‘ತಬ್ಲೀಘಿ ಮಸೀದಿ’ಗೆ 50ರ ಮಿತಿ ಹೇರಿ: ಕೇಂದ್ರ ಸರ್ಕಾರ!

Published : Mar 25, 2021, 11:04 AM IST
‘ತಬ್ಲೀಘಿ ಮಸೀದಿ’ಗೆ 50ರ ಮಿತಿ ಹೇರಿ: ಕೇಂದ್ರ ಸರ್ಕಾರ!

ಸಾರಾಂಶ

ದೇಶದಲ್ಲಿ ಕಳೆದ ವರ್ಷ ಕೊರೋನಾ ಸೋಂಕಿತರ ಸಂಖ್ಯೆ ಉಲ್ಬಣಗೊಳ್ಳಲು ಕಾರಣವಾದ ಆರೋಪ| ‘ತಬ್ಲೀಘಿ ಮಸೀದಿ’ಗೆ 50ರ ಮಿತಿ ಹೇರಿ: ಕೇಂದ್ರ ಸರ್ಕಾರ

ನವದೆಹಲಿ(ಮಾ.25): ದೇಶದಲ್ಲಿ ಕಳೆದ ವರ್ಷ ಕೊರೋನಾ ಸೋಂಕಿತರ ಸಂಖ್ಯೆ ಉಲ್ಬಣಗೊಳ್ಳಲು ಕಾರಣವಾದ ಆರೋಪ ಹೊತ್ತಿರುವ ದೆಹಲಿಯ ನಿಜಾಮುದ್ದೀನ್‌ ಮರ್ಕಜ್‌ ಮಸೀದಿಯಲ್ಲಿ 50 ಮಂದಿಯ ಪ್ರಾರ್ಥನೆಗಷ್ಟೇ ಅವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‌ಗೆ ಅಭಿಪ್ರಾಯ ತಿಳಿಸಿದೆ.

ಕಳೆದ ವರ್ಷ ನಿಜಾಮುದ್ದೀನ್‌ ಮರ್ಕಜ್‌ನಲ್ಲಿ ತಬ್ಲೀಘಿ ಜಮಾತ್‌ ಸಮಾವೇಶ ನಡೆದಿತ್ತು. ಅದರಿಂದ ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಮಾ.31ರಿಂದ ಮಸೀದಿಗೆ ಬೀಗ ಜಡಿಯಲಾಗಿದೆ. ಇದೀಗ ಅಲ್ಲಿ ಮುಂಬರುವ ಹಬ್ಬದ ಸೀಸನ್‌ನಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕೋರಲಾಗಿತ್ತು.

ಇದಕ್ಕೆ ಪ್ರತಿಕ್ರಿಯೆ ಸಲ್ಲಿಸಿರುವ ಸರ್ಕಾರ, ವಕ್ಫ್ ಮಂಡಳಿ 50 ಮಂದಿಯನ್ನು ಆಯ್ಕೆ ಮಾಡಬೇಕು. ಆ ಪಟ್ಟಿಯನ್ನು ಪೊಲೀಸರಿಗೆ ಸಲ್ಲಿಸಬೇಕು. 50 ಮಂದಿ ಮಾತ್ರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಹೇಳಿದೆ. ಮುಂದಿನ ವಿಚಾರಣೆ ಏ.12ರಂದು ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?