ಅಯೋಧ್ಯೆ ರಾಮಮಂದಿರ ಭೂಮಿ ಪೂಜೆಗೆ 40 ಕೆಜಿ ಬೆಳ್ಳಿ ಚಪ್ಪಡಿ ಬಳಕೆ!

Published : Jul 20, 2020, 06:40 PM ISTUpdated : Jul 20, 2020, 07:13 PM IST
ಅಯೋಧ್ಯೆ ರಾಮಮಂದಿರ ಭೂಮಿ ಪೂಜೆಗೆ 40 ಕೆಜಿ ಬೆಳ್ಳಿ ಚಪ್ಪಡಿ ಬಳಕೆ!

ಸಾರಾಂಶ

ರಾಮಮಂದಿರ ನಿರ್ಮಾಣ ಕಾರ್ಯ ಚುರುಕುಗೊಂಡಿದೆ. ಆಗಸ್ಟ್ 5 ರಂದು ರಾಮ ಮಂದಿ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಲು ನಿರ್ಧರಿಸಲಾಗಿದೆ. ಭೂಮಿ ಪೂಜೆಯಲ್ಲಿ ಹಲವು ವಿಶೇಷತೆಗಳಿವೆ. ಬರೋಬ್ಬರಿ 40 ಕೆಜಿ ತೂಕದ ಬೆಳ್ಳಿ ಚಪ್ಪಡಿಯನ್ನು ಬಳಸಲಾಗುತ್ತಿದೆ.

ಆಯೋಧ್ಯೆ(ಜು.20): ರಾಮ ಮಂದಿರದ ಕನಸು ನನಸಾಗುತ್ತಿದೆ. ಸುಪ್ರೀಂ ಕೋರ್ಟ್‌ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಗಳು ಚುರುಗೊಂಡಿತ್ತು. ಆದರೆ ಕೊರೋನಾ ವೈರಸ್, ಲಾಕ್‌ಡೌನ್ ಕಾರಣದಿಂದ ತಯಾರಿಗೆ ಬ್ರೇಕ್ ಬಿದ್ದಿತ್ತು. ಇದೀಗ ಆಗಸ್ಟ್ 3 ರಿಂದ ಆಯೋಧ್ಯೆಯಲ್ಲಿ ರಾಮ ಮಂದಿರ ಭೂಮಿ ಪೂಜೆ ನಡೆಯಲಿದೆ.  ಗರ್ಭಗುಡಿ ಭೂಮಿ ಪೂಜೆಯಲ್ಲಿ ಬರೋಬ್ಬರಿ 40 ಕೆಜಿ ತೂಕದ ಬೆಳ್ಳಿ ಚಪ್ಪಡಿಯನ್ನು ಬಳಸಲಾಗುತ್ತಿದೆ.

ಮೋದಿ ಬಾರದಿದ್ದರೆ ಆ.5ರಂದು ಭೂಮಿಪೂಜೆ ಇಲ್ಲ!.

3 ದಿನದ ಭೂಮಿ ಪೂಜೆ ಕಾರ್ಯ ನಡೆಯಲಿದೆ. ಭೂಮಿ ಪೂಜೆ ಕಾರ್ಯವನ್ನು ವಾರಣಸಿಯ ಸ್ವಾಮೀಜಿ ನೆರವೇರಿಸಲಿದ್ದಾರೆ. ಸುಪ್ರೀಂ ಕೋರ್ಟ್‌ನಿಂದ ಗ್ರೀನ್ ಸಿಗ್ನಲ್ ಪಡೆದ ಬಳಿಕ ಮಾರ್ಚ್ ತಿಂಗಳಲ್ಲಿ ರಾಮ ಲಲ್ಲಾ ಮೂರ್ತಿಯನ್ನು ಸ್ಥಳಾಂತರ ಮಾಡಿದ ಇದೇ ವಾರಣಸಿಯ ಸ್ವಾಮೀಜಿ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಆಗಸ್ಟ್ 5 ರಂದು ನಡೆಯಲಿರುವ ಈ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಸಾಧ್ಯತೆ ಇದೆ. 

ಆಗಸ್ಟ್ 5 ರಂದು ನಡೆಯಲಿರುವುದು ಭೂಮಿ ಪೂಜೆ, ಇದು ಶಿಲನ್ಯಾಸ ಅಲ್ಲ ಎಂದು ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಸ್ಪಷ್ಟಪಡಿಸಿದ್ದಾರೆ. ರಾಮ ಮಂದಿರ ಶಿಲಾನ್ಯಾಸವನ್ನು  ಮಾಡಲಾಗಿದೆ. 1989ರಲ್ಲಿ ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಅವಧಿಯಲ್ಲಿ ಟ್ರಸ್ಟ್ ಸದಸ್ಯರಾಗಿರುವ ಕಾಮೇಶ್ವರ್ ಚೌಪಾಲ್ ಶಿಲಾನ್ಯಾಸ ಮಾಡಿದ್ದಾರೆ.  

ಭೂಮಿ ಪೂಜೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾ ನೀಡಲಾಗಿದೆ. ಆದರೆ ಮೋದಿ ಆಗಮಿಸುವ ಕುರಿತು ಪ್ರಧಾನಿ ಕಾರ್ಯಾಲಯದಿಂದ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ ಎಂದು ಟ್ರಸ್ಟ್ ಸದಸ್ಯರಾದ ಅನಿಲ್ ಮಿಶ್ರಾ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್
India Latest News Live: ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್