
ಜೈಪುರ(ಫೆ.11): ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಶದೆಲ್ಲೆಡೆಯ ಭಕ್ತರು ನೀಡುತ್ತಿರುವ ದೇಣಿಗೆ ಪಾರದರ್ಶಕವಾಗಿ ಬಳಕೆ ಆಗುವುದನ್ನು ಖಾತರಿಪಡಿಸಿಕೊಳ್ಳುವ ಸಲುವಾಗಿ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮೂರು ಸ್ತರದ ಮೇಲ್ವಿಚಾರಣಾ ವ್ಯವಸ್ಥೆ ಜಾರಿಗೊಳಿಸಿದೆ. ಡಿಜಿಟಲ್ ಆ್ಯಪ್ ಮೂಲಕ ಆನ್ಲೈನ್ ಮೇಲ್ವಿಚಾರಣೆ, ವಿಶಿಷ್ಟಗುರುತಿನ ಬಳಕೆ ಮತ್ತು ಸಮಗ್ರ ಲೆಕ್ಕಪರಿಶೋಧನೆಯ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿದೆ.
ಅಭಿಯಾನದ ವೇಳೆ ಸಂಗ್ರಹವಾಗುವ ಹಣವನ್ನು ಠೇವಣಿ ಇಡುವ ತಂಡವನ್ನು ಮುನ್ನಡೆಸುತ್ತಿರುವ ಲೆಕ್ಕಪರಿಶೋಧಕ ಅಭಿಷೇಕ್ ಅಗರ್ವಾಲ್ ಅವರು ಈ ಮಾಹಿತಿ ನೀಡಿದ್ದಾರೆ.
ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ನಿಧಿ ಸಂಗ್ರಹ ಅಭಿಯಾನ ಆರಂಭವಾಗಿದ್ದು, ಸಂಗ್ರಹವಾಗುವ ಹಣವನ್ನು ದಿನನಿತ್ಯ ಮೇಲ್ವಿಚಾರಣೆ ಮಾಡಲಾಗುತ್ತಿದೆ. 2000ಕ್ಕಿಂತಲೂ ಹೆಚ್ಚಿನ ಹಣ ನೀಡುವವರು ತಮ್ಮ ಪಾನ್ ಕಾರ್ಡ್ ನೀಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ