
ಶಾದೋಲ್(ಏ.19): ಆಕ್ಸಿಜನ್ ಕೊರತೆಯಿಂದಾಗಿ 6 ಕೊರೋನಾ ಸೋಂಕಿತರು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶ ಶಾದೋಲ್ನಲ್ಲಿ ನಡೆದಿದೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿರುವ ಉಳಿದ 56 ಸೋಂಕಿತರು ಅಪಾಯದಿಂದ ಪಾರಾಗಿದ್ದಾರೆ.
"
ಏನಾಯ್ತು?:
ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 62 ರೋಗಿಗಳು ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದರು. ಆದರೆ ಶನಿವಾರ ಸಂಜೆ ವೇಳೆಗೆ ರೋಗಿಗಳಿಗೆ ಸರಬರಾಜು ಮಾಡುವ ಆಕ್ಸಿಜನ್ ಖಾಲಿಯಾಗುತ್ತಾ ಬಂದಿತ್ತು. ಸಾಕಷ್ಟುಬೇಡಿಕೆಯ ಹೊರತಾಗಿಯೂ ಆಕ್ಸಿಜನ್ ಹೊತ್ರ ವಾಹನಗಳು ರಾತ್ರಿವರೆಗೂ ಆಸ್ಪತ್ರೆಗೆ ತಲುಪಿರಲಿಲ್ಲ. ಹೀಗಾಗಿ ರೋಗಿಗಳಿಗೆ ಪೂರೈಸುವ ಆಕ್ಸಿಜನ್ ಪ್ರಮಾಣವನ್ನು ಇಳಿಕೆ ಮಾಡಲಾಗಿತ್ತು. ಪರಿಣಾಮ ಮಧ್ಯರಾತ್ರಿ ವೇಳೆ ಅಗತ್ಯ ಆಕ್ಸಿಜನ್ ಲಭ್ಯವಾಗದೇ 6 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ತೀವ್ರ ದಿಗ್ಬ್ರಮೆ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಕಮಲ್ನಾಥ್, ಭೋಪಾಲ್, ಇಂದೋರ್, ಉಜ್ಜಯಿನಿ, ಸಾಗರ್, ಜಬಲ್ಪುರ, ಖಾಂಡ್ವಾ, ಖರ್ಗೋನ್ನಲ್ಲಿ ಆಕ್ಸಿಜನ್ ಇಲ್ಲದೇ ಸೋಂಕಿತರ ಸಾವಿನ ಹೊರತಾಗಿಯೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದೇ ಹೋದದ್ದು ದುರಂತ. ಇನ್ನಷ್ಟುಜನರ ಸಾವಿಗೆ ಸರ್ಕಾರ ಕಾಯುತಿದೆ ಎಂದು ಕಿಡಿಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ