ಮಧ್ಯಪ್ರದೇಶ: ವಿವಾದಿತ ಭೋಜಶಾಲಾ ಕಮಲ್‌ ಮೌಲಾ ಮಸೀದಿ ಪ್ರಾಂಗಣದಲ್ಲಿ 39 ಹಿಂದೂ ಭಗ್ನ ವಿಗ್ರಹ ಪತ್ತೆ!

Published : Jul 01, 2024, 05:11 AM ISTUpdated : Jul 01, 2024, 06:36 AM IST
ಮಧ್ಯಪ್ರದೇಶ: ವಿವಾದಿತ ಭೋಜಶಾಲಾ ಕಮಲ್‌ ಮೌಲಾ ಮಸೀದಿ ಪ್ರಾಂಗಣದಲ್ಲಿ 39 ಹಿಂದೂ ಭಗ್ನ ವಿಗ್ರಹ ಪತ್ತೆ!

ಸಾರಾಂಶ

ಮಧ್ಯಪ್ರದೇಶದ ಧಾರ್‌ ಜಿಲ್ಲೆಯ ವಿವಾದಿತ ಭೋಜಶಾಲಾ/ಕಮಲ್‌ ಮೌಲಾ ಮಸೀದಿಯ ಪ್ರಾಂಗಣದಲ್ಲಿ ಹೈಕೋರ್ಟ್‌ನ ಆದೇಶದಂತೆ ಕೈಗೊಳ್ಳಲಾಗಿದ್ದ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ (ಎಎಸ್‌ಐ)ದ ಉತ್ಖನನ ಮುಕ್ತಾಯಗೊಂಡಿದ್ದು, 39 ಭಗ್ನ ಹಿಂದೂ ವಿಗ್ರಹಗಳು ಲಭಿಸಿವೆ. ಒಟ್ಟು 1710 ಅವಶೇಷಗಳು ಪತ್ತೆಯಾಗಿವೆ.

ಭೋಪಾಲ್‌ (ಜು.1): ಮಧ್ಯಪ್ರದೇಶದ ಧಾರ್‌ ಜಿಲ್ಲೆಯ ವಿವಾದಿತ ಭೋಜಶಾಲಾ/ಕಮಲ್‌ ಮೌಲಾ ಮಸೀದಿಯ ಪ್ರಾಂಗಣದಲ್ಲಿ ಹೈಕೋರ್ಟ್‌ನ ಆದೇಶದಂತೆ ಕೈಗೊಳ್ಳಲಾಗಿದ್ದ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ (ಎಎಸ್‌ಐ)ದ ಉತ್ಖನನ ಮುಕ್ತಾಯಗೊಂಡಿದ್ದು, 39 ಭಗ್ನ ಹಿಂದೂ ವಿಗ್ರಹಗಳು ಲಭಿಸಿವೆ. ಒಟ್ಟು 1710 ಅವಶೇಷಗಳು ಪತ್ತೆಯಾಗಿವೆ.

ಉತ್ಖನನದಲ್ಲಿ ಲಭಿಸಿರುವ ವಿಗ್ರಹಗಳಲ್ಲಿ ವಾಗ್ದೇವಿ (ಸರಸ್ವತಿ), ಮಹಿಷಾಸುರ ಮರ್ದಿನಿ, ಗಣೇಶ, ಕೃಷ್ಣ, ಮಹಾದೇವ, ಬ್ರಹ್ಮ ಹಾಗೂ ಹನುಮಂತನ ವಿಗ್ರಹಗಳು ಸೇರಿವೆ ಎಂದು ಹೇಳಲಾಗಿದೆ. ಆದರೆ, ಮುಸ್ಲಿಂ ಪಕ್ಷಗಾರರು ಇದರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ‘ಇವು ಎಲ್ಲಿಂದ ಬಂದವು’ ಎಂದು ಪ್ರಶ್ನಿಸಿದ್ದಾರೆ.

ಎಎಸ್‌ಐ ಅಧಿಕಾರಿಗಳು 98 ದಿನಗಳ ಕಾಲ ಸಮೀಕ್ಷೆ ನಡೆಸಿ ಅವಶೇಷಗಳನ್ನು ಪತ್ತೆಹಚ್ಚಿದ್ದಾರೆ. ಜು.4ರೊಳಗೆ ವಿವರವನ್ನು ಕೋರ್ಟ್‌ಗೆ ಸಲ್ಲಿಸಲಿದ್ದಾರೆ. ಬಳಿಕ ಇನ್ನಷ್ಟು ಆಳವಾಗಿ ಉತ್ಖನನ ನಡೆಸಲು ಅವಕಾಶ ಕೇಳಲಿದ್ದಾರೆ ಎಂದು ಮೂಲಗಳು ಹೇಳಿವೆ.

NewsHour ಗ್ಯಾನವಾಪಿ ಮಸೀದಿಯೊಳಗೆ ಹಿಂದೂ ವಿಗ್ರಹ, 19 ಪುಟಗಳ ಕೋರ್ಟ್ ವರದಿಯ ಸಂಪೂರ್ಣ ಮಾಹಿತಿ!

ಏನಿದು ಭೋಜಶಾಲಾ ವಿವಾದ?

ಧಾರ್‌ ಜಿಲ್ಲೆಯಲ್ಲಿರುವ ಭೋಜಶಾಲಾ ಎಂಬ ಧಾರ್ಮಿಕ ಸ್ಥಳ ತಮಗೆ ಸೇರಿದ್ದು ಎಂದು ಹಿಂದೂ, ಮುಸಲ್ಮಾನರಿಬ್ಬರೂ ವಾದಿಸುತ್ತಾರೆ. ಹಿಂದೂಗಳು ಇಲ್ಲಿ ಮಧ್ಯಕಾಲೀನ ಕೆತ್ತನೆಯಿರುವ ವಾಗ್ದೇವಿ ದೇಗುಲವಿದೆ ಎಂದು ಪ್ರತಿ ಮಂಗಳವಾರ ಪೂಜೆ ಸಲ್ಲಿಸುತ್ತಾರೆ. ಮುಸಲ್ಮಾನರು ಈ ಜಾಗವನ್ನು ಕಮಲ್‌ ಮೌಲಾ ಮಸೀದಿ ಎಂದು ಕರೆದು, ಪ್ರತಿ ಶುಕ್ರವಾರ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ವ್ಯಾಜ್ಯ ಕೋರ್ಟ್‌ನ ಮೆಟ್ಟಿಲೇರಿದ್ದು, ಮೂಲತಃ ಈ ಕಟ್ಟಡ ಏನಾಗಿತ್ತು ಎಂಬುದನ್ನು ಪತ್ತೆಹಚ್ಚಲು ಸಮೀಕ್ಷೆ ನಡೆಸುವಂತೆ ಎಎಸ್‌ಐಗೆ ಮಧ್ಯಪ್ರದೇಶದ ಹೈಕೋರ್ಟ್‌ ಈ ವರ್ಷಾರಂಭದಲ್ಲಿ ಆದೇಶಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..