆ ರೈಲ್ವೆ ಇಲಾಖೆ ಕಟ್ಟೆಚ್ಚರ ವಹಿಸಿದೆ. ಈ ಸಂಬಂಧ ರಾಜ್ಯಗಳು ಹಾಗೂ ಪೊಲೀಸ್‌ ಇಲಾಖೆಯ ಜತೆ ನಮ್ಮ ಇಲಾಖೆ ಸಂಪರ್ಕದಲ್ಲಿದ್ದು, ಇಂಥ ಘಟನೆಗಳನ್ನು ತಡೆಯಲು ಕ್ರಮ ವಹಿಸುತ್ತಿದೆ. ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಎಚ್ಚರಿಕೆ ನೀಡಿದ್ದಾರೆ.

ಹಳಿ ಮೇಲೆ ಫಾಗ್‌ ಡಿಟೋನೇಟರ್ ಸ್ಫೋಟ, ಸಿಲಿಂಡರ್‌ ಪತ್ತೆ; ಕರ್ನಾಟಕದತ್ತ ಬರುತ್ತಿದ್ದ ಯೋಧರ ರೈಲು ಪಾರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!
ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ