
ಮಣಿಪುರ (ಆ.20): ಐವರು ಮಾಜಿ ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಇತ್ತೀಚೆಗಷ್ಟೇ ಐವರು ಶಾಸಕರು ತಮ್ಮ ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದು ಇದೀಗ ಅಧಿಕೃತವಾಗಿ ಮಣಿಪುರ ಸಿಎಂ ಎನ್ ಬಿರೇನ್ ಸಿಂಗ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಮಣಿಪುರ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾದವ್ ಐವರನ್ನು ಪಕ್ಷಕ್ಕೆ ಸ್ವಾಗತಿಸಿದ್ದು, ಇವರ ಸೇರ್ಪಡೆಯಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯಾದ ಸಮಸ್ಯೆ ಎದುರಾಗದು ಎಂದಿದ್ದಾರೆ.
ಗಾಂಧಿಯೇತರ ವ್ಯಕ್ತಿ ಕಾಂಗ್ರೆಸ್ ಅಧ್ಯಕ್ಷರಾಗಲಿ: ಪ್ರಿಯಾಂಕ ಗಾಂಧಿ...
ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ಇವರ ಸೇರ್ಪಡೆಯಿಂದ ಬಲ ಬಂದಿದೆ ಎಂದು ರಾಮ್ ಮಾದವ್ ಹೇಳಿದರು.
ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಸರ್ಕಾರ ಸಿದ್ಧವೆಂದ ಸಚಿವ ಈಶ್ವರಪ್ಪ...
ಮಾಜಿಮುಖ್ಯಮಂತ್ರಿ ಇಬೋಬಿ ಸಿಂಗ್ ಅಳಿಯ ಹೆನ್ರಿ ಒಕ್ರಮ್,.ಪನೋನಮ್ ,ಲುಕೋಯ್ ಸಿಂಗ್, ಗಮ್ತಂಗ್ ಹೋಕಿಪ್, ಗಿನ್ಸುನ್ ಝೌ ಪಕ್ಷ ಸೇರ್ಪಡೆಯಾಗಿದ್ದಾರೆ.
ಒಟ್ಟಿನಲ್ಲಿ ದೇಶದಲ್ಲಿಕೊರೋನಾ ಮಹಾಮಾರಿ ಕಾಟವಿದ್ದರೂ ರಾಜಕೀಯ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಲೇ ಇದ್ದು, ಹಲವು ಪಕ್ಷಗಳ ಮುಖಂಡರ ಪಕ್ಷಾಂತರವೂ ಮುಂದುವರಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ