
ಮುಂಬೈ: ಉದ್ಯಮಿಯೊಬ್ಬರಿಗೆ 60 ಕೋಟಿ ರು. ವಂಚಿಸಿರುವ ಆರೋಪ ಎದುರಿಸುತ್ತಿರುವ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ, ‘500 ಹಾಗೂ 1000 ರು. ನೋಟು ರದ್ದತಿ ಕಾರಣ ಉದ್ಯಮಕ್ಕೆ ಭಾರೀ ನಷ್ಟವಾಗಿದ್ದರಿಂದ ಸಾಲ ಮರುಪಾವತಿಸಲು ಸಾಧ್ಯವಾಗಲಿಲ್ಲ’ ಎಂದು ಹೇಳಿದ್ದಾರೆ.
ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎದುರು ವಿಚಾರಣೆಗೆ ಹಾಜರಾದ ರಾಜ್, ‘ನಮ್ಮ ಕಂಪನಿ ಎಲೆಕ್ಟ್ರಿಕಲ್ ಮತ್ತು ಗೃಹೋಪಯೋಗಿ ವಸ್ತುಗಳ ವ್ಯಾಪಾರ ಮಾಡುತ್ತಿತ್ತು. ಆದರೆ 2016ರಲ್ಲಿ ಕೇಂದ್ರ ಸರ್ಕಾರ 500 ರು. ಮತ್ತು 1000 ರು. ಮುಖಬೆಲೆಯ ನೋಟು ರದ್ದುಗೊಳಿಸಿದ್ದರಿಂದ ಉದ್ಯಮಕ್ಕೆ ನಷ್ಟವಾಯಿತು’ ಎಂದಿದ್ದಾರೆ.
ಶಾಪಿಂಗ್ ವೇದಿಕೆಯಾಗಿರುವ ‘ಬೆಸ್ಟ್ ಡೀಲ್ ಟಿವಿ’ಯ ಸಹ-ಸಂಸ್ಥಾಪಕರಾಗಿರುವ ಶಿಲ್ಪಾ ಹಾಗೂ ರಾಜ್, ದೀಪಕ್ ಕೊಠಾರಿಗೆ ಔದ್ಯಮಿಕ ಉದ್ದೇಶಕ್ಕೆಂದು 60 ಕೋಟಿ ರು. ಸಾಲ ಪಡೆದು ಅನ್ಯ ಕಾರ್ಯಕ್ಕೆ ಬಳಸಿದ್ದರು. ಅಷ್ಟರಲ್ಲೇ ಕಂಪನಿ ದಿವಾಳಿಯಾಗಿದ್ದರಿಂದ ಸಾಲ ಕಟ್ಟಿರಲಿಲ್ಲ ಎಂಬ ಆರೋಪವಿದೆ. ಈ ಸಂಬಂಧ ರಾಜ್ 2 ಬಾರಿ ಹಾಗೂ ಶಿಲ್ಪಾ ಒಮ್ಮೆ ವಿಚಾರಣೆಗೆ ಒಳಗಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ