'ಲಸಿಕೆ ಇಲ್ಲದೇ ಮಕ್ಕಳನ್ನು ಶಾಲೆಗೆ ಕಳಿಸಲ್ಲ'

Published : Jul 29, 2021, 10:30 AM ISTUpdated : Jul 29, 2021, 02:02 PM IST
'ಲಸಿಕೆ ಇಲ್ಲದೇ ಮಕ್ಕಳನ್ನು ಶಾಲೆಗೆ ಕಳಿಸಲ್ಲ'

ಸಾರಾಂಶ

* ಲಸಿಕೆ ಸಿಗೋವರೆಗೂ ಮಕ್ಕಳನ್ನು ಶಾಲೆಗೆ ಕಳುಹಿಸಲ್ಲ * ಶೇ.48 ಪೋಷಕರ ಅಭಿಪ್ರಾಯ * 361 ಜಿಲ್ಲೆಯಲ್ಲಿ ಅನಿಸಿಕೆ ಸಂಗ್ರಹ * ಲೋಕಲ್‌ ಸರ್ಕಲ್‌ ಸಮೀಕ್ಷೆ

ನವದೆಹಲಿ(ಜು.29): ಮಕ್ಕಳಿಗೂ ಕೋವಿಡ್‌ ಲಸಿಕೆ ದೊರೆಯುವವರೆಗೂ ಶಾಲೆಗೆ ಕಳುಹಿಸದಿರಲು ಶೇ.48ರಷ್ಟುಪೋಷಕರು ನಿರ್ಧರಿಸಿದ್ದಾರೆ ಎಂದು ಸಮಿಕ್ಷೆಯೊಂದರಿಂದ ತಿಳಿದುಬಂದಿದೆ. ದೇಶದ 361 ಜಿಲ್ಲೆಗಳಿಂದ 32,000 ಪೋಷಕರನ್ನು ಸಮೀಕ್ಷೆ ನಡೆಸಿ ಲೋಕಲ್‌ ಸರ್ಕಲ್‌ನ ಸಮೀಕ್ಷೆಯೊಂದು ಹೇಳಿದೆ.

ಶೇ.30ರಷ್ಟುಪೋಷಕರು ಅವರ ಜಿಲ್ಲೆಯಲ್ಲಿ ಕೋರೋನಾ ಪ್ರಕರಣಗಳು ಸೊನ್ನೆಗೆ ತಲುಪಿದರೆ ಶಾಲೆಗೆ ಕಳುಹಿಸುವ ಚಿಂತನೆಯಲ್ಲಿದ್ದಾರೆ. ಆದರೆ, ‘ಮಕ್ಕಳು ಶಾಲೆಗೆ ಬರುವಂತೆ ಮಾಡಲು ಅವರಿಗೆ ಲಸಿಕೆ ನೀಡುವುದು ಅತ್ಯಗತ್ಯ’ ಎಂದಿರುವ ಶೇ.48 ಪೋಷಕರು, ಲಸಿಕೆ ಲಭಿಸುವವರೆಗೂ ಮಕ್ಕಳನ್ನು ಶಾಲೆಗೆ ಕಳಿಸುವುದಿಲ್ಲ ಎಂದಿದ್ದಾರೆ.

ಕೋವ್ಯಾಕ್ಸಿನ್‌ಗೆ ತಪ್ಪದ ಪರದಾಟ..!

ಆದರೆ, ಶೇ.21ರಷ್ಟುಪೋಷಕರು ಶಾಲೆಗಳು ಯಾವಾಗ ತೆರೆಯುತ್ತವೋ ಆಗ ಮಕ್ಕಳನ್ನು ಶಾಲೆಗೆ ಕಳುಹಿಸಲು ಉತ್ಸುಕತೆ ತೋರಿದ್ದಾರೆ ಎಂದು ಆನ್‌ಲೈನ್‌ನಲ್ಲಿ ಪೋಷಕರ ಸಮೀಕ್ಷೆ ನಡೆಸಿದ ಲೋಕಲ್‌ ಸರ್ಕಲ್‌ ಹೇಳಿದೆ.

ಮಂಗಳವಾರ ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಮಕ್ಕಳಿಗೆ ಮುಂದಿನ ತಿಂಗಳಿನಿಂದ ಲಸಿಕೆ ವಿತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಹೇಳಿದ್ದರು.

ಕೋವಿಡ್‌ ಕಾರಣದಿಂದ ಕಳೆದ ವರ್ಷ ಮಾಚ್‌ರ್‍ನಿಂದಲೇ ಶಾಲೆಗಳನ್ನು ಮುಚ್ಚಲಾಗಿತ್ತು. ಕೆಲವು ರಾಜ್ಯಗಳಲ್ಲಿ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಶಾಲೆಗಳು ಪುನರಾರಂಭವಾದರೂ ಕೋವಿಡ್‌ ಎರಡನೇ ಅಲೆಯ ಕಾರಣದಿಂದ ಶಾಲೆಗಳನ್ನು ಮತ್ತೆ ಮುಚ್ಚಲಾಗಿತ್ತು.

ಲಸಿಕೆ ಪಡೆದ 2-3 ತಿಂಗಳಲ್ಲಿ ಪ್ರತಿಕಾಯಗಳ ಪ್ರಮಾಣ ಇಳಿಕೆ!

ಗುಜರಾತ್‌, ಮಹಾರಾಷ್ಟ್ರ, ಉತ್ತರ ಪ್ರದೇಶ, ಹರಿಯಾಣ, ಮಧ್ಯಪ್ರದೇಶ, ಬಿಹಾರ ರಾಜ್ಯಗಳು ಈ ತಿಂಗಳಿನಲ್ಲಿ ಶಾಲೆಗಳನ್ನು ಪುನರಾಂಭಿಸಿವೆ. ರಾಜಸ್ಥಾನ, ಹಿಮಾಚಲ ಪ್ರದೇಶ ಮತ್ತು ಆಂಧ್ರಪ್ರದೇಶ ರಾಜ್ಯಗಳು ಆಗಸ್ಟ್‌ ಮೊದಲ ವಾರದಿಂದ ಶಾಲೆಗಳನ್ನು ಆರಂಭಿಲು ತೀರ್ಮಾನಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ
ಲೋಕಸಭೆಯಲ್ಲಿ ನೌಕರರ ಪರ ಮಸೂದೆ ಮಂಡನೆ: ಉದ್ಯೋಗಿಗಳ ಲೈಫ್​ ಜಿಂಗಾಲಾಲಾ- ಏನಿದೆ ಇದರಲ್ಲಿ?