ಕಾಡಲ್ಲಿ ನಿಂತಿದ್ದ ಕಾರಲ್ಲಿತ್ತು ₹40 ಕೋಟಿಯ 52 ಕೆಜಿ ಚಿನ್ನ, ₹11 ಕೋಟಿ ನಗದು! ಯಾರದು ಈ ಸಂಪತ್ತು?

Published : Dec 21, 2024, 06:52 AM IST
ಕಾಡಲ್ಲಿ ನಿಂತಿದ್ದ ಕಾರಲ್ಲಿತ್ತು ₹40 ಕೋಟಿಯ 52 ಕೆಜಿ ಚಿನ್ನ, ₹11 ಕೋಟಿ ನಗದು! ಯಾರದು ಈ ಸಂಪತ್ತು?

ಸಾರಾಂಶ

ಮಧ್ಯಪ್ರದೇಶದ ಮಂಡೋರಾ ಜಿಲ್ಲೆಯ ಮಿಂದೋರಿ ಕಾಡಿನ ನಿರ್ಜನ ಪ್ರದೇಶದಲ್ಲಿ ನಿಂತಿದ್ದ ಇನ್ನೋವಾ ಕಾರಲ್ಲಿ ಬರೋಬ್ಬರಿ 40 ಕೋಟಿ ರು. ಮೌಲ್ಯದ 52 ಕೇಜಿ ಚಿನ್ನ ಮತ್ತು 11 ಕೋಟಿ ರು. ಪತ್ತೆಯಾಗಿದ್ದು, ಇದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ಭೋಪಾಲ್‌ (ಡಿ.21): ಮಧ್ಯಪ್ರದೇಶದ ಮಂಡೋರಾ ಜಿಲ್ಲೆಯ ಮಿಂದೋರಿ ಕಾಡಿನ ನಿರ್ಜನ ಪ್ರದೇಶದಲ್ಲಿ ನಿಂತಿದ್ದ ಇನ್ನೋವಾ ಕಾರಲ್ಲಿ ಬರೋಬ್ಬರಿ 40 ಕೋಟಿ ರು. ಮೌಲ್ಯದ 52 ಕೇಜಿ ಚಿನ್ನ ಮತ್ತು 11 ಕೋಟಿ ರು. ಪತ್ತೆಯಾಗಿದ್ದು, ಇದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ವಾರಸುದಾರರಿಲ್ಲದ ಕಾರಿನಲ್ಲಿ ಏಳೆಂಟು ಬ್ಯಾಗ್‌ಗಳಿರುವುದು ಖಚಿತ ಮಾಹಿತಿ ಸಿಕ್ಕ ಬೆನ್ನಲ್ಲೇ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದು ಹಣ ವಶಪಡಿಸಿಕೊಂಡಿದ್ದಾರೆ. ಈ ಚಿನ್ನ ನಗದು ಯಾರಿಗೆ ಸೇರಿದ್ದೂ ಎನ್ನುವುದು ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ ಇದು ಹಿಂದೆ ಆರ್‌ಟಿಒ ಅಧಿಕಾರಿಯಾಗಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಸೌರಭ್‌ ಶರ್ಮಾ ಅವರಿಗೆ ಸೇರಿದ ಹಣ ಎಂದು ಕೆಲವು ಮೂಲಗಳು ಹೇಳಿವೆ. ಏಕೆಂದರೆ ಹಣ ಪತ್ತೆಯಾಗಿರುವ ಇನ್ನೋವಾ ಕಾರು ಚಂದನ್ ಸಿಂಗ್ ಗೌರ್‌ ಎನ್ನುವ ಬಿಲ್ಡರ್‌ ಹೆಸರಿನಲ್ಲಿ ನೋಂದಣಿಯಾಗಿದೆ ಎಂದು ತಿಳಿದು ಬಂದಿದೆ.

ಮೂಲೆ ಮೂಲೆಯಲ್ಲೂ ಚಿನ್ನ ತುಂಬಿಕೊಂಡಿರುವ ಈ ಕೋಟೆಯಲ್ಲಿವೆ 9 ಅರಮನೆ

ಗುರುವಾರವಷ್ಟೇ ಸೌರಭ್ ಶರ್ಮಾ ಹಾಗೂ ಸಹಚರ ಚಂದನ್ ಸಿಂಗ್ ಗೌರ್‌ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ದಾಳಿ ನಡದಿತ್ತು. . ಶರ್ಮಾ ಮನೆಯಲ್ಲಿ ಈ ವೇಳೆ 2.5 ಕೋಟಿ ರು. ನಗದು, ಚಿನ್ನ, ಬೆಳ್ಳಿ ಆಭರಣಗಳು ಮತ್ತು ಆಸ್ತಿ ದಾಖಲೆಗಳು ಪತ್ತೆಯಾಗಿದ್ದವು. ಈ ಆಸ್ತಿಗಳ ಮೌಲ್ಯವೇ 3 ಕೋಟಿಗೂ ಅಧಿಕವಾಗಿತ್ತು. ಈಗ ಕಾರಲ್ಲಿ ಸಿಕ್ಕ ಹಣ ಮತ್ತು ಚಿನ್ನವೂ ಅವರದ್ದೇ ಎಂದು ಹೇಳಲಾಗಿದೆ. ಅಧಿಕಾರಿಗಳ ಕೈಗೆ ಸಿಗಬಾರದೆಂದು ಅವರು ಹಣ, ಚಿನ್ನವನ್ನು ಹೀಗೆ ಮುಚ್ಚಿಟ್ಟಿರಬಹುದು ಎಂದು ಊಹಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!