ಕೇರಳ ವಿಮಾನ ದುರಂತ, 40 ಮಂದಿ ಪ್ರಯಾಣಿಕರಿಗೆ ಕೊರೋನಾ!

Published : Aug 08, 2020, 12:46 PM ISTUpdated : Aug 08, 2020, 12:48 PM IST
ಕೇರಳ ವಿಮಾನ ದುರಂತ, 40 ಮಂದಿ ಪ್ರಯಾಣಿಕರಿಗೆ ಕೊರೋನಾ!

ಸಾರಾಂಶ

ಕೇರಳ ವಿಮಾನ ದುರಂತ ಪ್ರಕರಣ| ಈಗ ಕೊರೊನಾ ಕಾಟ| ದುಬೈನಿಂದ ಬಂದ ಪ್ರಯಾಣಿಕರಿಗೆ ಕೊರೊನಾ ಪಾಸಿಟಿವ್| 40 ಮಂದಿಗೆ ಕೊರೊನಾ ಪಾಸಿಟಿವ್

ಕಲ್ಲಿಕೋಟೆ(ಆ.08): ಕೇರಳ ವಿಮಾನ ದುರಂತ ಪ್ರಕರಣದಲ್ಲಿ ಪೈಲಟ್ ಸೇರಿ 20 ಮಂದಿ ಸಾವನ್ನಪ್ಪಿದ್ದು, 125 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2010ರಲ್ಲಿ ಮಂಗಳೂರಿನಲ್ಲಿ ನಡೆದಿದ್ದ ವಿಮಾನ ದುರಂತವನ್ನು ನೆನಪಿಸಿದ ಈ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆ ವರದಿಯಾಗಿದೆ.

ಏನಿದು ಟೇಬಲ್‌ಟಾಪ್‌ ರನ್‌ವೇ? ಮಂಗಳೂರು ದುರಂತ ನೆನಪಿಸಿದ ಕಲ್ಲಿಕೋಟೆ ವಿಮಾನ ಅಪಘಾತ!

ಹೌದು ವಿಮಾನದಲ್ಲಿದ್ದ ನಲ್ವತ್ತು ಮಂದಿಗೆ ಕೊರೋನಾ ಸೋಂಕು ತಗುಲಿದೆ ಎನ್ನಲಾಗಿದೆ. ಈಗಾಗಲೇ ನಡೆದ ದುರಂತದ ಮಧ್ಯೆ ಪ್ರಯಾಣಿಕರಿಗೆ ಕೊರೋನಾ ಸೋಂಕು ತಗುಲಿರುವುದು ಗಾಯದ ಮೇಲೆ ಬರೆ ಎಳೆದಂತಿದೆ.

ಅಪಘಾತ ನಡೆದದ್ದೆಲ್ಲಿ? ಕಾರಣವೇನು?

ಕೇರಳದ ಕಲ್ಲಿಕೋಟೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಜೆ 7.40ಕ್ಕೆ ವೇಳೆ ದುಬಬೈನಿಂದ ಬಂದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಐಎಕ್ಸ್‌ 1344 ವಿಮಾನ ಲ್ಯಾಂಡಿಂಗ್‌ ವೇಳೆ ಅಪಘಾತಕ್ಕೀಡಾಗಿತ್ತು. 

ವಿಮಾನ ದುರಂತ ಸಾವಿನ ಸಂಖ್ಯೆ 12ಕ್ಕೆ, ಪಿಣರಾಯಿ ಜತೆ ಮಾತನಾಡಿದ ಮೋದಿ

ಏನಾಯ್ತು?

ಮಂದ ಬೆಳಕು ಮತ್ತು ಭಾರೀ ಮಳೆಯ ಕಾರಣ ಲ್ಯಾಂಡಿಂಗ್‌ ವೇಳೆ ವಿಮಾನ ರನ್‌ವೇನಿಂದ ಜಾರಿ ಕಂದಕಕ್ಕೆ ಉರುಳಿ ಎರಡು ಹೋಳಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಆರೋಪ ಸಾಬೀತು : ಪಾಕ್‌ ಐಎಸ್‌ಐ ಮಾಜಿ ಮುಖ್ಯಸ್ಥ ಹಮೀದ್‌ಗೆ 14 ವರ್ಷ ಜೈಲು