
ನವದೆಹಲಿ(ಮೇ.10): ಶನಿವಾರ ದೇಶಾದ್ಯಂತ 3413 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, 112 ಜನ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 62513ಕ್ಕೆ ಏರಿದ್ದರೆ, ಸಾವಿನ ಸಂಖ್ಯೆ 2016ಕ್ಕೆ ತಲುಪಿದೆ. 2020ರ ಜ.30ರಂದು ಕೇರಳದಲ್ಲಿ ಮೊದಲಿಗೆ ಕಾಣಿಸಿಕೊಂಡು, ಮಾ.12ರಂದು ಕರ್ನಾಟಕದಲ್ಲಿ ಮೊದಲ ಬಲಿ ಪಡೆದಿದ್ದ ಕೊರೋನಾ ಸೋಂಕು, ನಂತರದ 58 ದಿನಗಳಲ್ಲಿ 2000ನೇ ಬಲಿ ಪಡೆದಂತೆ ಆಗಿದೆ.
ಈ ನಡುವೆ 1875 ಜನರು ಈವರೆಗೆ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳುವ ಮೂಲಕ, ಕೊರೋನಾ ಗೆಲ್ಲುವುದು ಅಸಾಧ್ಯವೇನಲ್ಲ ಎಂಬ ಸಂದೇಶವನ್ನೂ ರವಾನಿಸಿದ್ದಾರೆ.
ವಂದೇ ಭಾರತ್ ಕಾರ್ಯಾಚರಣೆ: ದುಬೈನಿಂದ ಬಂದವರಿಗೆ ಸೋಂಕು!
ದೇಶದಲ್ಲೇ ಅತಿ ಹೆಚ್ಚು ಸೋಂಕಿತರು ಮತ್ತು ಸಾವು ಕಂಡುಬಂದ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಶನಿವಾರವೂ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ ಶನಿವಾರ 1165 ಹೊಸ ಸೋಂಕು ಪ್ರಕರಣಗಳೊಂದಿಗೆ ಒಟ್ಟು ಕೊರೋನಾ ಪೀಡಿತರ ಸಂಖ್ಯೆ 20,228ಕ್ಕೆ ಏರಿದೆ. 48 ರೋಗಿಗಳು ಮರಣ ಹೊಂದುವ ಮೂಲಕ ಈ ವ್ಯಾಧಿಗೆ ಸಾವಿಗೀಡಾದವರ ಸಂಖ್ಯೆ 779ಕ್ಕೆ ಜಿಗಿದಿದೆ.
ಇನ್ನು ತಮಿಳುನಾಡಿನಲ್ಲಿ 526, ಗುಜರಾತ್ನಲ್ಲಿ 394, ರಾಜಸ್ಥಾನದಲ್ಲಿ 129, ಮಧ್ಯಪ್ರದೇಶದಲ್ಲಿ 116 ಹಾಗೂ ಪಶ್ಚಿಮ ಬಂಗಾಳದಲ್ಲಿ 108 ಅತಿಹೆಚ್ಚು ಕೊರೋನಾ ಪ್ರಕರಣಗಳು ದಾಖಲಾದ ರಾಜ್ಯಗಳಾಗಿವೆ.
ಸೋಂಕಿತೆ ಸಾವು ಬಚ್ಚಿಟ್ಟ ಖಾಸಗಿ ಆಸ್ಪತ್ರೆ ಈಗ ಸೀಲ್ಡೌನ್!
ಅತಿ ಹೆಚ್ಚು ಸಾವು: ಈವರೆಗೆ ಅತಿ ಹೆಚ್ಚು ಸಾವು ದಾಖಲಾದ ರಾಜ್ಯಗಳೆಂದರೆ ಮಹಾರಾಷ್ಟ್ರ 779, ಗುಜರಾತ್ 472, ಮಧ್ಯಪ್ರದೇಶ 311, ಪ.ಬಂಗಾಳ 171, ರಾಜಸ್ಥಾನ 106.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ