ವಿಶೇಷ ಪೂಜೆ: ಶಬರಿಮಲೆ ಅಯ್ಯಪ್ಪ ದೇಗುಲ ಓಪನ್‌!

Published : Aug 18, 2020, 10:50 AM ISTUpdated : Aug 18, 2020, 12:32 PM IST
ವಿಶೇಷ ಪೂಜೆ: ಶಬರಿಮಲೆ ಅಯ್ಯಪ್ಪ ದೇಗುಲ ಓಪನ್‌!

ಸಾರಾಂಶ

ಮಾಸಿಕ ವಿಶೇಷ ಪೂಜೆ| ಶಬರಿಮಲೆ ಅಯ್ಯಪ್ಪ ದೇಗುಲ ಓಪನ್‌|  ಕೊರೋನಾ ಸೋಂಕಿನ ನಡುವೆಯೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ಓಪನ್

ಪಟನಂತಿಟ್ಟ(ಆ.18): ಕೊರೋನಾ ಸೋಂಕಿನ ನಡುವೆಯೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲನ್ನು ಐದು ದಿನಗಳ ಮಾಸಿಕ ವಿಶೇಷ ಪೂಜೆಗಾಗಿ ಸೋಮವಾರ ಬೆಳಗ್ಗೆ ತೆರೆಯಲಾಗಿದೆ. ಆಗಸ್ಟ್‌ 21ರವರೆಗೆ ಪೂಜೆ ನಡೆಯಲಿದೆ.

ಮಲಯಾಳಂ ಪಂಚಾಂಗದ ಪ್ರಕಾರ ಮೊದಲ ತಿಂಗಳಾದ ಚಿಂಗಂನಲ್ಲಿ ಅಯ್ಯಪ್ಪ ಸ್ವಾಮಿಗೆ ಐದು ದಿನಗಳ ಕಾಲ ವಿಶೇಷ ಪೂಜೆ ಮಾಡುವ ಸಂಪ್ರದಾಯವಿದೆ. ಆದರೆ ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡುವವರು ಕಡ್ಡಾಯವಾಗಿ ಕೊರೊನಾ ನೆಗೆಟಿವ್‌ ಪ್ರಮಾಣ ಪತ್ರ ಹಾಜರುಪಡಿಸಬೇಕೆಂಬ ಕಟ್ಟುನಿಟ್ಟಿನ ನಿಬಂಧನೆಗಳನ್ನು ಜಾರಿಗೊಳಿಸಲಾಗಿದೆ. ಈ ಬಾರಿ ಆಗಸ್ಟ್‌ 21ರವರೆಗೆ ದೇಗುಲ ತೆರೆದಿರಲಿದ್ದು, ನಂತರ ಓಣಂ ಪೂಜೆಯ ನಿಮಿತ್ತ ಮತ್ತೆ ಆಗಸ್ಟ್‌ 29ರಿಂದ ಸೆಪ್ಟೆಂಬರ್‌ 2ರ ತನಕ ದೇಗುಲದಲ್ಲಿ ಪೂಜೆಗಳು ನಡೆಯಲಿವೆ.

ಶಬರಿಮಲೆಗೆ ಪ್ರವೇಶವಿಲ್ಲ: ನೀರಿನಲ್ಲಿ ಮುಳುಗಿ ಅಯ್ಯಪ್ಪ ಮಾಲಾಧಾರಿ ಸಾವು

ಇದಕ್ಕೂ ಮುನ್ನ ತಿರುವಾಂಕೂರು ದೇವಸ್ಥಾನ ಮಂಡಳಿ ಅಧ್ಯಕ್ಷ ಎನ್‌.ವಾಸು ಅವರು,‘ ನವೆಂಬರ್‌ 16ರಿಂದ ಎರಡು ತಿಂಗಳ ಕಾಲ ಭಕ್ತಾದಿಗಳಿಗೆ ದರ್ಶನಕ್ಕಾಗಿ ದೇಗುಲ ತೆರೆಯಲಿದೆ’ ಎಂದು ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?
ಅಗರ್ಭ ಶ್ರೀಮಂತನೆಂದು ಎಂಜಿನಿಯರ್‌ನನ್ನ ಮದುವೆಯಾದಳು... ಫಸ್ಟ್‌ ನೈಟ್‌ನಲ್ಲೇ ಬಯಲಾಯ್ತು ಕರಾಳ ಸತ್ಯ!