
ತಿರುವನಂತಪುರ (ಜ. 18) ಕರ್ನಾಟಕದಲ್ಲಿ ಸಕಲ ಮುನ್ನೆಚ್ಚರಿಕೆ ತೆಗೆದುಕೊಂಡು ಅಧಿವೇಶನ ನಡೆಸಲಾಗಿತ್ತು. ಅತ್ತ ಕೇರಳದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದಂತೆಯೇ, ನಾಲ್ವರು ಶಾಸಕರಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದ್ದು ಆತಂಕ ಹೆಚ್ಚಿಸಿದೆ.
ನಯತಿಂಕರಾ ಶಾಸಕ ಕೆ ಅನ್ಸಾಲನ್, ಕೊಯಿಲಾಂಡಿ ಶಾಸಕ ಕೆ ದಾಸನ್, ಕೊಲ್ಲಂ ಶಾಸಕ ಎಂ.ಮುಕೇಶ್ ಮತ್ತು ಪೀರುಮಡೆ ಶಾಸಕ ಇ ಎಸ್ ಬಿಜಿಮೋಲ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಅಧಿವೇಶನದಲ್ಲಿ ಭಾಗವಹಿಸಿದವರಿಗೆಲ್ಲ ಆತಂಕ ಹೆಚ್ಚಾಗಿದೆ.
ಕೊರೋನಾ ಲಸಿಕೆ ಪಡೆಯಲು ಕಾದು ನೋಡುವ ತಂತ್ರ
ಎರಡು ದಿನಗಳ ಹಿಂದೆ ಇಎಸ್ ಬಿಜಿಮೋಲ್ ಅವರಿಗೆ ಪಾಸಿಟಿವ್ ಬಂದಿದ್ದು, ಅವರು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ. ದಾಸನ್ ಮತ್ತು ಅನ್ಸಲನ್ ಅವರು ಚಿಕಿತ್ಸೆಗಾಗಿ ತಿರುವನಂತಪುರ ವೈದ್ಯಕೀಯ ಕಾಲೇಜ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅತಿದೊಡ್ಡ ಲಸಿಕಾ ಅಭಿಯಾನಕ್ಕೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಒಂದು ಕಡೆ ಕೊರೋನಾ ಆತಂಕ ಇನ್ನೊಂದು ಕಡೆ ಬ್ರಿಟನ್ ವೈರಸ್ ದಾಳಿ ಇವರೆಡರ ಮಧ್ಯೆ ಜೀವನ ಸರಿದೂಗಿಸಿಕೊಂಡು ಹೋಗುವ ಸವಾಲು ಪ್ರತಿಯೊಬ್ಬನಿಗೂ ಎದುರಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ