ಪತ್ರ ಬರೆದ 23 ಹಿರಿಯ ಮುಖಂಡರ ಜೊತೆ ಸೋನಿಯಾ ಸಭೆ: ಕಾಂಗ್ರೆಸ್‌ನಲ್ಲಿ ದೊಡ್ಡ ಬದಲಾವಣೆ..?

Suvarna News   | Asianet News
Published : Dec 18, 2020, 02:02 PM ISTUpdated : Dec 18, 2020, 02:08 PM IST
ಪತ್ರ ಬರೆದ 23 ಹಿರಿಯ ಮುಖಂಡರ ಜೊತೆ ಸೋನಿಯಾ ಸಭೆ: ಕಾಂಗ್ರೆಸ್‌ನಲ್ಲಿ ದೊಡ್ಡ ಬದಲಾವಣೆ..?

ಸಾರಾಂಶ

ಕಾಂಗ್ರೆಸ್ ಹಿರಿಯ ನಾಯಕರ ಜೊತೆ ಸೋನಿಯಾ ಗಾಂಧಿ ಮಹತ್ವದ ಸಭೆ | ಬದಲಾವಣೆ ಬಯಸಿದ ಹಿರಿಯ ಕಾಂಗ್ರೆಸ್ ಮುಖಂಡರು ಭಾಗಿ 

ಸೋನಿಯಾ ಗಾಂಧಿ ಅವರು ಶನಿವಾರ ಪಕ್ಷದ 23 ಹಿರಿಯ ನಾಯಕರನ್ನು ಭೇಟಿ ಮಾಡಲಿದ್ದಾರೆ. ಕಾಂಗ್ರೆಸ್‌ನಲ್ಲಿ ಬಹಳಷ್ಟು ಬದಲಾವಣೆಗಳಾಗಬೇಕು ಎಂದು ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದ ಹಿರಿಯ ಕಾಂಗ್ರೆಸ್ ನಾಯಕರು ಪೂರ್ಣಾವಧಿ ನಾಯಕತ್ವ, ಪಾರದರ್ಶಕತೆ, ಸಕ್ರಿಯ ರಾಜಕಾರಣದ ಬಗ್ಗೆ ಪತ್ರಗಳಲ್ಲಿ ಬರೆದಿದ್ದರು.

23 ನಾಯಕರಲ್ಲಿ ಸುಮಾರು 7, 8 ನಾಯಕರು ಹಲವಾರು ಬಾರಿ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಈ ಮಹತ್ವದ ಸಭೆಗೆ ಡೇಟ್ ಫಿಕ್ಸ್ ಮಾಡಲಾಗಿದೆ. ಈ ಸಭೆಗೆ ಹಾಜರಾಗುವವರ ಲಿಸ್ಟ್‌ನ್ನು ಸೋನಿಯಾ ಗಾಂಧಿ ಅವರಿಗೆ ಕಳುಹಿಸಲಾಗಿದೆ. ರಾಹುಲ್ ಗಾಂಧಿ ಅವರೂ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಕಿಡ್ನಿ ಮಾರಾಟಕ್ಕಿದೆ ಎಂದು ಜಾಹೀರಾತು ಕೊಟ್ಟ ಕಾಶ್ಮೀರಿ ವ್ಯಕ್ತಿ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ ಆಜಾದ್, ಮಾಜಿ ಕೇಂದ್ರ ಸಚಿವರಾದ ಆನಂದ್ ಶರ್ಮಾ, ಕಪಿಲ್ ಸಿಬಲ್, ಮನೀಶ್ ತಿವಾರಿ ಮತ್ತು ಶಶಿ ತರೂರ್ ಮತ್ತು ಹರಿಯಾಣ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳಾದ ಭೂಪಿಂದರ್ ಸಿಂಗ್ ಹೂಡಾ ಮತ್ತು ಪೃಥ್ವಿರಾಜ್ ಚವಾಣ್ ಅವರೂ 23 ರಾಜಕೀಯ ಮುಖಂಡರ ಲಿಸ್ಟ್‌ನಲ್ಲಿದ್ದಾರೆ.

ಹಿರಿಯ ನಾಯಕರಾದ ಮನಮೋಹನ್ ಸಿಂಗ್, ಪಿ. ಚಿದಂಬರಂ, ಎಕೆ ಅಂಟೊನಿ, ಎಐಸಿಸಿ ಕಾರ್ಯದರ್ಶಿ  ಕೆಸಿ ವೇಣುಗೋಪಾಲ್ ಕೂಡಾ ಭಾಗವಹಿಸಲಿದ್ದಾರೆ.  ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್ ಕೂಡಾ ಭಾಗವಹಿಸುವ ನಿರೀಕ್ಷೆ ಇದೆ.

ಉಲ್ಟಾ ಹೊಡೆದ ದಿಲ್ಲಿ ಸಿಎಂ ಕೇಜ್ರಿವಾಲ್‌ !

ಪಕ್ಷದ ಸಂಘಟನೆ, ಪಾರದರ್ಶಕತೆ ಬಗ್ಗೆ  ಧ್ವನಿ ಎತ್ತಿದ ಹಿರಿಯ ನಾಯಕರು ಪಕ್ಷದಲ್ಲಿ ದೊಡ್ಡ ಬದಲಾವಣೆಯಾಗಬೇಕೆಂಬ ನಿರೀಕ್ಷೆಯಲ್ಲಿದ್ದಾರೆ. ಕಾಂಗ್ರೆಸ್ ಮುಂದಿನ ನಡೆ, ಬೆಳವಣಿಗೆಯ ನಿಟ್ಟಿನಲ್ಲಿ ಈ ಸಭೆ ಮಹತ್ವದ್ದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ